Homeಚಳವಳಿಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ಬಡವರು ಕೆಲಸ ಮಾಡುವ ಕಂಪನಿಗಳಲ್ಲಿ ರಜೆ ನೀಡುತ್ತಿಲ್ಲ. ರಜೆ ನೀಡಿದರೆ ಸಂಬಳ ಸಹಿತ ರಜೆ ನೀಡಬೇಕಾಗುತ್ತದೆ ಎಂಬುದು ಕಂಪನಿಗಳ ಅಂಬೋಣ.

- Advertisement -
- Advertisement -

ಕೊರೊನಾ ವೈರಸ್ ಹರಡದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ ಸಂಗತಿ. ಇದೇ ಉದ್ದೇಶದಿಂದ ನೂರಾರು, ಸಾವಿರಾರು ಮಂದಿ ಸೇರುವ ಸಭೆ-ಸಮಾರಂಭಗಳನ್ನು ರದ್ದುಪಡಿಸಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೆ ನಿರ್ಬಂಧಿಸಿದೆ ಹೇರಿದೆ. ಫುಡ್ ಜಂಕ್ಷನ್‌ಗಳನ್ನು ನಿಷೇಧಿಸಿದೆ. ಬೀದಿಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸಿದ್ದು ಆಗಿದೆ. ಅದ್ದೂರಿ ಮದುವೆಗಳಿಗೂ ಬ್ರೇಕ್ ಬಿದ್ದಿದೆ. ಹೋಟೆಲ್‌ಗಳಿಗೂ ಮುಚ್ಚುವಂತೆ ಆದೇಶಿಸಲಾಗಿದೆ. ಹಣವಂತರು ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ ಬಡವರು ಕೆಲಸವಿಲ್ಲದೆ ಮನೆಯಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕರಿಗೆ ನಿಯಮ ಅನ್ವಯ  ಆದರೆ ಬಹುತೇಕರಿಗೆ ಅದು ಲೆಕ್ಕಕ್ಕಿಲ್ಲ. ಸರ್ಕಾರದ ಅದೇಶ ಗಾರ್ಮೆಂಟ್ಸ್ ಮತ್ತು ದೊಡ್ಡದೊಡ್ಡ ಕಂಪನಿಗಳಿಗೆ ಅನ್ವಯವಾಗುವುದಿಲ್ಲ ಏಕೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿನ ಐಟಿ-ಬಿಟಿ ಕ್ಷೇತ್ರದ ಕಂಪನಿಗಳು ತಮ್ಮ ಕಾರ್ಮಿಕರನ್ನು ಮನೆಯಲ್ಲಿಯೇ ಕುಳಿತು ಕೆಲಸ ಮಾಡುವಂತೆ ಸೂಚನೆ ನೀಡಿವೆ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾ, ಬಿಡದಿ, ಬೊಮ್ಮಸಂದ್ರ, ಅತ್ತಿಬೆಲೆ, ವೀರಸಂದ್ರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ದೊಡ್ಡದೊಡ್ಡ ಕಂಪನಿಗಳು, ಕಾರ್ಖಾನೆಗಳು ಮತ್ತು ಗಾರ್ಮೆಂಟ್ ಗಳಿಗೆ ಸರ್ಕಾರದ ಆದೇಶ ಅನ್ವಯವಾಗುತ್ತಿಲ್ಲ. ನೂರಾರು ಮಂದಿ ಕಾರ್ಮಿಕರು ಅಕ್ಕ- ಪಕ್ಕದಲ್ಲಿಯೇ ನಿಂತು ಕೆಲಸ ಮಾಡುವ ಜಾಗದಲ್ಲಿ ಕೊರೊನಾ ಹರಡುವುದಿಲ್ಲವೇ ಎಂಬ ಪ್ರಶ್ನೆ ಎದ್ದಿದೆ. ಗಾರ್ಮೆಂಟ್ಸ್‌ಗಳಲ್ಲಿ ಮಹಿಳಾ ಕಾರ್ಮಿಕರು ಸಾಮೂಹಿಕವಾಗಿಯೇ ಕುಳಿತು ಒಬ್ಬರನ್ನೊಬ್ಬರು ಮುಟ್ಟುತ್ತ ಕೆಲಸ ಮಾಡುವಂತಹ ಪರಿಸ್ಥಿತಿ ಇದೆ. ಒಂದು ಅಂದಾಜಿನ ಪ್ರಕಾರ 10 ಲಕ್ಷ ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್‌ನಲ್ಲಿ ದುಡಿಯುತ್ತಿದ್ದಾರೆ. ಆ ಕಾರ್ಮಿಕರೆಲ್ಲ ಬೇರೆಬೇರೆ ಪ್ರದೇಶದಿಂದ ಬರುತ್ತಾರೆ. ಹಾಗಿದ್ದಾಗ ಅವರಿಗೂ ಕೊರೊನಾ ವೈರಸ್ ಹರಡುತ್ತದಲ್ಲವೇ? ಸರ್ಕಾರ ಒಬ್ಬರಿಗೆ ಒಂದು ನೀತಿ ಮತ್ತೊಬ್ಬರಿಗೆ ಒಂದು ನೀತಿ ಅನುಸರಿಸುತ್ತಿರುವುದು ತಪ್ಪಲ್ಲವೇ?

ಬೆಂಗಳೂರಿನ ಉಪನಗರವೆಂದೇ ಬಿಂಬಿಸಲಾಗುತ್ತಿರುವ ತುಮಕೂರಿನಲ್ಲೂ ಕೂಡ ಹಲವು ಕಾರ್ಖಾನೆಗಳು, ಕಂಪನಿಗಳು ಮತ್ತು ಗಾರ್ಮೆಂಟ್ಸ್‌ಗಳು ಇವೆ. ಡಾಬಸ್‌ಪೇಟೆಯ ಬಳಿ ಸೋಂಪುರ ಕೈಗಾರಿಕಾ ಪ್ರದೇಶವಿದೆ. ತುಮಕೂರಿನ ವಸಂತ ನರಸಾಪುರದಲ್ಲಿ ಖಾಸಗಿ ಸಹಭಾಗಿತ್ವದ ಫುಡ್ ಪಾರ್ಕಿನಲ್ಲಿ ಕಾಯಂ, ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ 800 ಕಾರ್ಮಿಕರಿದ್ದಾರೆ. ಅಲ್ಲಿಯೂ ಹಲವು ಕಾರ್ಖಾನೆಗಳು ಇವೆ. ಅಂತರಸನಹಳ್ಳಿಯ ಕೈಗಾರಿಕಾ ವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಪ್ತ ಮುಖೇಶ್ ಕುಮಾರ್ ಗಾರ್ಗ್ ಒಡೆತನದ VS ಪ್ರಾಡಕ್ಟ್ (ತಂಬಾಕು), VSN ಪ್ರಾಡಕ್ಟ್ (ಪಾನ್ ಮಸಾಲ), VSN ಪಾನ್ ಪ್ರಾಡಕ್ಟ್ ಪ್ರೈ.ಲಿಮಿಟೆಡ್ ಕಂಪನಿಯಲ್ಲಿ 800 ಮಂದಿ ಏಕಕಾಲದಲ್ಲಿ ಪಾನ್ ಮಸಾಲ, ತಂಬಾಕು ತಯಾರಿಕೆಯಲ್ಲಿ ತೊಡಗಿರುತ್ತಾರೆ. ಸಾಮಾನ್ಯ ಜನರಿಗೆ ಇರುವ ಈ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಜೆ ಇಲ್ಲವೇ?

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಾರ್ಮಿಕ ಮುಖಂಡ ಸೈಯದ್ ಮುಜೀಬ್, ತುಮಕೂರು ನಗರ ವ್ಯಾಪ್ತಿಯಲ್ಲಿ ಸುಮಾರು 400 ಕಾರ್ಖಾನೆಗಳಿವೆ. ನಿತ್ಯವೂ ಬೆಳಗ್ಗೆಯಿಂದ ಸಂಜೆಯವರೆಗೆ ಸಾವಿರಾರು ಬಗೆ ಬಗೆಯ ಕಾರ್ಮಿಕರು ಜೀವ ಪಣಕ್ಕಿಟ್ಟು ದುಡಿಯುತ್ತಿದ್ದಾರೆ. ನಗರದಲ್ಲಿರುವ ಜನರಿಗೆ ಕೊರೊನಾ ವೈರಸ್ ಹರಡುವುದಾದರೆ ಕೈಗಾರಿಕಾ ಕಾರ್ಮಿಕರಿಗೆ ಹರಡುವುದಿಲ್ಲವೇ? ಅವರದ್ದು ಜೀವವಲ್ಲವೇ? ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಒಂದೆಡೆ ಸೇರಿದರೆ ರೋಗ ಹರಡುವ ಬೀತಿ ಇದ್ದರೆ ಒಟ್ಟಾಗಿ ದುಡಿಯುವ ಕಾರ್ಮಿಕರಿಗೆ ಬರುವುದಿಲ್ಲವೇ? ಇಂತಹ ತಾರತಮ್ಯವನ್ನು ಸರ್ಕಾರ ಬಿಡಬೇಕು. ಈ ನಾಡು ಕಟ್ಟುವಲ್ಲಿ, ಆರ್ಥಿಕತೆ ಸೃಷ್ಟಿಸುವಲ್ಲಿ ಮಹಿಳೆಯರ ಪಾಲು ಹೆಚ್ಚಿದೆ. ಅಂಥವರ ಬಗ್ಗೆ ಸರ್ಕಾರ ತಾರತಮ್ಯ ಧೋರಣೆ  ಅನುಸರಿಸುತ್ತಿದೆ. ಅವರಿಗೂ ರಜೆ ಕೊಡಬೇಕು ಎಂದು ಒತ್ತಾಯಿಸಿದರು.

ಟಿಎಂಇಐಸಿ ಕಂಪನಿಯಲ್ಲಿ ಸುಮಾರು 800 ಕಾರ್ಮಿಕರು ದುಡಿಯುತ್ತಾರೆ. ಗುಬ್ಬಿ ಗೇಟ್‌ ಭಾಗದಲ್ಲಿರುವ ಗೋಕುಲ್ ದಾಸ್ ಗಾರ್ಮೆಂಟ್ಸ್ , ಶಾಯಿ ಗಾರ್ಮೆಂಟ್ಸ್‌ನಲ್ಲಿ ಒಬ್ಬರಿಗೊಬ್ಬರು ಅಂತರವಿಲ್ಲದೆ ದುಡಿಯುವ ಪರಿಸ್ಥಿತಿ ಇದೆ. ಎರಡು ಗಾರ್ಮೆಂಟ್ಸ್‌ಗಳಿಂದಲೂ 10 ಸಾವಿರ ಮಂದಿ ಮಹಿಳೆಯರು ದುಡಿಯುತ್ತಿದ್ದಾರೆ. ಅವರಿಗೆ ಯಾವುದೇ ಸುರಕ್ಷತೆ ಇಲ್ಲ. ಮಾಸ್ಕ್ ಕೂಡ ಹಾಕಿಕೊಳ್ಳುತ್ತಿಲ್ಲ. ಪ್ರತಿಯೊಬ್ಬರೂ ಸ್ಪರ್ಶಿಸಿಕೊಂಡೇ ಕೆಲಸ ಮಾಡಬೇಕು. 100ಕ್ಕೂ ಹೆಚ್ಚು ಮಂದಿ ಸೇರುವ ಸಭೆ ಸಮಾಂಭಗಳು, ಮದುವೆಗಳು, ಪುಡ್ ಜಂಕ್ಷನ್ ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮುಚ್ಚುವುದಾದರೆ ಇಲ್ಲೂ ಹಾಗೆ ಮಾಡಬೇಕಲ್ಲವೇ?  ಕಾರ್ಮಿಕರು ಕೆಲಸ ಮಾಡಲು ಸರ್ಕಾರ ಅವಕಾಶ ನೀಡಿ ಕೇವಲ ನಗರದಲ್ಲಿರುವವರನ್ನು ಮಾತ್ರ ರಕ್ಷಿಸಲು ಹೊರಟಿದೆಯೇ? ಈ ಪ್ರಶ್ನೆಗೆ ಉತ್ತರವಿಲ್ಲ.

ಬಡವರು ಕೆಲಸ ಮಾಡುವ ಕಂಪನಿಗಳಲ್ಲಿ ರಜೆ ನೀಡುತ್ತಿಲ್ಲ. ರಜೆ ನೀಡಿದರೆ ಸಂಬಳ ಸಹಿತ ರಜೆ ನೀಡಬೇಕಾಗುತ್ತದೆ ಎಂಬುದು ಕಂಪನಿಗಳ ಅಂಬೋಣ. ಅಂದರೆ ಇಷ್ಟು ದಿನ ಆ ಕಂಪನಿಗಾಗಿ ದುಡಿದವರಿಗೆ ಕಷ್ಟಕಾಲದಲ್ಲಿ ರಜೆ ಕೊಡಲು ಈ ಕಂಪನಿಗಳು ಹಿಂದೆ ಮುಂದೆ ನೋಡುತ್ತಿವೆ. ಸರ್ಕಾರಗಳು ಸಹ ಇವರನ್ನು ಮಾತಾಡಿಸುವುದಿಲ್ಲ. ದಿನ ದಿನದ ಲಾಭವಷ್ಟೇ ಮುಖ್ಯ ಹೊರತು ಬಡವರ ಪ್ರಾಣಗಳಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...