Homeಕರೋನಾ ತಲ್ಲಣಪಶ್ಚಿಮ ಬಂಗಾಳದಲ್ಲಿ ಜುಲೈ 1ರ ವರೆಗೆ ಕೊರೊನಾ ನಿರ್ಬಂಧ ವಿಸ್ತರಣೆ

ಪಶ್ಚಿಮ ಬಂಗಾಳದಲ್ಲಿ ಜುಲೈ 1ರ ವರೆಗೆ ಕೊರೊನಾ ನಿರ್ಬಂಧ ವಿಸ್ತರಣೆ

- Advertisement -
- Advertisement -

ಕೊರೊನಾ ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರವು ಕೊರೊನಾ ಪ್ರೇರಿತ ನಿರ್ಬಂಧಗಳನ್ನು ಜುಲೈ 1 ರವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕೊಲ್ಕತ್ತಾದಲ್ಲಿ ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, “ನಿರ್ಬಂಧಗಳನ್ನು ಜುಲೈ 1 ರವರೆಗೆ ವಿಸ್ತರಿಸಲಾಗುತ್ತಿದೆ. ಜನರ ಸಂಚಾರವನ್ನು ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ನಿರ್ಬಂಧಿಸಲಾಗುವುದು. ಆದಾಗ್ಯೂ, ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ಎಲ್ಲಾ ಸರ್ಕಾರಿ ಕಚೇರಿಗಳು ತಲಾ 25% ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತವೆ. ಖಾಸಗಿ ಮತ್ತು ಕಾರ್ಪೊರೇಟ್ ಕಚೇರಿಗಳು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ 25% ಕ್ಕಿಂತ ಹೆಚ್ಚಿನ ಸಿಬ್ಬಂದಿ ಸಾಮರ್ಥ್ಯದೊಂದಿಗೆ ತೆರೆದಿರುತ್ತವೆ. ಖಾಸಗಿ ಕಚೇರಿಗಳು ಇ-ಪಾಸ್ ಮೂಲಕ ನೌಕರರಿಗೆ ಸಾರಿಗೆ ಸೇವೆಗಳನ್ನು ವ್ಯವಸ್ಥೆಗೊಳಿಸಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

“ಶಾಪಿಂಗ್ ಮಾಲ್ ಮತ್ತು ಕಾಂಪ್ಲೆಕ್ಸ್‌ಗಳಲ್ಲಿನ ಅಂಗಡಿಗಳು 50% ದಷ್ಟು ಕೆಲಸದವರೊಂದಿಗೆ ಬೆಳಿಗ್ಗೆ 11 ರಿಂದ ಸಂಜೆ 6 ರವರೆಗೆ ತೆರೆಯಲು ಅವಕಾಶವಿದೆ. ಕ್ರೀಡಾ ಚಟುವಟಿಕೆಗಳು ಪ್ರೇಕ್ಷಕರಿಲ್ಲದೆ ಪುನರಾರಂಭಿಸಬಹುದು. ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ಜಲಮಾರ್ಗಗಳು ಮುಚ್ಚಿಯೆ ಇರುತ್ತದೆ. ತುರ್ತು ಪರಿಸ್ಥಿತಿಯನ್ನು ಹೊರತುಪಡಿಸಿ ಖಾಸಗಿ ವಾಹನಗಳ ಸಂಚಾರವನ್ನು ನಿರ್ಬಂಧಿಲಾಗಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

50% ದಷ್ಟು ಆಸನ ಸಾಮರ್ಥ್ಯದೊಂದಿಗೆ ಬಾರ್‌ಗಳನ್ನು ಹೊಂದಿರುವ ರೆಸ್ಟೋರೆಂಟ್‌ಗಳು ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ತೆರೆಯಬಹುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮೇ 16 ರಿಂದ ಕೊರೊನಾ ನಿರ್ಬಂಧಗಳನ್ನು ವಿಧಿಸಲಾಗಿತ್ತು. ರಾಜ್ಯದಲ್ಲಿ ಕಳೆದ ಒಂದೇ ದಿನದಲ್ಲಿ 19,117 ಹೊಸ ಪ್ರಕರಣಗಳು ಮತ್ತು 147 ಸಾವುನೋವುಗಳು ವರದಿಯಾಗಿದೆ. ಆದಾಗ್ಯೂ, ಕೊರೊನಾ ನಿರ್ಬಂಧಗಳನ್ನು ಹೇರಿದ ನಂತರ ರಾಜ್ಯದಲ್ಲಿ ದೈನಂದಿನ ಪ್ರಕರಣವು ಇಳಿಕೆಯಲ್ಲಿದೆ.

ಪಶ್ಚಿಮ ಬಂಗಾಳದಲ್ಲಿ ಭಾನುವಾರ 3,984 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿನ ಪ್ರಕರಣ 14,61,257 ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸಾವಿನ ಸಂಖ್ಯೆ 16,896 ಕ್ಕೆ ಏರಿದೆ.

ಇದನ್ನೂ ಓದಿ: ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...