Homeಕರೋನಾ ತಲ್ಲಣಮುಖ್ಯಮಂತ್ರಿ ಉಪಸ್ಥಿತಿಯಲ್ಲೆ ಬಿಜೆಪಿ ಸಮಾವೇಶದಲ್ಲಿ ಕೊರೊನಾ ನಿಯಮ ಉಲ್ಲಂಘನೆ!

ಮುಖ್ಯಮಂತ್ರಿ ಉಪಸ್ಥಿತಿಯಲ್ಲೆ ಬಿಜೆಪಿ ಸಮಾವೇಶದಲ್ಲಿ ಕೊರೊನಾ ನಿಯಮ ಉಲ್ಲಂಘನೆ!

ರಾಜ್ಯದ ಕಾನೂನು ಕಾಯ್ದೆಗಳನ್ನು ರೂಪಿಸುವ ಮುಖ್ಯಮಂತ್ರಿ ತಮ್ಮದೆ ಸರ್ಕಾರದ ನಿಯಮಗಳನ್ನು ಪಾಲಿಸದೇ, ಅದನ್ನು ಧಿಕ್ಕರಿಸುವುದು ಎಷ್ಟು ಸರಿ?

- Advertisement -
- Advertisement -

ರಾಜ್ಯದಲ್ಲಿ ಇನ್ನೂ ಕೊರೊನಾ ಮಾರ್ಗಸೂಚಿಗಳು ಜಾರಿಯಲ್ಲಿದೆ. ನಗರದ ಸಾರ್ವಜನಿಕ ಸ್ಥಗಳಲ್ಲಿ ಮಾಸ್ಕ್ ಹಾಕದಿದ್ದರೆ 250 ರೂ ಹಾಗೂ ಗ್ರಾಮಗಳಲ್ಲಿ 100 ರೂಗಳನ್ನು ದಂಡ ಕಟ್ಟಬೇಕಾಗುತ್ತದೆ. ಯಾವುದೆ ರೀತಿಯ ಸಭೆಯಲ್ಲಿ 200 ಕ್ಕಿಂತ ಹೆಚ್ಚಿನ ಜನ ಸೇರಬಾರದು ಎಂಬ ನಿಯಮವಿದೆ. ಆದರೆ ಈ ಮಾರ್ಗಸೂಚಿಗಳು ಕೇವಲ ಸಾಮನ್ಯರಿಗಷ್ಟೇ ಇದೆಯೆ ಎಂಬ ಪ್ರಶ್ನೆಗಳು ಕಾಡುತ್ತಿದೆ.

ಇತ್ತೀಚೆಗಷ್ಟೆ ದಿನಗೂಲಿ ಕೆಲಸ ಮಾಡುವ ಮಹಿಳೆಯಿಂದ 250 ರೂ ದಂಡವನ್ನು ಮಾರ್ಷಲ್‌ಗಳು ಕಟ್ಟಿಸಿಕೊಂಡಿದ್ದರು. ಒಂದು ದಿನದ ಕೂಲಿ ಕಳೆದು ಕೊಂಡ ಮಹಿಳೆಯ ರೋದನೆ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು. ಇದಕ್ಕೆ ಇಡೀ ರಾಜ್ಯದ ಜನರು ಮರುಗಿದ್ದರು. ದಿನದಿನವು ಕೊರೊನಾ ನಿಯಮಗಳ ಉಲ್ಲಂಘನೆ ಮಾಡಿದ್ದಾರೆಂದು ಸಾಮಾನ್ಯ ಜನರಿಂದ ಯಾವುದೆ ಕರುಣೆ ತೋರದೆ ದಂಡಗಳನ್ನು ಕಟ್ಟಿಸಲಾಗುತ್ತಿದೆ. ಆದರೆ ಈ ನಿಯಮಗಳು ರಾಜ್ಯವನ್ನು ಆಳುತ್ತಿರುವ ಬಿಜೆಪಿಯ ಸಭೆಗೋ ಅಥವಾ ಬಿಜೆಪಿ ನಾಯಕರಿಗೂ ಅನ್ವಯಿಸುವುದಿಲ್ಲ ಎಂಬ ಅಲಿಖಿತ ನಿಯಮವಿದೆ ಎನ್ನುವ ಅನುಮಾನವಿದೆ.

ಇದನ್ನೂ ನೋಡಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಬುಧವಾರ ಬೆಂಗಳೂರಿನ ಗಾಯತ್ರಿ ವಿಹಾರ ಪ್ಯಾಲೆಸ್ ಮೈದಾನದಲ್ಲಿ ನಡೆದ ಬಿಜೆಪಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಎಲ್ಲಾ ರೀತಿಯ ಕೊರೊನಾ ನೀತಿ ನಿಯಮಗಳನ್ನು ತೂರಲಾಗಿತ್ತು. ಕಾರ್ಯಕ್ರಮದ ವೇದಿಕೆಯ ಮುಂಭಾಗ ಸಾವಿರಾರು ಬಿಜೆಪಿ ಕಾರ್ಯಕರ್ತರು ನೆರೆದಿದ್ದರು. ಆದರೆ ಹೆಚ್ಚಿನ ಕಾರ್ಯಕರ್ತರು ಮಾಸ್ಕ್ ಧರಿಸಿರಲಿಲ್ಲ.

ಅಲ್ಲದೆ, ವೇದಿಕೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು. ಆದರೆ ಇವರಲ್ಲಿ ಹೆಚ್ಚಿನ ಜನರು ಮಾಸ್ಕ್ ಹಾಕಿರಲಿಲ್ಲ. ದೈಹಿಕ ಅಂತರ ಕಾಪಾಡಿರಲಿಲ್ಲ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿನ ಗೆಲುವು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಬೆಂಗಳೂರು ಮಹಾನಗರ ಘಟಕವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಆಗಮಿಸಿದಾಗ ಮಾಸ್ಕ್ ಧರಿಸಿದ್ದರಾದರೂ, ಅವರ ಸುತ್ತ ಮುತ್ತ ಇದ್ದ ಹೆಚ್ಚಿನ ಜನರು ಮಾಸ್ಕ್ ಧರಿಸಿರುವುದೋ, ದೈಹಿಕ ಅಂತರ ಕಾಪಾಡಿರುವುದೋ ಮಾಡಿರಲಿಲ್ಲ.

ಒಟ್ಟಿನಲ್ಲಿ ರಾಜ್ಯದ ಕಾನೂನು ಕಾಯ್ದೆಗಳನ್ನು ರೂಪಿಸುವ ಮುಖ್ಯಮಂತ್ರಿಗಳು ತಾವೇ ಮಾಡಿರುವ ನಿಯಮಗಳನ್ನು ಪಾಲಿಸದೇ, ಅದನ್ನು ಧಿಕ್ಕರಿಸುವುದು ಎಷ್ಟು ಸರಿ? ಸಾಮಾನ್ಯ ಜನರನ್ನು ಅಡ್ಡಗಟ್ಟಿ ದಂಡ ಕಟ್ಟಿಸಿಕೊಳ್ಳುವ ಪೊಲೀಸರು ಬಿಜೆಪಿ ಕಾರ್ಯಕರ್ತರಿಂದ ದಂಡ ಕಟ್ಟಿಸಿಕೊಳ್ಳಲಿದ್ದಾರೆಯೇ? ಕಾದು ನೋಡಬೇಕಾಗಿದೆ.

ಇದನ್ನೂ ನೋಡಿ: ಟ್ರಂಪ್ ಪರ ಬಿಜೆಪಿಯ ಧ್ವನಿಗಳು..! ಏಕಾಏಕಿ ಅಭಿವ್ಯಕ್ತಿ ಸ್ವಾಂತಂತ್ರ್ಯದ ಜಪ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...