Homeಕರೋನಾ ತಲ್ಲಣಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

ಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

- Advertisement -
- Advertisement -

ಕೊರೊನಾ ಎರಡನೇ ಅಲೆಯ ಪ್ರಕರಣಗಳು ಗ್ರಾಮೀಣ ಭಾರತದಲ್ಲಿ ಉಲ್ಬಣಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಗಿದ ಮೊದಲ ಅಲೆಗೆ ಹೋಲಿಸಿದರೆ, ಭಾರತದ ಒಳನಾಡು ಅಥವಾ ಹಿಂದುಳಿದ ಪ್ರದೇಶಗಳಲ್ಲಿ ಸೋಂಕಿನ ಪ್ರಕರಣಗಳು ಮತ್ತು ಅದರಿಂದಾಗಿ ಮೃತಪಟ್ಟವರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ.

ಹಿಂದುಳಿದ ಪ್ರದೇಶ ಅನುದಾನ ನಿಧಿ (ಬಿಆರ್‌ಜಿಎಫ್) ವ್ಯಾಪ್ತಿಗೆ 272 ಜಿಲ್ಲೆಗಳು ಒಳಪಡುತ್ತದೆ. ಇದರಲ್ಲಿ 243 ಜಿಲ್ಲೆಗಳ ಮಾಹಿತಿ ಲಭ್ಯವಿದ್ದು, ಈ ಮಾಹಿತಿಯಂತೆ ಮೇ 5 ರ ಹೊತ್ತಿಗೆ ಇಲ್ಲಿನ 39.16 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಕೊರೊನಾ ಮೊದಲ ಅಲೆಯ ಉತ್ತುಂಗದ ಸಮಯವಾದ ಸೆಪ್ಟೆಂಬರ್ 16, 2020 ರಲ್ಲಿ ಈ ಜಿಲ್ಲೆಗಳಲ್ಲಿ 9.5 ಲಕ್ಷ ಸೋಂಕುಗಳಷ್ಟೇ ಇದ್ದವು. ಇದಕ್ಕೆ ಹೋಲಿಸಿದರೆ ಪ್ರಸ್ತುತ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಈ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳು ಕೂಡಾ ಎರಡನೇ ಅಲೆಯಲ್ಲಿ ಹೆಚ್ಚಾಗಿದ್ದು, ಗರಿಷ್ಠ ಮಟ್ಟದಲ್ಲಿದೆ. ಸಕ್ರಿಯ ಸೋಂಕಿತರು ಇದೀಗ ಮೊದಲ ಅಲೆಗಿಂತ 4.2 ಪಟ್ಟು ಹೆಚ್ಚಾಗಿದ್ದಾರೆ. ಈ ಜಿಲ್ಲೆಗಳಲ್ಲಿ ಪ್ರಸ್ತುತ 7.15 ಲಕ್ಷಕ್ಕೂ ಹೆಚ್ಚು ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳು ಹೆಚ್ಚಾಗಿ ಇಲ್ಲದೆ ಇರುವುದರಿಂದ ಇದು ಜನರನ್ನು ತೀವ್ರ ಸಂಕಷ್ಟಕ್ಕೆ ಈಡಾಗಿಸುತ್ತದೆ.

ಇದರ ಪ್ರತಿಫಲವೆ ಈ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ವರದಿಯಾಗಿವೆ. ಮೇ 5 ರ ಹೊತ್ತಿಗೆ, ಈ 243 ಜಿಲ್ಲೆಗಳು ಒಟ್ಟು 36,523 ಸಾವುಗಳನ್ನು ವರದಿಯಾಗಿವೆ. ಈ ಸಂಖ್ಯೆಯು ಕಳೆದ ವರ್ಷದಲ್ಲಿ ಮೊದಲ ಅಲೆಯ ಸಮಯದಲ್ಲಿ ಸಾವಿಗೀಡಾದವರ ಸಂಖ್ಯೆಗಿಂತ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ. ಸೆಪ್ಟೆಂಬರ್ 16, 2020 ರ ಹೊತ್ತಿಗೆ, ಈ ಜಿಲ್ಲೆಗಳಲ್ಲಿ 9,555 ಜನರು ಮೃತಪಟ್ಟಿದ್ದರು.

ಬಿಆರ್‌ಜಿಎಫ್ ಅಡಿಯಲ್ಲಿರುವ 272 ಜಿಲ್ಲೆಗಳಲ್ಲಿ ಸುಮಾರು 54% ಜಿಲ್ಲೆಗಳು ಕೇವಲ ಐದು ರಾಜ್ಯಗಳಿಗೆ ಸೇರಿದೆ. ಅವುಗಳೆಂದರೆ: ಬಿಹಾರ-38, ಉತ್ತರ ಪ್ರದೇಶ-35, ಮಧ್ಯಪ್ರದೇಶ – 30, ಜಾರ್ಖಂಡ್ – 23 ಮತ್ತು ಒಡಿಶಾದ 20 ಜಿಲ್ಲೆಗಳು. ಈ ರಾಜ್ಯಗಳೆ ದೇಶದ ಪ್ರಮುಖ ನಗರಗಳಿಗೆ ಹೆಚ್ಚಿನ ವಲಸೆ ಕಾರ್ಮಿಕರನ್ನು ಒದಗಿಸುತ್ತವೆ.

ಇದನ್ನೂ ಓದಿ: ಕಂಗನಾ ರಾಣಾವತ್‌ಗೆ ಕೊರೊನಾ ಪಾಸಿಟಿವ್: ವೈರಸ್ ನಾಶಗೊಳಿಸುತ್ತೇನೆ ಎಂದ ನಟಿ!

ಕೊರೊನಾ ವೈರಸ್ ಪ್ರಕರಣಗಳ ನಗರ-ಗ್ರಾಮೀಣ ವಿಭಜನೆಯು ನೇರವಾಗಿ ಲಭ್ಯವಿಲ್ಲದಿದ್ದರೂ, ಬಿಆರ್‌ಜಿಎಫ್ ಜಿಲ್ಲೆಗಳಲ್ಲಿನ ಪ್ರಕರಣಗಳು ಮತ್ತು ಸಾವುಗಳ ವಿಶ್ಲೇಷಣೆಯು ಭಾರತದಲ್ಲಿ ಗ್ರಾಮೀಣ ಹರಡುವಿಕೆಯನ್ನು ಸೂಚಿಸುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ, 243 ಜಿಲ್ಲೆಗಳಲ್ಲಿನ ಸೋಂಕುಗಳ ಸಂಖ್ಯೆ ಮೊದಲ ಮತ್ತು ಎರಡನೆಯ ಅಲೆಗಳ ನಡುವೆ ನಾಲ್ಕು ಪಟ್ಟು ಹೆಚ್ಚಾಗಿದೆ. ಆದರೆ ದೇಶದ ಒಟ್ಟು ಸೋಂಕುಗಳ ಶೇಕಡಾವಾರು ಏರಿಕೆಯ ಪ್ರಮಾಣವು ಕೇವಲ 18.6% ರಷ್ಟಿದೆ. ಆದರೆ ಈ ಜಿಲ್ಲೆಗಳಲ್ಲಿ ಸಾವುಗಳು ಗಮನಾರ್ಹವಾಗಿ ಏರಿಕೆಯಾಗಿದೆ.

ಈ 272 ಜಿಲ್ಲೆಗಳಲ್ಲಿ ಹೆಚ್ಚಿನ ಜಿಲ್ಲೆಗಳು ಮೂಲಭೂತ ಆರೋಗ್ಯ ಸೌಲಭ್ಯಗಳನ್ನು ಮಾತ್ರ ಹೊಂದಿವೆ. ರಾಜ್ಯಗಳು ನಿರ್ಮಿಸುತ್ತಿರುವ ಹೊಸ ಮೂಲಸೌಕರ್ಯಗಳು ಹೆಚ್ಚಾಗಿ ದೊಡ್ಡ ಪಟ್ಟಣಗಳು ​​ಮತ್ತು ನಗರಗಳಲ್ಲಿವೆ. ಇದರ ಪರಿಣಾಮವಾಗಿ, ಈ ಜಿಲ್ಲೆಗಳಿಂದ ಹತ್ತಿರದ ದೊಡ್ಡ ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಿದ್ದಾರೆ, ಇದು ಪಟ್ಟಣಗಳು ​​ಮತ್ತು ನಗರಗಳಲ್ಲಿ ಈಗಾಗಲೇ ಒತ್ತಡಕ್ಕೊಳಗಾದ ಮೂಲಸೌಕರ್ಯಗಳ ಮೇಲೆ ಹೊರೆಯನ್ನು ಹೆಚ್ಚಿಸುತ್ತಿದೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...