Homeಕರೋನಾ ತಲ್ಲಣಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ಕೊರೊನಾ ಉಲ್ಬಣವನ್ನು ತಡೆಗಟ್ಟಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಪ್ರಿಲ್ 14 ರ ರಾತ್ರಿ 8 ರಿಂದ ಮೇ 1 ರವರೆಗೆ ರಾಜ್ಯದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ.

- Advertisement -
- Advertisement -

ಪವಿತ್ರ ರಂಜಾನ್ ತಿಂಗಳಲ್ಲಿ ಮಸೀದಿಯಲ್ಲಿ ಒಂದು ಬಾರಿಗೆ 50 ಜನರಂತರ ಒಂದು ದಿನದಲ್ಲಿ ಐದು ಬಾರಿ ನಮಾಜ್ (ಪ್ರಾರ್ಥನೆ) ಮಾಡಲು ಅವಕಾಶ ನೀಡುವಂತೆ ಕೋರಿದ್ದ ಜುಮಾ ಮಸೀದಿ ಟ್ರಸ್ಟ್‌ಗೆ ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನಿರಾಕರಿಸಿದೆ.

ಧಾರ್ಮಿಕ ಆಚರಣೆಗಳನ್ನು ಅನುಸರಿಸುವ ಹಕ್ಕು ಮುಖ್ಯವಾದರೂ, ಕೊರೊನಾ ಉಲ್ಬಣದ ಸಮಯದಲ್ಲಿ, ಸಾರ್ವಜನಿಕ ಆದೇಶ ಮತ್ತು ನಾಗರಿಕರ ಸುರಕ್ಷತೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಆರ್.ಡಿ.ಧನುಕಾ ಮತ್ತು ವಿ.ಜಿ.ಬಿಶ್ತ್ ಅವರ ವಿಭಾಗೀಯ ನ್ಯಾಯಪೀಠದ ರಜಾದಿನದ ನ್ಯಾಯಾಲಯವು ಧರ್ಮದ ಸ್ವಾತಂತ್ರ್ಯದ ಹಕ್ಕನ್ನು ಉಲ್ಲೇಖಿಸಿ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಅನುಮತಿ ನಿರಾಕರಿಸಿದೆ.

ರಂಜಾನ್ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು  ದಕ್ಷಿಣ ಮುಂಬೈನಲ್ಲಿರುವ ಮಸೀದಿಯನ್ನು ತೆರೆಯಲು ಅವಕಾಶ ನೀಡುವಂತೆ ಟ್ರಸ್ಟ್ ಅರ್ಜಿ ಸಲ್ಲಿಸಿತ್ತು.  ಏಪ್ರಿಲ್ 13 ರ ಮಹಾರಾಷ್ಟ್ರ ಸರ್ಕಾರದ ಸುತ್ತೋಲೆಯ ಪ್ರಕಾರ ಮಸೀದಿಯನ್ನು ಬಂದ್ ಮಾಡಲಾಗಿದೆ.

ಇದನ್ನೂ ಓದಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ವಿಷಯದಲ್ಲಿ ಎಡವಿವೆ: ಕುಮಾರಸ್ವಾಮಿ

ಒಂದು ಎಕರೆ ವಿಸ್ತಿರ್ಣ ಹೊಂದಿರುವ ಮಸೀದಿಯಲ್ಲಿ ಒಂದೇ ಸಮಯದಲ್ಲಿ 7,000 ಜನರು ಸಭೆ ಸೇರಬಹುದು ಎಂದು ಅರ್ಜಿದಾರರು ತಿಳಿಸಿದ್ದಾರೆ. ಆದರೂ, ಕೊರೊನಾ ನಿಬಂರ್ಧಗಳನ್ನು ಗಮನದಲ್ಲಿಟ್ಟುಕೊಂಡು, ಪವಿತ್ರ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಒಂದು ಸಮಯದಲ್ಲಿ ಕೇವಲ 50 ಜನರಿಗೆ ಮಾತ್ರ ಅವಕಾಶ ಕೊಟ್ಟು, ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆಗಳು ಮತ್ತು ಕೊರೊನಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುವುದು ಎಂದು ಅರ್ಜಿದಾರರು ತಿಳಿಸಿದ್ದರು.

ಕೊರೊನಾ ಉಲ್ಬಣವನ್ನು ತಡೆಗಟ್ಟುವ ಕ್ರಮಗಳನ್ನು ಕೈಗೊಂಡ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಪ್ರಿಲ್ 14 ರ ರಾತ್ರಿ 8 ರಿಂದ ಮೇ 1 ರವರೆಗೆ ರಾಜ್ಯದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ.

ರಾಜ್ಯ ಸರ್ಕಾರದ ಸುತ್ತೋಲೆಯ ಪ್ರಕಾರ, 15 ದಿನಗಳ ಅವಧಿಯಲ್ಲಿ, ಎಲ್ಲಾ ಧಾರ್ಮಿಕ ಪೂಜಾ ಸ್ಥಳಗಳು ಮುಚ್ಚಿರಬೇಕು ಮತ್ತು ಪೂಜಾ ಸ್ಥಳದ ಸೇವೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಮಾತ್ರ ತಮ್ಮ ಕರ್ತವ್ಯವನ್ನು ಮುಂದುವರಿಸಲು ಅವಕಾಶವಿದೆ. ಪೂಜಾ ಸ್ಥಳಗಳ ಎಲ್ಲಾ ಸಿಬ್ಬಂದಿಗೆ ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಬೇಗನೆ ಲಸಿಕೆ ನೀಡುವಂತೆ ಸೂಚಿಸಲಾಗಿದೆ.

ಜನರು ತಮ್ಮ ಧರ್ಮವನ್ನು ಆಚರಿಸಲು ಸರ್ಕಾರ ನಿರಾಕರಿಸುತ್ತಿಲ್ಲ. ಆದರೆ ಕೊರೊನಾ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಅವರು ಪ್ರಾರ್ಥನೆಯನ್ನು ತಮ್ಮ ಮನೆಗಳಲ್ಲಿ ಮಾಡಬೇಕು ಎಂದು ರಾಜ್ಯ ಸರ್ಕಾರದ ಪರ  ಹಾಜರಾದ ಹೆಚ್ಚುವರಿ ಸರ್ಕಾರಿ ವಕೀಲರಾದ ಜ್ಯೋತಿ ಚವ್ಹಾಣ್ ಹೇಳಿದ್ದಾರೆ. ರಾಜ್ಯವು ಲಸಿಕೆಗಳು ಮತ್ತು ಆಮ್ಲಜನಕದ ಕೊರತೆಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಸಾಮಾಜಿಕ ಕೂಟಗಳಿಗೆ ಅವಕಾಶ ನೀಡುವುದು ಸೂಕ್ತವಲ್ಲ ಎಂದರು.


ಇದನ್ನೂ ಓದಿ: ಮರ್ಕಾಜ್ ಮಸೀದಿಯಲ್ಲಿ ಪ್ರಾರ್ಥನೆಗೆ 20 ಜನರಿಗಷ್ಟೇ ಅವಕಾಶ: ಕೇಂದ್ರದ ನಿಲುವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...