Homeಕರೋನಾ ತಲ್ಲಣಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

ಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

- Advertisement -
- Advertisement -

ಕೊರೊನಾ ಎರಡನೇ ಅಲೆಯ ಪ್ರಕರಣಗಳು ಗ್ರಾಮೀಣ ಭಾರತದಲ್ಲಿ ಉಲ್ಬಣಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಗಿದ ಮೊದಲ ಅಲೆಗೆ ಹೋಲಿಸಿದರೆ, ಭಾರತದ ಒಳನಾಡು ಅಥವಾ ಹಿಂದುಳಿದ ಪ್ರದೇಶಗಳಲ್ಲಿ ಸೋಂಕಿನ ಪ್ರಕರಣಗಳು ಮತ್ತು ಅದರಿಂದಾಗಿ ಮೃತಪಟ್ಟವರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ.

ಹಿಂದುಳಿದ ಪ್ರದೇಶ ಅನುದಾನ ನಿಧಿ (ಬಿಆರ್‌ಜಿಎಫ್) ವ್ಯಾಪ್ತಿಗೆ 272 ಜಿಲ್ಲೆಗಳು ಒಳಪಡುತ್ತದೆ. ಇದರಲ್ಲಿ 243 ಜಿಲ್ಲೆಗಳ ಮಾಹಿತಿ ಲಭ್ಯವಿದ್ದು, ಈ ಮಾಹಿತಿಯಂತೆ ಮೇ 5 ರ ಹೊತ್ತಿಗೆ ಇಲ್ಲಿನ 39.16 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಕೊರೊನಾ ಮೊದಲ ಅಲೆಯ ಉತ್ತುಂಗದ ಸಮಯವಾದ ಸೆಪ್ಟೆಂಬರ್ 16, 2020 ರಲ್ಲಿ ಈ ಜಿಲ್ಲೆಗಳಲ್ಲಿ 9.5 ಲಕ್ಷ ಸೋಂಕುಗಳಷ್ಟೇ ಇದ್ದವು. ಇದಕ್ಕೆ ಹೋಲಿಸಿದರೆ ಪ್ರಸ್ತುತ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಈ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳು ಕೂಡಾ ಎರಡನೇ ಅಲೆಯಲ್ಲಿ ಹೆಚ್ಚಾಗಿದ್ದು, ಗರಿಷ್ಠ ಮಟ್ಟದಲ್ಲಿದೆ. ಸಕ್ರಿಯ ಸೋಂಕಿತರು ಇದೀಗ ಮೊದಲ ಅಲೆಗಿಂತ 4.2 ಪಟ್ಟು ಹೆಚ್ಚಾಗಿದ್ದಾರೆ. ಈ ಜಿಲ್ಲೆಗಳಲ್ಲಿ ಪ್ರಸ್ತುತ 7.15 ಲಕ್ಷಕ್ಕೂ ಹೆಚ್ಚು ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳು ಹೆಚ್ಚಾಗಿ ಇಲ್ಲದೆ ಇರುವುದರಿಂದ ಇದು ಜನರನ್ನು ತೀವ್ರ ಸಂಕಷ್ಟಕ್ಕೆ ಈಡಾಗಿಸುತ್ತದೆ.

ಇದರ ಪ್ರತಿಫಲವೆ ಈ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ವರದಿಯಾಗಿವೆ. ಮೇ 5 ರ ಹೊತ್ತಿಗೆ, ಈ 243 ಜಿಲ್ಲೆಗಳು ಒಟ್ಟು 36,523 ಸಾವುಗಳನ್ನು ವರದಿಯಾಗಿವೆ. ಈ ಸಂಖ್ಯೆಯು ಕಳೆದ ವರ್ಷದಲ್ಲಿ ಮೊದಲ ಅಲೆಯ ಸಮಯದಲ್ಲಿ ಸಾವಿಗೀಡಾದವರ ಸಂಖ್ಯೆಗಿಂತ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ. ಸೆಪ್ಟೆಂಬರ್ 16, 2020 ರ ಹೊತ್ತಿಗೆ, ಈ ಜಿಲ್ಲೆಗಳಲ್ಲಿ 9,555 ಜನರು ಮೃತಪಟ್ಟಿದ್ದರು.

ಬಿಆರ್‌ಜಿಎಫ್ ಅಡಿಯಲ್ಲಿರುವ 272 ಜಿಲ್ಲೆಗಳಲ್ಲಿ ಸುಮಾರು 54% ಜಿಲ್ಲೆಗಳು ಕೇವಲ ಐದು ರಾಜ್ಯಗಳಿಗೆ ಸೇರಿದೆ. ಅವುಗಳೆಂದರೆ: ಬಿಹಾರ-38, ಉತ್ತರ ಪ್ರದೇಶ-35, ಮಧ್ಯಪ್ರದೇಶ – 30, ಜಾರ್ಖಂಡ್ – 23 ಮತ್ತು ಒಡಿಶಾದ 20 ಜಿಲ್ಲೆಗಳು. ಈ ರಾಜ್ಯಗಳೆ ದೇಶದ ಪ್ರಮುಖ ನಗರಗಳಿಗೆ ಹೆಚ್ಚಿನ ವಲಸೆ ಕಾರ್ಮಿಕರನ್ನು ಒದಗಿಸುತ್ತವೆ.

ಇದನ್ನೂ ಓದಿ: ಕಂಗನಾ ರಾಣಾವತ್‌ಗೆ ಕೊರೊನಾ ಪಾಸಿಟಿವ್: ವೈರಸ್ ನಾಶಗೊಳಿಸುತ್ತೇನೆ ಎಂದ ನಟಿ!

ಕೊರೊನಾ ವೈರಸ್ ಪ್ರಕರಣಗಳ ನಗರ-ಗ್ರಾಮೀಣ ವಿಭಜನೆಯು ನೇರವಾಗಿ ಲಭ್ಯವಿಲ್ಲದಿದ್ದರೂ, ಬಿಆರ್‌ಜಿಎಫ್ ಜಿಲ್ಲೆಗಳಲ್ಲಿನ ಪ್ರಕರಣಗಳು ಮತ್ತು ಸಾವುಗಳ ವಿಶ್ಲೇಷಣೆಯು ಭಾರತದಲ್ಲಿ ಗ್ರಾಮೀಣ ಹರಡುವಿಕೆಯನ್ನು ಸೂಚಿಸುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ, 243 ಜಿಲ್ಲೆಗಳಲ್ಲಿನ ಸೋಂಕುಗಳ ಸಂಖ್ಯೆ ಮೊದಲ ಮತ್ತು ಎರಡನೆಯ ಅಲೆಗಳ ನಡುವೆ ನಾಲ್ಕು ಪಟ್ಟು ಹೆಚ್ಚಾಗಿದೆ. ಆದರೆ ದೇಶದ ಒಟ್ಟು ಸೋಂಕುಗಳ ಶೇಕಡಾವಾರು ಏರಿಕೆಯ ಪ್ರಮಾಣವು ಕೇವಲ 18.6% ರಷ್ಟಿದೆ. ಆದರೆ ಈ ಜಿಲ್ಲೆಗಳಲ್ಲಿ ಸಾವುಗಳು ಗಮನಾರ್ಹವಾಗಿ ಏರಿಕೆಯಾಗಿದೆ.

ಈ 272 ಜಿಲ್ಲೆಗಳಲ್ಲಿ ಹೆಚ್ಚಿನ ಜಿಲ್ಲೆಗಳು ಮೂಲಭೂತ ಆರೋಗ್ಯ ಸೌಲಭ್ಯಗಳನ್ನು ಮಾತ್ರ ಹೊಂದಿವೆ. ರಾಜ್ಯಗಳು ನಿರ್ಮಿಸುತ್ತಿರುವ ಹೊಸ ಮೂಲಸೌಕರ್ಯಗಳು ಹೆಚ್ಚಾಗಿ ದೊಡ್ಡ ಪಟ್ಟಣಗಳು ​​ಮತ್ತು ನಗರಗಳಲ್ಲಿವೆ. ಇದರ ಪರಿಣಾಮವಾಗಿ, ಈ ಜಿಲ್ಲೆಗಳಿಂದ ಹತ್ತಿರದ ದೊಡ್ಡ ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಿದ್ದಾರೆ, ಇದು ಪಟ್ಟಣಗಳು ​​ಮತ್ತು ನಗರಗಳಲ್ಲಿ ಈಗಾಗಲೇ ಒತ್ತಡಕ್ಕೊಳಗಾದ ಮೂಲಸೌಕರ್ಯಗಳ ಮೇಲೆ ಹೊರೆಯನ್ನು ಹೆಚ್ಚಿಸುತ್ತಿದೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...