Homeಕರೋನಾ ತಲ್ಲಣಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

ಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

- Advertisement -
- Advertisement -

ಕೊರೊನಾ ಎರಡನೇ ಅಲೆಯ ಪ್ರಕರಣಗಳು ಗ್ರಾಮೀಣ ಭಾರತದಲ್ಲಿ ಉಲ್ಬಣಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಗಿದ ಮೊದಲ ಅಲೆಗೆ ಹೋಲಿಸಿದರೆ, ಭಾರತದ ಒಳನಾಡು ಅಥವಾ ಹಿಂದುಳಿದ ಪ್ರದೇಶಗಳಲ್ಲಿ ಸೋಂಕಿನ ಪ್ರಕರಣಗಳು ಮತ್ತು ಅದರಿಂದಾಗಿ ಮೃತಪಟ್ಟವರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ.

ಹಿಂದುಳಿದ ಪ್ರದೇಶ ಅನುದಾನ ನಿಧಿ (ಬಿಆರ್‌ಜಿಎಫ್) ವ್ಯಾಪ್ತಿಗೆ 272 ಜಿಲ್ಲೆಗಳು ಒಳಪಡುತ್ತದೆ. ಇದರಲ್ಲಿ 243 ಜಿಲ್ಲೆಗಳ ಮಾಹಿತಿ ಲಭ್ಯವಿದ್ದು, ಈ ಮಾಹಿತಿಯಂತೆ ಮೇ 5 ರ ಹೊತ್ತಿಗೆ ಇಲ್ಲಿನ 39.16 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಕೊರೊನಾ ಮೊದಲ ಅಲೆಯ ಉತ್ತುಂಗದ ಸಮಯವಾದ ಸೆಪ್ಟೆಂಬರ್ 16, 2020 ರಲ್ಲಿ ಈ ಜಿಲ್ಲೆಗಳಲ್ಲಿ 9.5 ಲಕ್ಷ ಸೋಂಕುಗಳಷ್ಟೇ ಇದ್ದವು. ಇದಕ್ಕೆ ಹೋಲಿಸಿದರೆ ಪ್ರಸ್ತುತ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಈ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳು ಕೂಡಾ ಎರಡನೇ ಅಲೆಯಲ್ಲಿ ಹೆಚ್ಚಾಗಿದ್ದು, ಗರಿಷ್ಠ ಮಟ್ಟದಲ್ಲಿದೆ. ಸಕ್ರಿಯ ಸೋಂಕಿತರು ಇದೀಗ ಮೊದಲ ಅಲೆಗಿಂತ 4.2 ಪಟ್ಟು ಹೆಚ್ಚಾಗಿದ್ದಾರೆ. ಈ ಜಿಲ್ಲೆಗಳಲ್ಲಿ ಪ್ರಸ್ತುತ 7.15 ಲಕ್ಷಕ್ಕೂ ಹೆಚ್ಚು ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳು ಹೆಚ್ಚಾಗಿ ಇಲ್ಲದೆ ಇರುವುದರಿಂದ ಇದು ಜನರನ್ನು ತೀವ್ರ ಸಂಕಷ್ಟಕ್ಕೆ ಈಡಾಗಿಸುತ್ತದೆ.

ಇದರ ಪ್ರತಿಫಲವೆ ಈ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ವರದಿಯಾಗಿವೆ. ಮೇ 5 ರ ಹೊತ್ತಿಗೆ, ಈ 243 ಜಿಲ್ಲೆಗಳು ಒಟ್ಟು 36,523 ಸಾವುಗಳನ್ನು ವರದಿಯಾಗಿವೆ. ಈ ಸಂಖ್ಯೆಯು ಕಳೆದ ವರ್ಷದಲ್ಲಿ ಮೊದಲ ಅಲೆಯ ಸಮಯದಲ್ಲಿ ಸಾವಿಗೀಡಾದವರ ಸಂಖ್ಯೆಗಿಂತ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ. ಸೆಪ್ಟೆಂಬರ್ 16, 2020 ರ ಹೊತ್ತಿಗೆ, ಈ ಜಿಲ್ಲೆಗಳಲ್ಲಿ 9,555 ಜನರು ಮೃತಪಟ್ಟಿದ್ದರು.

ಬಿಆರ್‌ಜಿಎಫ್ ಅಡಿಯಲ್ಲಿರುವ 272 ಜಿಲ್ಲೆಗಳಲ್ಲಿ ಸುಮಾರು 54% ಜಿಲ್ಲೆಗಳು ಕೇವಲ ಐದು ರಾಜ್ಯಗಳಿಗೆ ಸೇರಿದೆ. ಅವುಗಳೆಂದರೆ: ಬಿಹಾರ-38, ಉತ್ತರ ಪ್ರದೇಶ-35, ಮಧ್ಯಪ್ರದೇಶ – 30, ಜಾರ್ಖಂಡ್ – 23 ಮತ್ತು ಒಡಿಶಾದ 20 ಜಿಲ್ಲೆಗಳು. ಈ ರಾಜ್ಯಗಳೆ ದೇಶದ ಪ್ರಮುಖ ನಗರಗಳಿಗೆ ಹೆಚ್ಚಿನ ವಲಸೆ ಕಾರ್ಮಿಕರನ್ನು ಒದಗಿಸುತ್ತವೆ.

ಇದನ್ನೂ ಓದಿ: ಕಂಗನಾ ರಾಣಾವತ್‌ಗೆ ಕೊರೊನಾ ಪಾಸಿಟಿವ್: ವೈರಸ್ ನಾಶಗೊಳಿಸುತ್ತೇನೆ ಎಂದ ನಟಿ!

ಕೊರೊನಾ ವೈರಸ್ ಪ್ರಕರಣಗಳ ನಗರ-ಗ್ರಾಮೀಣ ವಿಭಜನೆಯು ನೇರವಾಗಿ ಲಭ್ಯವಿಲ್ಲದಿದ್ದರೂ, ಬಿಆರ್‌ಜಿಎಫ್ ಜಿಲ್ಲೆಗಳಲ್ಲಿನ ಪ್ರಕರಣಗಳು ಮತ್ತು ಸಾವುಗಳ ವಿಶ್ಲೇಷಣೆಯು ಭಾರತದಲ್ಲಿ ಗ್ರಾಮೀಣ ಹರಡುವಿಕೆಯನ್ನು ಸೂಚಿಸುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ, 243 ಜಿಲ್ಲೆಗಳಲ್ಲಿನ ಸೋಂಕುಗಳ ಸಂಖ್ಯೆ ಮೊದಲ ಮತ್ತು ಎರಡನೆಯ ಅಲೆಗಳ ನಡುವೆ ನಾಲ್ಕು ಪಟ್ಟು ಹೆಚ್ಚಾಗಿದೆ. ಆದರೆ ದೇಶದ ಒಟ್ಟು ಸೋಂಕುಗಳ ಶೇಕಡಾವಾರು ಏರಿಕೆಯ ಪ್ರಮಾಣವು ಕೇವಲ 18.6% ರಷ್ಟಿದೆ. ಆದರೆ ಈ ಜಿಲ್ಲೆಗಳಲ್ಲಿ ಸಾವುಗಳು ಗಮನಾರ್ಹವಾಗಿ ಏರಿಕೆಯಾಗಿದೆ.

ಈ 272 ಜಿಲ್ಲೆಗಳಲ್ಲಿ ಹೆಚ್ಚಿನ ಜಿಲ್ಲೆಗಳು ಮೂಲಭೂತ ಆರೋಗ್ಯ ಸೌಲಭ್ಯಗಳನ್ನು ಮಾತ್ರ ಹೊಂದಿವೆ. ರಾಜ್ಯಗಳು ನಿರ್ಮಿಸುತ್ತಿರುವ ಹೊಸ ಮೂಲಸೌಕರ್ಯಗಳು ಹೆಚ್ಚಾಗಿ ದೊಡ್ಡ ಪಟ್ಟಣಗಳು ​​ಮತ್ತು ನಗರಗಳಲ್ಲಿವೆ. ಇದರ ಪರಿಣಾಮವಾಗಿ, ಈ ಜಿಲ್ಲೆಗಳಿಂದ ಹತ್ತಿರದ ದೊಡ್ಡ ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಿದ್ದಾರೆ, ಇದು ಪಟ್ಟಣಗಳು ​​ಮತ್ತು ನಗರಗಳಲ್ಲಿ ಈಗಾಗಲೇ ಒತ್ತಡಕ್ಕೊಳಗಾದ ಮೂಲಸೌಕರ್ಯಗಳ ಮೇಲೆ ಹೊರೆಯನ್ನು ಹೆಚ್ಚಿಸುತ್ತಿದೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...