Homeಕರೋನಾ ತಲ್ಲಣಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ಕೊರೊನಾ ಉಲ್ಬಣವನ್ನು ತಡೆಗಟ್ಟಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಪ್ರಿಲ್ 14 ರ ರಾತ್ರಿ 8 ರಿಂದ ಮೇ 1 ರವರೆಗೆ ರಾಜ್ಯದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ.

- Advertisement -
- Advertisement -

ಪವಿತ್ರ ರಂಜಾನ್ ತಿಂಗಳಲ್ಲಿ ಮಸೀದಿಯಲ್ಲಿ ಒಂದು ಬಾರಿಗೆ 50 ಜನರಂತರ ಒಂದು ದಿನದಲ್ಲಿ ಐದು ಬಾರಿ ನಮಾಜ್ (ಪ್ರಾರ್ಥನೆ) ಮಾಡಲು ಅವಕಾಶ ನೀಡುವಂತೆ ಕೋರಿದ್ದ ಜುಮಾ ಮಸೀದಿ ಟ್ರಸ್ಟ್‌ಗೆ ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನಿರಾಕರಿಸಿದೆ.

ಧಾರ್ಮಿಕ ಆಚರಣೆಗಳನ್ನು ಅನುಸರಿಸುವ ಹಕ್ಕು ಮುಖ್ಯವಾದರೂ, ಕೊರೊನಾ ಉಲ್ಬಣದ ಸಮಯದಲ್ಲಿ, ಸಾರ್ವಜನಿಕ ಆದೇಶ ಮತ್ತು ನಾಗರಿಕರ ಸುರಕ್ಷತೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಆರ್.ಡಿ.ಧನುಕಾ ಮತ್ತು ವಿ.ಜಿ.ಬಿಶ್ತ್ ಅವರ ವಿಭಾಗೀಯ ನ್ಯಾಯಪೀಠದ ರಜಾದಿನದ ನ್ಯಾಯಾಲಯವು ಧರ್ಮದ ಸ್ವಾತಂತ್ರ್ಯದ ಹಕ್ಕನ್ನು ಉಲ್ಲೇಖಿಸಿ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಅನುಮತಿ ನಿರಾಕರಿಸಿದೆ.

ರಂಜಾನ್ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು  ದಕ್ಷಿಣ ಮುಂಬೈನಲ್ಲಿರುವ ಮಸೀದಿಯನ್ನು ತೆರೆಯಲು ಅವಕಾಶ ನೀಡುವಂತೆ ಟ್ರಸ್ಟ್ ಅರ್ಜಿ ಸಲ್ಲಿಸಿತ್ತು.  ಏಪ್ರಿಲ್ 13 ರ ಮಹಾರಾಷ್ಟ್ರ ಸರ್ಕಾರದ ಸುತ್ತೋಲೆಯ ಪ್ರಕಾರ ಮಸೀದಿಯನ್ನು ಬಂದ್ ಮಾಡಲಾಗಿದೆ.

ಇದನ್ನೂ ಓದಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ವಿಷಯದಲ್ಲಿ ಎಡವಿವೆ: ಕುಮಾರಸ್ವಾಮಿ

ಒಂದು ಎಕರೆ ವಿಸ್ತಿರ್ಣ ಹೊಂದಿರುವ ಮಸೀದಿಯಲ್ಲಿ ಒಂದೇ ಸಮಯದಲ್ಲಿ 7,000 ಜನರು ಸಭೆ ಸೇರಬಹುದು ಎಂದು ಅರ್ಜಿದಾರರು ತಿಳಿಸಿದ್ದಾರೆ. ಆದರೂ, ಕೊರೊನಾ ನಿಬಂರ್ಧಗಳನ್ನು ಗಮನದಲ್ಲಿಟ್ಟುಕೊಂಡು, ಪವಿತ್ರ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಒಂದು ಸಮಯದಲ್ಲಿ ಕೇವಲ 50 ಜನರಿಗೆ ಮಾತ್ರ ಅವಕಾಶ ಕೊಟ್ಟು, ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆಗಳು ಮತ್ತು ಕೊರೊನಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುವುದು ಎಂದು ಅರ್ಜಿದಾರರು ತಿಳಿಸಿದ್ದರು.

ಕೊರೊನಾ ಉಲ್ಬಣವನ್ನು ತಡೆಗಟ್ಟುವ ಕ್ರಮಗಳನ್ನು ಕೈಗೊಂಡ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಪ್ರಿಲ್ 14 ರ ರಾತ್ರಿ 8 ರಿಂದ ಮೇ 1 ರವರೆಗೆ ರಾಜ್ಯದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ.

ರಾಜ್ಯ ಸರ್ಕಾರದ ಸುತ್ತೋಲೆಯ ಪ್ರಕಾರ, 15 ದಿನಗಳ ಅವಧಿಯಲ್ಲಿ, ಎಲ್ಲಾ ಧಾರ್ಮಿಕ ಪೂಜಾ ಸ್ಥಳಗಳು ಮುಚ್ಚಿರಬೇಕು ಮತ್ತು ಪೂಜಾ ಸ್ಥಳದ ಸೇವೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಮಾತ್ರ ತಮ್ಮ ಕರ್ತವ್ಯವನ್ನು ಮುಂದುವರಿಸಲು ಅವಕಾಶವಿದೆ. ಪೂಜಾ ಸ್ಥಳಗಳ ಎಲ್ಲಾ ಸಿಬ್ಬಂದಿಗೆ ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಬೇಗನೆ ಲಸಿಕೆ ನೀಡುವಂತೆ ಸೂಚಿಸಲಾಗಿದೆ.

ಜನರು ತಮ್ಮ ಧರ್ಮವನ್ನು ಆಚರಿಸಲು ಸರ್ಕಾರ ನಿರಾಕರಿಸುತ್ತಿಲ್ಲ. ಆದರೆ ಕೊರೊನಾ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಅವರು ಪ್ರಾರ್ಥನೆಯನ್ನು ತಮ್ಮ ಮನೆಗಳಲ್ಲಿ ಮಾಡಬೇಕು ಎಂದು ರಾಜ್ಯ ಸರ್ಕಾರದ ಪರ  ಹಾಜರಾದ ಹೆಚ್ಚುವರಿ ಸರ್ಕಾರಿ ವಕೀಲರಾದ ಜ್ಯೋತಿ ಚವ್ಹಾಣ್ ಹೇಳಿದ್ದಾರೆ. ರಾಜ್ಯವು ಲಸಿಕೆಗಳು ಮತ್ತು ಆಮ್ಲಜನಕದ ಕೊರತೆಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಸಾಮಾಜಿಕ ಕೂಟಗಳಿಗೆ ಅವಕಾಶ ನೀಡುವುದು ಸೂಕ್ತವಲ್ಲ ಎಂದರು.


ಇದನ್ನೂ ಓದಿ: ಮರ್ಕಾಜ್ ಮಸೀದಿಯಲ್ಲಿ ಪ್ರಾರ್ಥನೆಗೆ 20 ಜನರಿಗಷ್ಟೇ ಅವಕಾಶ: ಕೇಂದ್ರದ ನಿಲುವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...