Homeಕರ್ನಾಟಕಕೊರೊನಾ ಪಾಸಿಟಿವ್: ತುಮಕೂರಿನ ಪಿಎಚ್ ಕಾಲೋನಿ ಸೀಲ್ ಡೌನ್

ಕೊರೊನಾ ಪಾಸಿಟಿವ್: ತುಮಕೂರಿನ ಪಿಎಚ್ ಕಾಲೋನಿ ಸೀಲ್ ಡೌನ್

- Advertisement -
- Advertisement -

ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ಕಂಡು ಬಂದಿರುವುದರಿಂದ ತುಮಕೂರಿನ ಪಿ.ಎಚ್.ಕಾಲೋನಿಯನ್ನು ಸಂಫೂರ್ಣ ಸೀಲ್ ಡೌನ್ ಮಾಡಲಾಗಿದೆ.

ರಾತ್ರಿಯೇ ಸುಮಾರು 400ಕ್ಕೂ ಹೆಚ್ಚು ಪೊಲೀಸರು ಆಗಮಿಸಿ ಪಿ.ಎಚ್.ಕಾಲೋನಿಯ ಪ್ರತಿಯೊಂದು ರಸ್ತೆಯಲ್ಲೂ ಬ್ಯಾರಿಕೇಡ್ ಗಳನ್ನು ಹಾಕಿ ಸೀಲ್ ಡೌನ್ ಮಾಡಿದ್ದಾರೆ.

ಕೊರೊನಾ ಸೋಂಕು ಇರುವ ವ್ಯಕ್ತಿಯನ್ನು ಕರೆದುಕೊಂಡು ಹೋಗಲಾಗಿದೆ. ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿನಲ್ಲಿ ಪಿ.ಎಚ್.ಕಾಲೋನಿಗೆ ತೆರಳಿದ ಅಂಬುಲೆನ್ಸ್ ಗಳು ಸೋಂಕಿತ ವ್ಯಕ್ತಿಯನ್ನು ವಾಹನದಲ್ಲಿ ಕರೆದುಕೊಂಡು ಹೋಗಿದ್ದು ಅವರನ್ನು ಎಲ್ಲಿಡಲಾಗಿದೆ ಎಂಬುದು ತಿಳಿದುಬಂದಿಲ್ಲ.

ಸೋಂಕಿತ ವ್ಯಕ್ತಿಯು ಪ್ರಾರ್ಥನಾ ಮಂದಿರದಲ್ಲೇ ಇದ್ದರೆನ್ನಲಾಗಿದ್ದು, ಅವರ ಜೊತೆ ಯಾರ್ಯಾರು ಸಂಪರ್ಕ ಹೊಂದಿದ್ದರು ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಲಾಕ್ ಡೌನ್ ಆದ ನಂತರ ಇದೇ ಮೊದಲ ಬಾರಿಗೆ ತುಮಕೂರು ನಗರದ ಪಿ.ಎಚ್.ಕಾಲೋನಿ ಸೀಲ್ ಡೌನ್ ಗೆ ಒಳಗಾಗಿದೆ.

ಪಿ.ಎಚ್.ಕಾಲೋನಿಗೆ ಯಾರನ್ನು ಒಳಗೆ ಬಿಡುತ್ತಿಲ್ಲ. ಹೊರಗಿನವರನ್ನು ಒಳಗೆ ಹೋಗಲು ಅವಕಾಶ ನೀಡುತ್ತಿಲ್ಲ. ಬಿ.ಜಿ. ಪಾಳ್ಯ ವೃತ್ತ, ತಿಲಕ್ ಪಾರ್ಕ್ ಪೊಲೀಸ್ ಠಾಣೆಯ ಕಡೆಯಿಂದ ಪ್ರವೇಶಿಸಲು ಇರುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

ಈ ಹಿಂದೆ ತುಮಕೂರಿನ ಶಿರಾದಲ್ಲಿ ವೃದ್ಧರೊಬ್ಬರು ಕೊರೊನಾಗೆ ಬಲಿಯಾಗಿದ್ದರು. ಇನ್ನೊಬ್ಬ ಯುವಕನಿಗೆ ಸೋಂಕು ಇರುವುದು ಪತ್ತೆಯಾಗಿತ್ತು. ಅವರನ್ನು ಜಿಲ್ಲಾಸ್ಪತ್ರೆಯ ಐಸೋಲೇಷನ್ ನಲ್ಲಿಟ್ಟ ಬಳಿಕ ಗುಣಮುಖನಾಗಿದ್ದರು.

ನಗರಕ್ಕೆ ವಿದೇಶದಿಂದ ಬಂದವರ ಮೇಲೆ ನಿಗಾ ಇಡಲಾಗಿತ್ತು. ಕೆಲವರನ್ನು ಹೋಂ ಕ್ವಾರಂಟೈನ್ ನಲ್ಲಿ ಮತ್ತೆ ಕೆಲವರನ್ನು ಐಸೋಲೇಷನ್ ವಾರ್ಡ್ ನಲ್ಲಿ ಇಡಲಾಗಿತ್ತು. ಲಾಕ್ ಡೌನ್ ಎರಡನೇ ಹಂತದಲ್ಲಿ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದ್ದು ಸೋಂಕು ತಡೆಗೆ ಜಿಲ್ಲಾಡಳಿತ ತೀವ್ರ ನಿಗಾ ಇಟ್ಟಿದೆ.


ಇದನ್ನೂ ಓದಿ: ತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ? 

ವಿಡಿಯೊ ನೊಡಿ:ಕೊರೊನಾಗೆ ಚಿಕಿತ್ಸೆ ಏನು? ವ್ಯಾಕ್ಸೀನ್‌ ತಯಾರಿ ಎಲ್ಲಿಯವರೆಗೆ ಬಂದಿದೆ? ಅಂತಿಮ ಪರಿಹಾರ ಏನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...