Homeಚಳವಳಿಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ಬಡವರು ಕೆಲಸ ಮಾಡುವ ಕಂಪನಿಗಳಲ್ಲಿ ರಜೆ ನೀಡುತ್ತಿಲ್ಲ. ರಜೆ ನೀಡಿದರೆ ಸಂಬಳ ಸಹಿತ ರಜೆ ನೀಡಬೇಕಾಗುತ್ತದೆ ಎಂಬುದು ಕಂಪನಿಗಳ ಅಂಬೋಣ.

- Advertisement -
- Advertisement -

ಕೊರೊನಾ ವೈರಸ್ ಹರಡದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ ಸಂಗತಿ. ಇದೇ ಉದ್ದೇಶದಿಂದ ನೂರಾರು, ಸಾವಿರಾರು ಮಂದಿ ಸೇರುವ ಸಭೆ-ಸಮಾರಂಭಗಳನ್ನು ರದ್ದುಪಡಿಸಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೆ ನಿರ್ಬಂಧಿಸಿದೆ ಹೇರಿದೆ. ಫುಡ್ ಜಂಕ್ಷನ್‌ಗಳನ್ನು ನಿಷೇಧಿಸಿದೆ. ಬೀದಿಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸಿದ್ದು ಆಗಿದೆ. ಅದ್ದೂರಿ ಮದುವೆಗಳಿಗೂ ಬ್ರೇಕ್ ಬಿದ್ದಿದೆ. ಹೋಟೆಲ್‌ಗಳಿಗೂ ಮುಚ್ಚುವಂತೆ ಆದೇಶಿಸಲಾಗಿದೆ. ಹಣವಂತರು ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ ಬಡವರು ಕೆಲಸವಿಲ್ಲದೆ ಮನೆಯಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕರಿಗೆ ನಿಯಮ ಅನ್ವಯ  ಆದರೆ ಬಹುತೇಕರಿಗೆ ಅದು ಲೆಕ್ಕಕ್ಕಿಲ್ಲ. ಸರ್ಕಾರದ ಅದೇಶ ಗಾರ್ಮೆಂಟ್ಸ್ ಮತ್ತು ದೊಡ್ಡದೊಡ್ಡ ಕಂಪನಿಗಳಿಗೆ ಅನ್ವಯವಾಗುವುದಿಲ್ಲ ಏಕೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿನ ಐಟಿ-ಬಿಟಿ ಕ್ಷೇತ್ರದ ಕಂಪನಿಗಳು ತಮ್ಮ ಕಾರ್ಮಿಕರನ್ನು ಮನೆಯಲ್ಲಿಯೇ ಕುಳಿತು ಕೆಲಸ ಮಾಡುವಂತೆ ಸೂಚನೆ ನೀಡಿವೆ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾ, ಬಿಡದಿ, ಬೊಮ್ಮಸಂದ್ರ, ಅತ್ತಿಬೆಲೆ, ವೀರಸಂದ್ರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ದೊಡ್ಡದೊಡ್ಡ ಕಂಪನಿಗಳು, ಕಾರ್ಖಾನೆಗಳು ಮತ್ತು ಗಾರ್ಮೆಂಟ್ ಗಳಿಗೆ ಸರ್ಕಾರದ ಆದೇಶ ಅನ್ವಯವಾಗುತ್ತಿಲ್ಲ. ನೂರಾರು ಮಂದಿ ಕಾರ್ಮಿಕರು ಅಕ್ಕ- ಪಕ್ಕದಲ್ಲಿಯೇ ನಿಂತು ಕೆಲಸ ಮಾಡುವ ಜಾಗದಲ್ಲಿ ಕೊರೊನಾ ಹರಡುವುದಿಲ್ಲವೇ ಎಂಬ ಪ್ರಶ್ನೆ ಎದ್ದಿದೆ. ಗಾರ್ಮೆಂಟ್ಸ್‌ಗಳಲ್ಲಿ ಮಹಿಳಾ ಕಾರ್ಮಿಕರು ಸಾಮೂಹಿಕವಾಗಿಯೇ ಕುಳಿತು ಒಬ್ಬರನ್ನೊಬ್ಬರು ಮುಟ್ಟುತ್ತ ಕೆಲಸ ಮಾಡುವಂತಹ ಪರಿಸ್ಥಿತಿ ಇದೆ. ಒಂದು ಅಂದಾಜಿನ ಪ್ರಕಾರ 10 ಲಕ್ಷ ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್‌ನಲ್ಲಿ ದುಡಿಯುತ್ತಿದ್ದಾರೆ. ಆ ಕಾರ್ಮಿಕರೆಲ್ಲ ಬೇರೆಬೇರೆ ಪ್ರದೇಶದಿಂದ ಬರುತ್ತಾರೆ. ಹಾಗಿದ್ದಾಗ ಅವರಿಗೂ ಕೊರೊನಾ ವೈರಸ್ ಹರಡುತ್ತದಲ್ಲವೇ? ಸರ್ಕಾರ ಒಬ್ಬರಿಗೆ ಒಂದು ನೀತಿ ಮತ್ತೊಬ್ಬರಿಗೆ ಒಂದು ನೀತಿ ಅನುಸರಿಸುತ್ತಿರುವುದು ತಪ್ಪಲ್ಲವೇ?

ಬೆಂಗಳೂರಿನ ಉಪನಗರವೆಂದೇ ಬಿಂಬಿಸಲಾಗುತ್ತಿರುವ ತುಮಕೂರಿನಲ್ಲೂ ಕೂಡ ಹಲವು ಕಾರ್ಖಾನೆಗಳು, ಕಂಪನಿಗಳು ಮತ್ತು ಗಾರ್ಮೆಂಟ್ಸ್‌ಗಳು ಇವೆ. ಡಾಬಸ್‌ಪೇಟೆಯ ಬಳಿ ಸೋಂಪುರ ಕೈಗಾರಿಕಾ ಪ್ರದೇಶವಿದೆ. ತುಮಕೂರಿನ ವಸಂತ ನರಸಾಪುರದಲ್ಲಿ ಖಾಸಗಿ ಸಹಭಾಗಿತ್ವದ ಫುಡ್ ಪಾರ್ಕಿನಲ್ಲಿ ಕಾಯಂ, ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ 800 ಕಾರ್ಮಿಕರಿದ್ದಾರೆ. ಅಲ್ಲಿಯೂ ಹಲವು ಕಾರ್ಖಾನೆಗಳು ಇವೆ. ಅಂತರಸನಹಳ್ಳಿಯ ಕೈಗಾರಿಕಾ ವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಪ್ತ ಮುಖೇಶ್ ಕುಮಾರ್ ಗಾರ್ಗ್ ಒಡೆತನದ VS ಪ್ರಾಡಕ್ಟ್ (ತಂಬಾಕು), VSN ಪ್ರಾಡಕ್ಟ್ (ಪಾನ್ ಮಸಾಲ), VSN ಪಾನ್ ಪ್ರಾಡಕ್ಟ್ ಪ್ರೈ.ಲಿಮಿಟೆಡ್ ಕಂಪನಿಯಲ್ಲಿ 800 ಮಂದಿ ಏಕಕಾಲದಲ್ಲಿ ಪಾನ್ ಮಸಾಲ, ತಂಬಾಕು ತಯಾರಿಕೆಯಲ್ಲಿ ತೊಡಗಿರುತ್ತಾರೆ. ಸಾಮಾನ್ಯ ಜನರಿಗೆ ಇರುವ ಈ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಜೆ ಇಲ್ಲವೇ?

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಾರ್ಮಿಕ ಮುಖಂಡ ಸೈಯದ್ ಮುಜೀಬ್, ತುಮಕೂರು ನಗರ ವ್ಯಾಪ್ತಿಯಲ್ಲಿ ಸುಮಾರು 400 ಕಾರ್ಖಾನೆಗಳಿವೆ. ನಿತ್ಯವೂ ಬೆಳಗ್ಗೆಯಿಂದ ಸಂಜೆಯವರೆಗೆ ಸಾವಿರಾರು ಬಗೆ ಬಗೆಯ ಕಾರ್ಮಿಕರು ಜೀವ ಪಣಕ್ಕಿಟ್ಟು ದುಡಿಯುತ್ತಿದ್ದಾರೆ. ನಗರದಲ್ಲಿರುವ ಜನರಿಗೆ ಕೊರೊನಾ ವೈರಸ್ ಹರಡುವುದಾದರೆ ಕೈಗಾರಿಕಾ ಕಾರ್ಮಿಕರಿಗೆ ಹರಡುವುದಿಲ್ಲವೇ? ಅವರದ್ದು ಜೀವವಲ್ಲವೇ? ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಒಂದೆಡೆ ಸೇರಿದರೆ ರೋಗ ಹರಡುವ ಬೀತಿ ಇದ್ದರೆ ಒಟ್ಟಾಗಿ ದುಡಿಯುವ ಕಾರ್ಮಿಕರಿಗೆ ಬರುವುದಿಲ್ಲವೇ? ಇಂತಹ ತಾರತಮ್ಯವನ್ನು ಸರ್ಕಾರ ಬಿಡಬೇಕು. ಈ ನಾಡು ಕಟ್ಟುವಲ್ಲಿ, ಆರ್ಥಿಕತೆ ಸೃಷ್ಟಿಸುವಲ್ಲಿ ಮಹಿಳೆಯರ ಪಾಲು ಹೆಚ್ಚಿದೆ. ಅಂಥವರ ಬಗ್ಗೆ ಸರ್ಕಾರ ತಾರತಮ್ಯ ಧೋರಣೆ  ಅನುಸರಿಸುತ್ತಿದೆ. ಅವರಿಗೂ ರಜೆ ಕೊಡಬೇಕು ಎಂದು ಒತ್ತಾಯಿಸಿದರು.

ಟಿಎಂಇಐಸಿ ಕಂಪನಿಯಲ್ಲಿ ಸುಮಾರು 800 ಕಾರ್ಮಿಕರು ದುಡಿಯುತ್ತಾರೆ. ಗುಬ್ಬಿ ಗೇಟ್‌ ಭಾಗದಲ್ಲಿರುವ ಗೋಕುಲ್ ದಾಸ್ ಗಾರ್ಮೆಂಟ್ಸ್ , ಶಾಯಿ ಗಾರ್ಮೆಂಟ್ಸ್‌ನಲ್ಲಿ ಒಬ್ಬರಿಗೊಬ್ಬರು ಅಂತರವಿಲ್ಲದೆ ದುಡಿಯುವ ಪರಿಸ್ಥಿತಿ ಇದೆ. ಎರಡು ಗಾರ್ಮೆಂಟ್ಸ್‌ಗಳಿಂದಲೂ 10 ಸಾವಿರ ಮಂದಿ ಮಹಿಳೆಯರು ದುಡಿಯುತ್ತಿದ್ದಾರೆ. ಅವರಿಗೆ ಯಾವುದೇ ಸುರಕ್ಷತೆ ಇಲ್ಲ. ಮಾಸ್ಕ್ ಕೂಡ ಹಾಕಿಕೊಳ್ಳುತ್ತಿಲ್ಲ. ಪ್ರತಿಯೊಬ್ಬರೂ ಸ್ಪರ್ಶಿಸಿಕೊಂಡೇ ಕೆಲಸ ಮಾಡಬೇಕು. 100ಕ್ಕೂ ಹೆಚ್ಚು ಮಂದಿ ಸೇರುವ ಸಭೆ ಸಮಾಂಭಗಳು, ಮದುವೆಗಳು, ಪುಡ್ ಜಂಕ್ಷನ್ ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮುಚ್ಚುವುದಾದರೆ ಇಲ್ಲೂ ಹಾಗೆ ಮಾಡಬೇಕಲ್ಲವೇ?  ಕಾರ್ಮಿಕರು ಕೆಲಸ ಮಾಡಲು ಸರ್ಕಾರ ಅವಕಾಶ ನೀಡಿ ಕೇವಲ ನಗರದಲ್ಲಿರುವವರನ್ನು ಮಾತ್ರ ರಕ್ಷಿಸಲು ಹೊರಟಿದೆಯೇ? ಈ ಪ್ರಶ್ನೆಗೆ ಉತ್ತರವಿಲ್ಲ.

ಬಡವರು ಕೆಲಸ ಮಾಡುವ ಕಂಪನಿಗಳಲ್ಲಿ ರಜೆ ನೀಡುತ್ತಿಲ್ಲ. ರಜೆ ನೀಡಿದರೆ ಸಂಬಳ ಸಹಿತ ರಜೆ ನೀಡಬೇಕಾಗುತ್ತದೆ ಎಂಬುದು ಕಂಪನಿಗಳ ಅಂಬೋಣ. ಅಂದರೆ ಇಷ್ಟು ದಿನ ಆ ಕಂಪನಿಗಾಗಿ ದುಡಿದವರಿಗೆ ಕಷ್ಟಕಾಲದಲ್ಲಿ ರಜೆ ಕೊಡಲು ಈ ಕಂಪನಿಗಳು ಹಿಂದೆ ಮುಂದೆ ನೋಡುತ್ತಿವೆ. ಸರ್ಕಾರಗಳು ಸಹ ಇವರನ್ನು ಮಾತಾಡಿಸುವುದಿಲ್ಲ. ದಿನ ದಿನದ ಲಾಭವಷ್ಟೇ ಮುಖ್ಯ ಹೊರತು ಬಡವರ ಪ್ರಾಣಗಳಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...