Homeಕರೋನಾ ತಲ್ಲಣಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

ಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

- Advertisement -
- Advertisement -

ಕೊರೊನಾ ಎರಡನೇ ಅಲೆಯ ಪ್ರಕರಣಗಳು ಗ್ರಾಮೀಣ ಭಾರತದಲ್ಲಿ ಉಲ್ಬಣಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಗಿದ ಮೊದಲ ಅಲೆಗೆ ಹೋಲಿಸಿದರೆ, ಭಾರತದ ಒಳನಾಡು ಅಥವಾ ಹಿಂದುಳಿದ ಪ್ರದೇಶಗಳಲ್ಲಿ ಸೋಂಕಿನ ಪ್ರಕರಣಗಳು ಮತ್ತು ಅದರಿಂದಾಗಿ ಮೃತಪಟ್ಟವರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ.

ಹಿಂದುಳಿದ ಪ್ರದೇಶ ಅನುದಾನ ನಿಧಿ (ಬಿಆರ್‌ಜಿಎಫ್) ವ್ಯಾಪ್ತಿಗೆ 272 ಜಿಲ್ಲೆಗಳು ಒಳಪಡುತ್ತದೆ. ಇದರಲ್ಲಿ 243 ಜಿಲ್ಲೆಗಳ ಮಾಹಿತಿ ಲಭ್ಯವಿದ್ದು, ಈ ಮಾಹಿತಿಯಂತೆ ಮೇ 5 ರ ಹೊತ್ತಿಗೆ ಇಲ್ಲಿನ 39.16 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಕೊರೊನಾ ಮೊದಲ ಅಲೆಯ ಉತ್ತುಂಗದ ಸಮಯವಾದ ಸೆಪ್ಟೆಂಬರ್ 16, 2020 ರಲ್ಲಿ ಈ ಜಿಲ್ಲೆಗಳಲ್ಲಿ 9.5 ಲಕ್ಷ ಸೋಂಕುಗಳಷ್ಟೇ ಇದ್ದವು. ಇದಕ್ಕೆ ಹೋಲಿಸಿದರೆ ಪ್ರಸ್ತುತ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಈ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳು ಕೂಡಾ ಎರಡನೇ ಅಲೆಯಲ್ಲಿ ಹೆಚ್ಚಾಗಿದ್ದು, ಗರಿಷ್ಠ ಮಟ್ಟದಲ್ಲಿದೆ. ಸಕ್ರಿಯ ಸೋಂಕಿತರು ಇದೀಗ ಮೊದಲ ಅಲೆಗಿಂತ 4.2 ಪಟ್ಟು ಹೆಚ್ಚಾಗಿದ್ದಾರೆ. ಈ ಜಿಲ್ಲೆಗಳಲ್ಲಿ ಪ್ರಸ್ತುತ 7.15 ಲಕ್ಷಕ್ಕೂ ಹೆಚ್ಚು ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳು ಹೆಚ್ಚಾಗಿ ಇಲ್ಲದೆ ಇರುವುದರಿಂದ ಇದು ಜನರನ್ನು ತೀವ್ರ ಸಂಕಷ್ಟಕ್ಕೆ ಈಡಾಗಿಸುತ್ತದೆ.

ಇದರ ಪ್ರತಿಫಲವೆ ಈ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ವರದಿಯಾಗಿವೆ. ಮೇ 5 ರ ಹೊತ್ತಿಗೆ, ಈ 243 ಜಿಲ್ಲೆಗಳು ಒಟ್ಟು 36,523 ಸಾವುಗಳನ್ನು ವರದಿಯಾಗಿವೆ. ಈ ಸಂಖ್ಯೆಯು ಕಳೆದ ವರ್ಷದಲ್ಲಿ ಮೊದಲ ಅಲೆಯ ಸಮಯದಲ್ಲಿ ಸಾವಿಗೀಡಾದವರ ಸಂಖ್ಯೆಗಿಂತ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ. ಸೆಪ್ಟೆಂಬರ್ 16, 2020 ರ ಹೊತ್ತಿಗೆ, ಈ ಜಿಲ್ಲೆಗಳಲ್ಲಿ 9,555 ಜನರು ಮೃತಪಟ್ಟಿದ್ದರು.

ಬಿಆರ್‌ಜಿಎಫ್ ಅಡಿಯಲ್ಲಿರುವ 272 ಜಿಲ್ಲೆಗಳಲ್ಲಿ ಸುಮಾರು 54% ಜಿಲ್ಲೆಗಳು ಕೇವಲ ಐದು ರಾಜ್ಯಗಳಿಗೆ ಸೇರಿದೆ. ಅವುಗಳೆಂದರೆ: ಬಿಹಾರ-38, ಉತ್ತರ ಪ್ರದೇಶ-35, ಮಧ್ಯಪ್ರದೇಶ – 30, ಜಾರ್ಖಂಡ್ – 23 ಮತ್ತು ಒಡಿಶಾದ 20 ಜಿಲ್ಲೆಗಳು. ಈ ರಾಜ್ಯಗಳೆ ದೇಶದ ಪ್ರಮುಖ ನಗರಗಳಿಗೆ ಹೆಚ್ಚಿನ ವಲಸೆ ಕಾರ್ಮಿಕರನ್ನು ಒದಗಿಸುತ್ತವೆ.

ಇದನ್ನೂ ಓದಿ: ಕಂಗನಾ ರಾಣಾವತ್‌ಗೆ ಕೊರೊನಾ ಪಾಸಿಟಿವ್: ವೈರಸ್ ನಾಶಗೊಳಿಸುತ್ತೇನೆ ಎಂದ ನಟಿ!

ಕೊರೊನಾ ವೈರಸ್ ಪ್ರಕರಣಗಳ ನಗರ-ಗ್ರಾಮೀಣ ವಿಭಜನೆಯು ನೇರವಾಗಿ ಲಭ್ಯವಿಲ್ಲದಿದ್ದರೂ, ಬಿಆರ್‌ಜಿಎಫ್ ಜಿಲ್ಲೆಗಳಲ್ಲಿನ ಪ್ರಕರಣಗಳು ಮತ್ತು ಸಾವುಗಳ ವಿಶ್ಲೇಷಣೆಯು ಭಾರತದಲ್ಲಿ ಗ್ರಾಮೀಣ ಹರಡುವಿಕೆಯನ್ನು ಸೂಚಿಸುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ, 243 ಜಿಲ್ಲೆಗಳಲ್ಲಿನ ಸೋಂಕುಗಳ ಸಂಖ್ಯೆ ಮೊದಲ ಮತ್ತು ಎರಡನೆಯ ಅಲೆಗಳ ನಡುವೆ ನಾಲ್ಕು ಪಟ್ಟು ಹೆಚ್ಚಾಗಿದೆ. ಆದರೆ ದೇಶದ ಒಟ್ಟು ಸೋಂಕುಗಳ ಶೇಕಡಾವಾರು ಏರಿಕೆಯ ಪ್ರಮಾಣವು ಕೇವಲ 18.6% ರಷ್ಟಿದೆ. ಆದರೆ ಈ ಜಿಲ್ಲೆಗಳಲ್ಲಿ ಸಾವುಗಳು ಗಮನಾರ್ಹವಾಗಿ ಏರಿಕೆಯಾಗಿದೆ.

ಈ 272 ಜಿಲ್ಲೆಗಳಲ್ಲಿ ಹೆಚ್ಚಿನ ಜಿಲ್ಲೆಗಳು ಮೂಲಭೂತ ಆರೋಗ್ಯ ಸೌಲಭ್ಯಗಳನ್ನು ಮಾತ್ರ ಹೊಂದಿವೆ. ರಾಜ್ಯಗಳು ನಿರ್ಮಿಸುತ್ತಿರುವ ಹೊಸ ಮೂಲಸೌಕರ್ಯಗಳು ಹೆಚ್ಚಾಗಿ ದೊಡ್ಡ ಪಟ್ಟಣಗಳು ​​ಮತ್ತು ನಗರಗಳಲ್ಲಿವೆ. ಇದರ ಪರಿಣಾಮವಾಗಿ, ಈ ಜಿಲ್ಲೆಗಳಿಂದ ಹತ್ತಿರದ ದೊಡ್ಡ ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಿದ್ದಾರೆ, ಇದು ಪಟ್ಟಣಗಳು ​​ಮತ್ತು ನಗರಗಳಲ್ಲಿ ಈಗಾಗಲೇ ಒತ್ತಡಕ್ಕೊಳಗಾದ ಮೂಲಸೌಕರ್ಯಗಳ ಮೇಲೆ ಹೊರೆಯನ್ನು ಹೆಚ್ಚಿಸುತ್ತಿದೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...