Homeಚಳವಳಿಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ಬಡವರು ಕೆಲಸ ಮಾಡುವ ಕಂಪನಿಗಳಲ್ಲಿ ರಜೆ ನೀಡುತ್ತಿಲ್ಲ. ರಜೆ ನೀಡಿದರೆ ಸಂಬಳ ಸಹಿತ ರಜೆ ನೀಡಬೇಕಾಗುತ್ತದೆ ಎಂಬುದು ಕಂಪನಿಗಳ ಅಂಬೋಣ.

- Advertisement -
- Advertisement -

ಕೊರೊನಾ ವೈರಸ್ ಹರಡದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ ಸಂಗತಿ. ಇದೇ ಉದ್ದೇಶದಿಂದ ನೂರಾರು, ಸಾವಿರಾರು ಮಂದಿ ಸೇರುವ ಸಭೆ-ಸಮಾರಂಭಗಳನ್ನು ರದ್ದುಪಡಿಸಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೆ ನಿರ್ಬಂಧಿಸಿದೆ ಹೇರಿದೆ. ಫುಡ್ ಜಂಕ್ಷನ್‌ಗಳನ್ನು ನಿಷೇಧಿಸಿದೆ. ಬೀದಿಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸಿದ್ದು ಆಗಿದೆ. ಅದ್ದೂರಿ ಮದುವೆಗಳಿಗೂ ಬ್ರೇಕ್ ಬಿದ್ದಿದೆ. ಹೋಟೆಲ್‌ಗಳಿಗೂ ಮುಚ್ಚುವಂತೆ ಆದೇಶಿಸಲಾಗಿದೆ. ಹಣವಂತರು ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ ಬಡವರು ಕೆಲಸವಿಲ್ಲದೆ ಮನೆಯಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕರಿಗೆ ನಿಯಮ ಅನ್ವಯ  ಆದರೆ ಬಹುತೇಕರಿಗೆ ಅದು ಲೆಕ್ಕಕ್ಕಿಲ್ಲ. ಸರ್ಕಾರದ ಅದೇಶ ಗಾರ್ಮೆಂಟ್ಸ್ ಮತ್ತು ದೊಡ್ಡದೊಡ್ಡ ಕಂಪನಿಗಳಿಗೆ ಅನ್ವಯವಾಗುವುದಿಲ್ಲ ಏಕೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿನ ಐಟಿ-ಬಿಟಿ ಕ್ಷೇತ್ರದ ಕಂಪನಿಗಳು ತಮ್ಮ ಕಾರ್ಮಿಕರನ್ನು ಮನೆಯಲ್ಲಿಯೇ ಕುಳಿತು ಕೆಲಸ ಮಾಡುವಂತೆ ಸೂಚನೆ ನೀಡಿವೆ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾ, ಬಿಡದಿ, ಬೊಮ್ಮಸಂದ್ರ, ಅತ್ತಿಬೆಲೆ, ವೀರಸಂದ್ರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ದೊಡ್ಡದೊಡ್ಡ ಕಂಪನಿಗಳು, ಕಾರ್ಖಾನೆಗಳು ಮತ್ತು ಗಾರ್ಮೆಂಟ್ ಗಳಿಗೆ ಸರ್ಕಾರದ ಆದೇಶ ಅನ್ವಯವಾಗುತ್ತಿಲ್ಲ. ನೂರಾರು ಮಂದಿ ಕಾರ್ಮಿಕರು ಅಕ್ಕ- ಪಕ್ಕದಲ್ಲಿಯೇ ನಿಂತು ಕೆಲಸ ಮಾಡುವ ಜಾಗದಲ್ಲಿ ಕೊರೊನಾ ಹರಡುವುದಿಲ್ಲವೇ ಎಂಬ ಪ್ರಶ್ನೆ ಎದ್ದಿದೆ. ಗಾರ್ಮೆಂಟ್ಸ್‌ಗಳಲ್ಲಿ ಮಹಿಳಾ ಕಾರ್ಮಿಕರು ಸಾಮೂಹಿಕವಾಗಿಯೇ ಕುಳಿತು ಒಬ್ಬರನ್ನೊಬ್ಬರು ಮುಟ್ಟುತ್ತ ಕೆಲಸ ಮಾಡುವಂತಹ ಪರಿಸ್ಥಿತಿ ಇದೆ. ಒಂದು ಅಂದಾಜಿನ ಪ್ರಕಾರ 10 ಲಕ್ಷ ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್‌ನಲ್ಲಿ ದುಡಿಯುತ್ತಿದ್ದಾರೆ. ಆ ಕಾರ್ಮಿಕರೆಲ್ಲ ಬೇರೆಬೇರೆ ಪ್ರದೇಶದಿಂದ ಬರುತ್ತಾರೆ. ಹಾಗಿದ್ದಾಗ ಅವರಿಗೂ ಕೊರೊನಾ ವೈರಸ್ ಹರಡುತ್ತದಲ್ಲವೇ? ಸರ್ಕಾರ ಒಬ್ಬರಿಗೆ ಒಂದು ನೀತಿ ಮತ್ತೊಬ್ಬರಿಗೆ ಒಂದು ನೀತಿ ಅನುಸರಿಸುತ್ತಿರುವುದು ತಪ್ಪಲ್ಲವೇ?

ಬೆಂಗಳೂರಿನ ಉಪನಗರವೆಂದೇ ಬಿಂಬಿಸಲಾಗುತ್ತಿರುವ ತುಮಕೂರಿನಲ್ಲೂ ಕೂಡ ಹಲವು ಕಾರ್ಖಾನೆಗಳು, ಕಂಪನಿಗಳು ಮತ್ತು ಗಾರ್ಮೆಂಟ್ಸ್‌ಗಳು ಇವೆ. ಡಾಬಸ್‌ಪೇಟೆಯ ಬಳಿ ಸೋಂಪುರ ಕೈಗಾರಿಕಾ ಪ್ರದೇಶವಿದೆ. ತುಮಕೂರಿನ ವಸಂತ ನರಸಾಪುರದಲ್ಲಿ ಖಾಸಗಿ ಸಹಭಾಗಿತ್ವದ ಫುಡ್ ಪಾರ್ಕಿನಲ್ಲಿ ಕಾಯಂ, ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ 800 ಕಾರ್ಮಿಕರಿದ್ದಾರೆ. ಅಲ್ಲಿಯೂ ಹಲವು ಕಾರ್ಖಾನೆಗಳು ಇವೆ. ಅಂತರಸನಹಳ್ಳಿಯ ಕೈಗಾರಿಕಾ ವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಪ್ತ ಮುಖೇಶ್ ಕುಮಾರ್ ಗಾರ್ಗ್ ಒಡೆತನದ VS ಪ್ರಾಡಕ್ಟ್ (ತಂಬಾಕು), VSN ಪ್ರಾಡಕ್ಟ್ (ಪಾನ್ ಮಸಾಲ), VSN ಪಾನ್ ಪ್ರಾಡಕ್ಟ್ ಪ್ರೈ.ಲಿಮಿಟೆಡ್ ಕಂಪನಿಯಲ್ಲಿ 800 ಮಂದಿ ಏಕಕಾಲದಲ್ಲಿ ಪಾನ್ ಮಸಾಲ, ತಂಬಾಕು ತಯಾರಿಕೆಯಲ್ಲಿ ತೊಡಗಿರುತ್ತಾರೆ. ಸಾಮಾನ್ಯ ಜನರಿಗೆ ಇರುವ ಈ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಜೆ ಇಲ್ಲವೇ?

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಾರ್ಮಿಕ ಮುಖಂಡ ಸೈಯದ್ ಮುಜೀಬ್, ತುಮಕೂರು ನಗರ ವ್ಯಾಪ್ತಿಯಲ್ಲಿ ಸುಮಾರು 400 ಕಾರ್ಖಾನೆಗಳಿವೆ. ನಿತ್ಯವೂ ಬೆಳಗ್ಗೆಯಿಂದ ಸಂಜೆಯವರೆಗೆ ಸಾವಿರಾರು ಬಗೆ ಬಗೆಯ ಕಾರ್ಮಿಕರು ಜೀವ ಪಣಕ್ಕಿಟ್ಟು ದುಡಿಯುತ್ತಿದ್ದಾರೆ. ನಗರದಲ್ಲಿರುವ ಜನರಿಗೆ ಕೊರೊನಾ ವೈರಸ್ ಹರಡುವುದಾದರೆ ಕೈಗಾರಿಕಾ ಕಾರ್ಮಿಕರಿಗೆ ಹರಡುವುದಿಲ್ಲವೇ? ಅವರದ್ದು ಜೀವವಲ್ಲವೇ? ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಒಂದೆಡೆ ಸೇರಿದರೆ ರೋಗ ಹರಡುವ ಬೀತಿ ಇದ್ದರೆ ಒಟ್ಟಾಗಿ ದುಡಿಯುವ ಕಾರ್ಮಿಕರಿಗೆ ಬರುವುದಿಲ್ಲವೇ? ಇಂತಹ ತಾರತಮ್ಯವನ್ನು ಸರ್ಕಾರ ಬಿಡಬೇಕು. ಈ ನಾಡು ಕಟ್ಟುವಲ್ಲಿ, ಆರ್ಥಿಕತೆ ಸೃಷ್ಟಿಸುವಲ್ಲಿ ಮಹಿಳೆಯರ ಪಾಲು ಹೆಚ್ಚಿದೆ. ಅಂಥವರ ಬಗ್ಗೆ ಸರ್ಕಾರ ತಾರತಮ್ಯ ಧೋರಣೆ  ಅನುಸರಿಸುತ್ತಿದೆ. ಅವರಿಗೂ ರಜೆ ಕೊಡಬೇಕು ಎಂದು ಒತ್ತಾಯಿಸಿದರು.

ಟಿಎಂಇಐಸಿ ಕಂಪನಿಯಲ್ಲಿ ಸುಮಾರು 800 ಕಾರ್ಮಿಕರು ದುಡಿಯುತ್ತಾರೆ. ಗುಬ್ಬಿ ಗೇಟ್‌ ಭಾಗದಲ್ಲಿರುವ ಗೋಕುಲ್ ದಾಸ್ ಗಾರ್ಮೆಂಟ್ಸ್ , ಶಾಯಿ ಗಾರ್ಮೆಂಟ್ಸ್‌ನಲ್ಲಿ ಒಬ್ಬರಿಗೊಬ್ಬರು ಅಂತರವಿಲ್ಲದೆ ದುಡಿಯುವ ಪರಿಸ್ಥಿತಿ ಇದೆ. ಎರಡು ಗಾರ್ಮೆಂಟ್ಸ್‌ಗಳಿಂದಲೂ 10 ಸಾವಿರ ಮಂದಿ ಮಹಿಳೆಯರು ದುಡಿಯುತ್ತಿದ್ದಾರೆ. ಅವರಿಗೆ ಯಾವುದೇ ಸುರಕ್ಷತೆ ಇಲ್ಲ. ಮಾಸ್ಕ್ ಕೂಡ ಹಾಕಿಕೊಳ್ಳುತ್ತಿಲ್ಲ. ಪ್ರತಿಯೊಬ್ಬರೂ ಸ್ಪರ್ಶಿಸಿಕೊಂಡೇ ಕೆಲಸ ಮಾಡಬೇಕು. 100ಕ್ಕೂ ಹೆಚ್ಚು ಮಂದಿ ಸೇರುವ ಸಭೆ ಸಮಾಂಭಗಳು, ಮದುವೆಗಳು, ಪುಡ್ ಜಂಕ್ಷನ್ ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮುಚ್ಚುವುದಾದರೆ ಇಲ್ಲೂ ಹಾಗೆ ಮಾಡಬೇಕಲ್ಲವೇ?  ಕಾರ್ಮಿಕರು ಕೆಲಸ ಮಾಡಲು ಸರ್ಕಾರ ಅವಕಾಶ ನೀಡಿ ಕೇವಲ ನಗರದಲ್ಲಿರುವವರನ್ನು ಮಾತ್ರ ರಕ್ಷಿಸಲು ಹೊರಟಿದೆಯೇ? ಈ ಪ್ರಶ್ನೆಗೆ ಉತ್ತರವಿಲ್ಲ.

ಬಡವರು ಕೆಲಸ ಮಾಡುವ ಕಂಪನಿಗಳಲ್ಲಿ ರಜೆ ನೀಡುತ್ತಿಲ್ಲ. ರಜೆ ನೀಡಿದರೆ ಸಂಬಳ ಸಹಿತ ರಜೆ ನೀಡಬೇಕಾಗುತ್ತದೆ ಎಂಬುದು ಕಂಪನಿಗಳ ಅಂಬೋಣ. ಅಂದರೆ ಇಷ್ಟು ದಿನ ಆ ಕಂಪನಿಗಾಗಿ ದುಡಿದವರಿಗೆ ಕಷ್ಟಕಾಲದಲ್ಲಿ ರಜೆ ಕೊಡಲು ಈ ಕಂಪನಿಗಳು ಹಿಂದೆ ಮುಂದೆ ನೋಡುತ್ತಿವೆ. ಸರ್ಕಾರಗಳು ಸಹ ಇವರನ್ನು ಮಾತಾಡಿಸುವುದಿಲ್ಲ. ದಿನ ದಿನದ ಲಾಭವಷ್ಟೇ ಮುಖ್ಯ ಹೊರತು ಬಡವರ ಪ್ರಾಣಗಳಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...