Homeಚಳವಳಿಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ಬಡವರು ಕೆಲಸ ಮಾಡುವ ಕಂಪನಿಗಳಲ್ಲಿ ರಜೆ ನೀಡುತ್ತಿಲ್ಲ. ರಜೆ ನೀಡಿದರೆ ಸಂಬಳ ಸಹಿತ ರಜೆ ನೀಡಬೇಕಾಗುತ್ತದೆ ಎಂಬುದು ಕಂಪನಿಗಳ ಅಂಬೋಣ.

- Advertisement -
- Advertisement -

ಕೊರೊನಾ ವೈರಸ್ ಹರಡದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ ಸಂಗತಿ. ಇದೇ ಉದ್ದೇಶದಿಂದ ನೂರಾರು, ಸಾವಿರಾರು ಮಂದಿ ಸೇರುವ ಸಭೆ-ಸಮಾರಂಭಗಳನ್ನು ರದ್ದುಪಡಿಸಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೆ ನಿರ್ಬಂಧಿಸಿದೆ ಹೇರಿದೆ. ಫುಡ್ ಜಂಕ್ಷನ್‌ಗಳನ್ನು ನಿಷೇಧಿಸಿದೆ. ಬೀದಿಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸಿದ್ದು ಆಗಿದೆ. ಅದ್ದೂರಿ ಮದುವೆಗಳಿಗೂ ಬ್ರೇಕ್ ಬಿದ್ದಿದೆ. ಹೋಟೆಲ್‌ಗಳಿಗೂ ಮುಚ್ಚುವಂತೆ ಆದೇಶಿಸಲಾಗಿದೆ. ಹಣವಂತರು ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ ಬಡವರು ಕೆಲಸವಿಲ್ಲದೆ ಮನೆಯಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕರಿಗೆ ನಿಯಮ ಅನ್ವಯ  ಆದರೆ ಬಹುತೇಕರಿಗೆ ಅದು ಲೆಕ್ಕಕ್ಕಿಲ್ಲ. ಸರ್ಕಾರದ ಅದೇಶ ಗಾರ್ಮೆಂಟ್ಸ್ ಮತ್ತು ದೊಡ್ಡದೊಡ್ಡ ಕಂಪನಿಗಳಿಗೆ ಅನ್ವಯವಾಗುವುದಿಲ್ಲ ಏಕೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿನ ಐಟಿ-ಬಿಟಿ ಕ್ಷೇತ್ರದ ಕಂಪನಿಗಳು ತಮ್ಮ ಕಾರ್ಮಿಕರನ್ನು ಮನೆಯಲ್ಲಿಯೇ ಕುಳಿತು ಕೆಲಸ ಮಾಡುವಂತೆ ಸೂಚನೆ ನೀಡಿವೆ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾ, ಬಿಡದಿ, ಬೊಮ್ಮಸಂದ್ರ, ಅತ್ತಿಬೆಲೆ, ವೀರಸಂದ್ರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ದೊಡ್ಡದೊಡ್ಡ ಕಂಪನಿಗಳು, ಕಾರ್ಖಾನೆಗಳು ಮತ್ತು ಗಾರ್ಮೆಂಟ್ ಗಳಿಗೆ ಸರ್ಕಾರದ ಆದೇಶ ಅನ್ವಯವಾಗುತ್ತಿಲ್ಲ. ನೂರಾರು ಮಂದಿ ಕಾರ್ಮಿಕರು ಅಕ್ಕ- ಪಕ್ಕದಲ್ಲಿಯೇ ನಿಂತು ಕೆಲಸ ಮಾಡುವ ಜಾಗದಲ್ಲಿ ಕೊರೊನಾ ಹರಡುವುದಿಲ್ಲವೇ ಎಂಬ ಪ್ರಶ್ನೆ ಎದ್ದಿದೆ. ಗಾರ್ಮೆಂಟ್ಸ್‌ಗಳಲ್ಲಿ ಮಹಿಳಾ ಕಾರ್ಮಿಕರು ಸಾಮೂಹಿಕವಾಗಿಯೇ ಕುಳಿತು ಒಬ್ಬರನ್ನೊಬ್ಬರು ಮುಟ್ಟುತ್ತ ಕೆಲಸ ಮಾಡುವಂತಹ ಪರಿಸ್ಥಿತಿ ಇದೆ. ಒಂದು ಅಂದಾಜಿನ ಪ್ರಕಾರ 10 ಲಕ್ಷ ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್‌ನಲ್ಲಿ ದುಡಿಯುತ್ತಿದ್ದಾರೆ. ಆ ಕಾರ್ಮಿಕರೆಲ್ಲ ಬೇರೆಬೇರೆ ಪ್ರದೇಶದಿಂದ ಬರುತ್ತಾರೆ. ಹಾಗಿದ್ದಾಗ ಅವರಿಗೂ ಕೊರೊನಾ ವೈರಸ್ ಹರಡುತ್ತದಲ್ಲವೇ? ಸರ್ಕಾರ ಒಬ್ಬರಿಗೆ ಒಂದು ನೀತಿ ಮತ್ತೊಬ್ಬರಿಗೆ ಒಂದು ನೀತಿ ಅನುಸರಿಸುತ್ತಿರುವುದು ತಪ್ಪಲ್ಲವೇ?

ಬೆಂಗಳೂರಿನ ಉಪನಗರವೆಂದೇ ಬಿಂಬಿಸಲಾಗುತ್ತಿರುವ ತುಮಕೂರಿನಲ್ಲೂ ಕೂಡ ಹಲವು ಕಾರ್ಖಾನೆಗಳು, ಕಂಪನಿಗಳು ಮತ್ತು ಗಾರ್ಮೆಂಟ್ಸ್‌ಗಳು ಇವೆ. ಡಾಬಸ್‌ಪೇಟೆಯ ಬಳಿ ಸೋಂಪುರ ಕೈಗಾರಿಕಾ ಪ್ರದೇಶವಿದೆ. ತುಮಕೂರಿನ ವಸಂತ ನರಸಾಪುರದಲ್ಲಿ ಖಾಸಗಿ ಸಹಭಾಗಿತ್ವದ ಫುಡ್ ಪಾರ್ಕಿನಲ್ಲಿ ಕಾಯಂ, ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ 800 ಕಾರ್ಮಿಕರಿದ್ದಾರೆ. ಅಲ್ಲಿಯೂ ಹಲವು ಕಾರ್ಖಾನೆಗಳು ಇವೆ. ಅಂತರಸನಹಳ್ಳಿಯ ಕೈಗಾರಿಕಾ ವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಪ್ತ ಮುಖೇಶ್ ಕುಮಾರ್ ಗಾರ್ಗ್ ಒಡೆತನದ VS ಪ್ರಾಡಕ್ಟ್ (ತಂಬಾಕು), VSN ಪ್ರಾಡಕ್ಟ್ (ಪಾನ್ ಮಸಾಲ), VSN ಪಾನ್ ಪ್ರಾಡಕ್ಟ್ ಪ್ರೈ.ಲಿಮಿಟೆಡ್ ಕಂಪನಿಯಲ್ಲಿ 800 ಮಂದಿ ಏಕಕಾಲದಲ್ಲಿ ಪಾನ್ ಮಸಾಲ, ತಂಬಾಕು ತಯಾರಿಕೆಯಲ್ಲಿ ತೊಡಗಿರುತ್ತಾರೆ. ಸಾಮಾನ್ಯ ಜನರಿಗೆ ಇರುವ ಈ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಜೆ ಇಲ್ಲವೇ?

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಾರ್ಮಿಕ ಮುಖಂಡ ಸೈಯದ್ ಮುಜೀಬ್, ತುಮಕೂರು ನಗರ ವ್ಯಾಪ್ತಿಯಲ್ಲಿ ಸುಮಾರು 400 ಕಾರ್ಖಾನೆಗಳಿವೆ. ನಿತ್ಯವೂ ಬೆಳಗ್ಗೆಯಿಂದ ಸಂಜೆಯವರೆಗೆ ಸಾವಿರಾರು ಬಗೆ ಬಗೆಯ ಕಾರ್ಮಿಕರು ಜೀವ ಪಣಕ್ಕಿಟ್ಟು ದುಡಿಯುತ್ತಿದ್ದಾರೆ. ನಗರದಲ್ಲಿರುವ ಜನರಿಗೆ ಕೊರೊನಾ ವೈರಸ್ ಹರಡುವುದಾದರೆ ಕೈಗಾರಿಕಾ ಕಾರ್ಮಿಕರಿಗೆ ಹರಡುವುದಿಲ್ಲವೇ? ಅವರದ್ದು ಜೀವವಲ್ಲವೇ? ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಒಂದೆಡೆ ಸೇರಿದರೆ ರೋಗ ಹರಡುವ ಬೀತಿ ಇದ್ದರೆ ಒಟ್ಟಾಗಿ ದುಡಿಯುವ ಕಾರ್ಮಿಕರಿಗೆ ಬರುವುದಿಲ್ಲವೇ? ಇಂತಹ ತಾರತಮ್ಯವನ್ನು ಸರ್ಕಾರ ಬಿಡಬೇಕು. ಈ ನಾಡು ಕಟ್ಟುವಲ್ಲಿ, ಆರ್ಥಿಕತೆ ಸೃಷ್ಟಿಸುವಲ್ಲಿ ಮಹಿಳೆಯರ ಪಾಲು ಹೆಚ್ಚಿದೆ. ಅಂಥವರ ಬಗ್ಗೆ ಸರ್ಕಾರ ತಾರತಮ್ಯ ಧೋರಣೆ  ಅನುಸರಿಸುತ್ತಿದೆ. ಅವರಿಗೂ ರಜೆ ಕೊಡಬೇಕು ಎಂದು ಒತ್ತಾಯಿಸಿದರು.

ಟಿಎಂಇಐಸಿ ಕಂಪನಿಯಲ್ಲಿ ಸುಮಾರು 800 ಕಾರ್ಮಿಕರು ದುಡಿಯುತ್ತಾರೆ. ಗುಬ್ಬಿ ಗೇಟ್‌ ಭಾಗದಲ್ಲಿರುವ ಗೋಕುಲ್ ದಾಸ್ ಗಾರ್ಮೆಂಟ್ಸ್ , ಶಾಯಿ ಗಾರ್ಮೆಂಟ್ಸ್‌ನಲ್ಲಿ ಒಬ್ಬರಿಗೊಬ್ಬರು ಅಂತರವಿಲ್ಲದೆ ದುಡಿಯುವ ಪರಿಸ್ಥಿತಿ ಇದೆ. ಎರಡು ಗಾರ್ಮೆಂಟ್ಸ್‌ಗಳಿಂದಲೂ 10 ಸಾವಿರ ಮಂದಿ ಮಹಿಳೆಯರು ದುಡಿಯುತ್ತಿದ್ದಾರೆ. ಅವರಿಗೆ ಯಾವುದೇ ಸುರಕ್ಷತೆ ಇಲ್ಲ. ಮಾಸ್ಕ್ ಕೂಡ ಹಾಕಿಕೊಳ್ಳುತ್ತಿಲ್ಲ. ಪ್ರತಿಯೊಬ್ಬರೂ ಸ್ಪರ್ಶಿಸಿಕೊಂಡೇ ಕೆಲಸ ಮಾಡಬೇಕು. 100ಕ್ಕೂ ಹೆಚ್ಚು ಮಂದಿ ಸೇರುವ ಸಭೆ ಸಮಾಂಭಗಳು, ಮದುವೆಗಳು, ಪುಡ್ ಜಂಕ್ಷನ್ ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮುಚ್ಚುವುದಾದರೆ ಇಲ್ಲೂ ಹಾಗೆ ಮಾಡಬೇಕಲ್ಲವೇ?  ಕಾರ್ಮಿಕರು ಕೆಲಸ ಮಾಡಲು ಸರ್ಕಾರ ಅವಕಾಶ ನೀಡಿ ಕೇವಲ ನಗರದಲ್ಲಿರುವವರನ್ನು ಮಾತ್ರ ರಕ್ಷಿಸಲು ಹೊರಟಿದೆಯೇ? ಈ ಪ್ರಶ್ನೆಗೆ ಉತ್ತರವಿಲ್ಲ.

ಬಡವರು ಕೆಲಸ ಮಾಡುವ ಕಂಪನಿಗಳಲ್ಲಿ ರಜೆ ನೀಡುತ್ತಿಲ್ಲ. ರಜೆ ನೀಡಿದರೆ ಸಂಬಳ ಸಹಿತ ರಜೆ ನೀಡಬೇಕಾಗುತ್ತದೆ ಎಂಬುದು ಕಂಪನಿಗಳ ಅಂಬೋಣ. ಅಂದರೆ ಇಷ್ಟು ದಿನ ಆ ಕಂಪನಿಗಾಗಿ ದುಡಿದವರಿಗೆ ಕಷ್ಟಕಾಲದಲ್ಲಿ ರಜೆ ಕೊಡಲು ಈ ಕಂಪನಿಗಳು ಹಿಂದೆ ಮುಂದೆ ನೋಡುತ್ತಿವೆ. ಸರ್ಕಾರಗಳು ಸಹ ಇವರನ್ನು ಮಾತಾಡಿಸುವುದಿಲ್ಲ. ದಿನ ದಿನದ ಲಾಭವಷ್ಟೇ ಮುಖ್ಯ ಹೊರತು ಬಡವರ ಪ್ರಾಣಗಳಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...