Homeಕರ್ನಾಟಕಕುರಿಗಾಹಿಗೆ ಕೊರೊನಾ - ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

- Advertisement -
- Advertisement -

ಕುರಿಗಾಹಿಗೆ ಕೊರೊನಾ ಬಂದ ಕಾರಣಕ್ಕೆ ಅವನ 45 ಕುರಿಗಳನ್ನು ಕ್ವಾರಂಟೈನ್ ಮಾಡಿರುವ ಅಪರೂಪದ ಪ್ರಸಂಗ ತುಮಕೂರು ಜಿಲ್ಲೆಯ ಚಿಕ್ಕನಾಯನಕಹಳ್ಳಿ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಇದು ಅಕ್ಕಪಕ್ಕದ ಗೊಲ್ಲರಹಟ್ಟಿಗಳ ಜನರು ಆತಂಕಗೊಳ್ಳುವಂತೆ ಮಾಡಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತಿದೆ ಈ ಪ್ರಕರಣ. ಅಷ್ಟೇ ಅಲ್ಲದೇ ಸಚಿವ ಮಾಧುಸ್ವಾಮಿಯವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯ ಇಲಾಖೆಯ ಉಪ ನಿರ್ದೇಶಕರೂ ಗ್ರಾಮಕ್ಕೆ ತೆರಳಿ ಕುರಿಗಳ ಗಂಟಲು ಸ್ರಾವವನ್ನು ಪರೀಕ್ಷೆಗೆ ಕಳಿಸಲಾಗಿದೆ.

ಹೌದು! ಇದೊಂದು ವಿಶೇಷ ಪ್ರಕರಣ. ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿ ಯುವಕನಿಗೆ ಕೊರೊನ ಸೋಂಕು ದೃಢಪಟ್ಟು ಆತನನ್ನು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿ ಇಡಲಾಗಿದೆ. ಕುರಿಗಾಹಿಗೆ ಸೋಂಕು ಬಂದಮೇಲೆ ಕುರಿಗಳಿಗೂ ಅಂಟಿರಬಹುದೆಂದು ಜಿಲ್ಲಾಕೇಂದ್ರದಲ್ಲಿ ಕುಳಿತು ಸಚಿವರು ಕುರಿಗಳನ್ನು ಕ್ವಾರಂಟೈನ್ ಮಾಡುವಂತೆ ಆದೇಶಿಸಿದ್ದಾರೆ. ಹಾಗಾಗಿ 45 ಕುರಿಗಳನ್ನು ಪ್ರತ್ಯೇಕವಾಗಿ ಕೂಡಿಡಲಾಗಿದೆ.

ಸಚಿವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ ತಂಡ ಗೋಡೆಕೆರೆ ಗೊಲ್ಲರಹಟ್ಟಿಗೆ ತೆರಳಿ ಕುರಿಗಳ ತಪಾಸಣೆ ನಡೆಸಿದ್ದಾರೆ. ಕುರಿಗಳ ಗಂಟಲು ಸ್ರಾವವನ್ನು ತೆಗೆದ ಪಶುವೈದ್ಯರ ತಂಡ ಭೂಫಾಲ್ ವೈರಾಲಜಿ ಸೆಂಟರ್ ಗೆ ಕಳಿಸಿಕೊಟ್ಟಿದೆ. ಇದರಿಂದ ಜನರೂ ಕೂಡ ಭೀತಿಗೆ ಒಳಗಾಗಿದ್ದು ಏನಾಗುವುದೋ ಏಂಬ ಆತಂಕ ಮನೆ ಮಾಡಿದೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ “ಪ್ರಾಣಿಗಳಿಗೆ ಕೊರೊನಾ ಸೋಂಕು ಹರಡುವುದಿಲ್ಲ. ಆದರೆ ನಾಲ್ಕು ಕುರಿಗಳು ಸತ್ತ ಹಿನ್ನೆಲೆಯಲ್ಲಿ ಜನರು ಭೀತರಾಗಿದ್ದರು. ಆದ್ದರಿಂದ ಕುರಿಗಳ ಸ್ರಾವವನ್ನು ಭೋಪಾಲ್ ಕೇಂದ್ರಕ್ಕೆ ಪರೀಕ್ಷೆಗೆ ಕಳಿಸಿದ್ದೇವೆ. ಬೆಂಗಳೂರಿಗೂ ಕಳಿಸಿದ್ದೇವೆ. ಕುರಿಗಳನ್ನು ಪ್ರತ್ಯೇಕವಾಗಿಡಲಾಗಿದೆ. ಸೋಂಕಿತ ಕುರಿಗಾಹಿ ತುಮಕೂರಿನಲ್ಲಿದ್ದರೆ ತಂದೆ ತಾಯಿ ತಾಲೂಕು ಆಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದಾರೆ.

ಸದ್ಯಕ್ಕೆ ಕುರಿ ನೋಡಿಕೊಳ್ಳಲು ಯಾರೂ ಇಲ್ಲ. ಜೊತೆಗೆ ಕುರಿ ಸಾವನ್ನಪ್ಪಿರುವುದರಿಂದ ಬೇರೆ ಪ್ರಾಣಿಗಳಿಗೆ ರೋಗ ಅಂಟಬಾರದು ಎಂಬ ಉದ್ದೇಶದಿಂದ ಕೊರೊನಾ ಸೋಂಕಿತ ವ್ಯಕ್ತಿಯ ಕುರಿಗಳನ್ನು ಪ್ರತ್ಯೇಕವಾಗಿ ಇರಿಸಿದ್ದೇವೆ. ಅದು ಕ್ವಾರಂಟೈನ್ ಅಲ್ಲ. ಜನರು ಕೂಡ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಮತ್ತು ಕುರಿಗಳನ್ನು ಕ್ವಾರಂಟೈನ್ ಮಾಡುವ ವಿಷಯ ಜನರಲ್ಲಿ ಹಲವು ರೀತಿಯ ಗೊಂದಲ ಹುಟ್ಟುಹಾಕಿದೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವ ಮುಖಂಡ ಸಾಸಲು ಸತೀಶ್, ನಿಜವಾಗಿಯೂ ಕೊರೊನಾ ಸೋಂಕು ಬಂದಿರುವುದೇ ಬೇರೆ ಯುವಕನಿಗೆ. ಕುರಿಗಳು ಆ ಯುವಕನಿಗೆ ಸೇರಿದವಲ್ಲ. ಕುರಿಗಳನ್ನು ಕ್ವಾರಂಟೈನ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳುವ ಮೂಲಕ ಜನರಿಗೆ ತಪ್ಪು ಸಂದೇಶ ಹೋಗುವಂತೆ ಮಾಡಿದ್ದಾರೆ. ಕುರಿ ಮಾಲಿಕರ ಕುಟುಂಬವನ್ನು ಉಳಿದವರು ವಿಲನ್ ಅಂತೆ ನೋಡುವಂತಹ ಪರಿಸ್ಥಿತಿ ಸೃಷ್ಟಿ ಮಾಡಿದ್ದಾರೆ ಸೂಕ್ಷ್ಮ ವಿಚಾರಗಳನ್ನು ದೊಡ್ಡದು ಮಾಡುವ ಬದಲು ಗೊತ್ತಿಲ್ಲದೆ ಬಗೆಹರಿಸಬಹುದಿತ್ತು. ಸ್ಥಳಕ್ಕೆ ಬಂದು ನೋಡದ ಸಚಿವ ಮಾಧುಸ್ವಾಮಿ ಮತ್ತು ಜಿಲ್ಲಾಧಿಕಾರಿಗಳು ಹೀಗೆ ಆದೇಶ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...