Homeಕರ್ನಾಟಕಕೊರೊನಾ ಪಾಸಿಟಿವ್: ತುಮಕೂರಿನ ಪಿಎಚ್ ಕಾಲೋನಿ ಸೀಲ್ ಡೌನ್

ಕೊರೊನಾ ಪಾಸಿಟಿವ್: ತುಮಕೂರಿನ ಪಿಎಚ್ ಕಾಲೋನಿ ಸೀಲ್ ಡೌನ್

- Advertisement -
- Advertisement -

ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ಕಂಡು ಬಂದಿರುವುದರಿಂದ ತುಮಕೂರಿನ ಪಿ.ಎಚ್.ಕಾಲೋನಿಯನ್ನು ಸಂಫೂರ್ಣ ಸೀಲ್ ಡೌನ್ ಮಾಡಲಾಗಿದೆ.

ರಾತ್ರಿಯೇ ಸುಮಾರು 400ಕ್ಕೂ ಹೆಚ್ಚು ಪೊಲೀಸರು ಆಗಮಿಸಿ ಪಿ.ಎಚ್.ಕಾಲೋನಿಯ ಪ್ರತಿಯೊಂದು ರಸ್ತೆಯಲ್ಲೂ ಬ್ಯಾರಿಕೇಡ್ ಗಳನ್ನು ಹಾಕಿ ಸೀಲ್ ಡೌನ್ ಮಾಡಿದ್ದಾರೆ.

ಕೊರೊನಾ ಸೋಂಕು ಇರುವ ವ್ಯಕ್ತಿಯನ್ನು ಕರೆದುಕೊಂಡು ಹೋಗಲಾಗಿದೆ. ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿನಲ್ಲಿ ಪಿ.ಎಚ್.ಕಾಲೋನಿಗೆ ತೆರಳಿದ ಅಂಬುಲೆನ್ಸ್ ಗಳು ಸೋಂಕಿತ ವ್ಯಕ್ತಿಯನ್ನು ವಾಹನದಲ್ಲಿ ಕರೆದುಕೊಂಡು ಹೋಗಿದ್ದು ಅವರನ್ನು ಎಲ್ಲಿಡಲಾಗಿದೆ ಎಂಬುದು ತಿಳಿದುಬಂದಿಲ್ಲ.

ಸೋಂಕಿತ ವ್ಯಕ್ತಿಯು ಪ್ರಾರ್ಥನಾ ಮಂದಿರದಲ್ಲೇ ಇದ್ದರೆನ್ನಲಾಗಿದ್ದು, ಅವರ ಜೊತೆ ಯಾರ್ಯಾರು ಸಂಪರ್ಕ ಹೊಂದಿದ್ದರು ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಲಾಕ್ ಡೌನ್ ಆದ ನಂತರ ಇದೇ ಮೊದಲ ಬಾರಿಗೆ ತುಮಕೂರು ನಗರದ ಪಿ.ಎಚ್.ಕಾಲೋನಿ ಸೀಲ್ ಡೌನ್ ಗೆ ಒಳಗಾಗಿದೆ.

ಪಿ.ಎಚ್.ಕಾಲೋನಿಗೆ ಯಾರನ್ನು ಒಳಗೆ ಬಿಡುತ್ತಿಲ್ಲ. ಹೊರಗಿನವರನ್ನು ಒಳಗೆ ಹೋಗಲು ಅವಕಾಶ ನೀಡುತ್ತಿಲ್ಲ. ಬಿ.ಜಿ. ಪಾಳ್ಯ ವೃತ್ತ, ತಿಲಕ್ ಪಾರ್ಕ್ ಪೊಲೀಸ್ ಠಾಣೆಯ ಕಡೆಯಿಂದ ಪ್ರವೇಶಿಸಲು ಇರುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

ಈ ಹಿಂದೆ ತುಮಕೂರಿನ ಶಿರಾದಲ್ಲಿ ವೃದ್ಧರೊಬ್ಬರು ಕೊರೊನಾಗೆ ಬಲಿಯಾಗಿದ್ದರು. ಇನ್ನೊಬ್ಬ ಯುವಕನಿಗೆ ಸೋಂಕು ಇರುವುದು ಪತ್ತೆಯಾಗಿತ್ತು. ಅವರನ್ನು ಜಿಲ್ಲಾಸ್ಪತ್ರೆಯ ಐಸೋಲೇಷನ್ ನಲ್ಲಿಟ್ಟ ಬಳಿಕ ಗುಣಮುಖನಾಗಿದ್ದರು.

ನಗರಕ್ಕೆ ವಿದೇಶದಿಂದ ಬಂದವರ ಮೇಲೆ ನಿಗಾ ಇಡಲಾಗಿತ್ತು. ಕೆಲವರನ್ನು ಹೋಂ ಕ್ವಾರಂಟೈನ್ ನಲ್ಲಿ ಮತ್ತೆ ಕೆಲವರನ್ನು ಐಸೋಲೇಷನ್ ವಾರ್ಡ್ ನಲ್ಲಿ ಇಡಲಾಗಿತ್ತು. ಲಾಕ್ ಡೌನ್ ಎರಡನೇ ಹಂತದಲ್ಲಿ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದ್ದು ಸೋಂಕು ತಡೆಗೆ ಜಿಲ್ಲಾಡಳಿತ ತೀವ್ರ ನಿಗಾ ಇಟ್ಟಿದೆ.


ಇದನ್ನೂ ಓದಿ: ತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ? 

ವಿಡಿಯೊ ನೊಡಿ:ಕೊರೊನಾಗೆ ಚಿಕಿತ್ಸೆ ಏನು? ವ್ಯಾಕ್ಸೀನ್‌ ತಯಾರಿ ಎಲ್ಲಿಯವರೆಗೆ ಬಂದಿದೆ? ಅಂತಿಮ ಪರಿಹಾರ ಏನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...