Homeಅಂತರಾಷ್ಟ್ರೀಯಕೊರೊನಾ ಸೇವೆ: ಭಾರತೀಯ ಮೂಲದ ವೈದ್ಯ ರವಿ ಸೋಲಂಕಿಗೆ ಇಂಗ್ಲೆಂಡ್ ಕಂಪನಿ ಪ್ರಶಸ್ತಿ

ಕೊರೊನಾ ಸೇವೆ: ಭಾರತೀಯ ಮೂಲದ ವೈದ್ಯ ರವಿ ಸೋಲಂಕಿಗೆ ಇಂಗ್ಲೆಂಡ್ ಕಂಪನಿ ಪ್ರಶಸ್ತಿ

- Advertisement -
- Advertisement -

ಇಂಗ್ಲೆಂಡ್‌ನಾದ್ಯಂತ ಕೊರೊನಾವನ್ನು ನಿಭಾಯಿಸುವಲ್ಲಿನ ಅಸಾಧಾರಣ ಸಾಧನೆಗಳಿಗಾಗಿ ರಾಯಲ್ ಅಕಾಡೆಮಿ ಆಫ್ ಎಂಜಿನಿಯರಿಂಗ್ ನೀಡುವ, ಸಾಂಕ್ರಾಮಿಕ ಸೇವೆಗಾಗಿ ವಿಶೇಷ ಪ್ರಶಸ್ತಿಗಳ 19 ಜನ ವಿಜೇತರಲ್ಲಿ ಭಾರತೀಯ ಮೂಲದ ವೈದ್ಯ ರವಿ ಸೋಲಂಕಿ ಕೂಡ ಸೇರಿದ್ದಾರೆ.

ಹೊಸ ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಚಾರಿಟಿಯು, ಸುರಕ್ಷಿತ ಮತ್ತು ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ವೆಬ್‌ಸೈಟ್ ನಿರ್ಮಿಸಲು ಸಹಾಯ ಮಾಡುವ ಸ್ವಯಂಸೇವಕ ಕೆಲಸಕ್ಕಾಗಿ, ನ್ಯೂರೋ ಡಿಜೆನೆರೆಟಿವ್ ಕಾಯಿಲೆಗಳ ಬಗ್ಗೆ ಕೆಲಸ ಮಾಡುವ ವೈದ್ಯ ರವಿ ಸೋಲಂಕಿ ಮತ್ತು ಎಂಜಿನಿಯರ್ ರೇಮಂಡ್ ಸೀಮ್ಸ್ ಅವರಿಗೆ ಈ ಪ್ರಶಸ್ತಿ ನೀಡಿದೆ. ಈ ಕೆಲಸಕ್ಕಾಗಿ ಹೆಚ್ಚು ಸಮಯ ದುಡಿದು, ಉನ್ನತ ಸೇವೆ ಸಲ್ಲಿಸಿದ್ದಕ್ಕಾಗಿ ಇವರಿಬ್ಬರನ್ನು ಶ್ಲಾಘಿಸಲಾಯಿತು.

“ರವಿ ಮತ್ತು ರೇಮಂಡ್ ಅವರ ರೌಂಡ್-ದಿ-ಕ್ಲಾಕ್ ಕೊಡುಗೆಗಳು ಹೊಸ ಚಾರಿಟಿಯನ್ನು ಸಾರ್ವಜನಿಕ ಮನಸ್ಥಿತಿಗೆ ತಕ್ಕಂತೆ, ದೇಣಿಗೆಗಳನ್ನು ತ್ವರಿತವಾಗಿ ಸಂಗ್ರಹಿಸಲು ಅವಕಾಶ ಮಾಡಿಕೊಟ್ಟವು. ಇದರಿಂದಾಗಿ ಇಂಗ್ಲೆಂಡ್‌ನಲ್ಲಿ ಕೊರೊನಾ ಬಿಕ್ಕಟ್ಟು ಉತ್ತುಂಗದಲ್ಲಿದ್ದಾಗ ಎನ್ಎಚ್ಎಸ್ ಕಾರ್ಮಿಕರು ಅಗತ್ಯವಾದ ಬೆಂಬಲವನ್ನು ಪಡೆಯಬಹುದು” ಎಂದು ಉಲ್ಲೇಖಿಸಲಾಗಿದೆ.

“ಅವರ ತಾಂತ್ರಿಕ ತಿಳಿವಳಿಕೆ ಮೂರು ತಿಂಗಳಲ್ಲಿ 90,000 ಎನ್‌ಎಚ್‌ಎಸ್ ಕಾರ್ಮಿಕರನ್ನು ಬೆಂಬಲಿಸಲು ಹೀರೋಸ್‌ಗೆ ಅವಕಾಶ ಮಾಡಿಕೊಟ್ಟಿದೆ. ಡಿಜಿಟಲ್ ಪ್ಲಾಟ್‌ಫಾರ್ಮ್ ವಿಸ್ತರಿಸಲು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಒದಗಿಸುವ ಬೆಂಬಲವನ್ನು ಮುಂದುವರೆಸಲು ತಂಡದ ಕಾರ್ಯಗಳು ನಡೆಯುತ್ತಿವೆ” ಎಂದು ಅದು ಹೇಳಿದೆ.

ಎರಡು ದಿನಗಳಿಗಿಂತ ಕಡಿಮೆ ಅವಧಿಯಲ್ಲಿ, ಇದರ ಮೂಲಕ 5,43,000 ಕ್ಕೂ ಹೆಚ್ಚು ವಸ್ತುಗಳನ್ನು, ಸುಸ್ಥಿರ ಪಿಪಿಇಯಿಂದ ಮಕ್ಕಳ ಆರೈಕೆ ಮತ್ತು ಸಮಾಲೋಚನೆ ಸೇವೆಗಳವರೆಗೆ ಅಗತ್ಯ ಸೌಲಭ್ಯಗಳನ್ನು ಎನ್‌ಎಚ್‌ಎಸ್ ಕಾರ್ಮಿಕರಿಗೆ ಒದಗಿಸಲಾಗಿದೆ.

ಈ ವರ್ಷದ ಕೊನೆಯಲ್ಲಿ ಎಲ್ಲಾ 19 ವಿಜೇತರಿಗೆ ಪದಕಗಳನ್ನು ನೀಡಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೊರೊನಾ ಸಾಂಕ್ರಾಮಿಕವು ನಮ್ಮ ಕಾಲದ ಅತಿದೊಡ್ಡ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟು. ಇದರಿಂದ ಸಮಾಜವು ಅನೇಕ ಸವಾಲುಗಳನ್ನು ಎದುರಿಸಿದೆ. ಎಂಜಿನಿಯರಿಂಗ್ ಪರಿಣತಿ ಮತ್ತು ನಾವೀನ್ಯತೆಯು ಜೀವಗಳನ್ನು ಉಳಿಸಲು ಮತ್ತು ಜೀವನೋಪಾಯವನ್ನು ರಕ್ಷಿಸುವ ಜಾಗತಿಕ ಹೋರಾಟದ ಕೇಂದ್ರವಾಗಿದೆ ಎಂದು ರಾಯಲ್ ಅಕಾಡೆಮಿ ಆಫ್ ಎಂಜಿನಿಯರಿಂಗ್ ಅಧ್ಯಕ್ಷ ಪ್ರೊಫೆಸರ್ ಸರ್ ಜಿಮ್ ಮೆಕ್ಡೊನಾಲ್ಡ್ ಹೇಳಿದ್ದಾರೆ.

ತಮ್ಮ ತರಬೇತಿ ಮತ್ತು ಕೌಶಲ್ಯಗಳನ್ನು ಬಳಸಿಕೊಂಡು ಹಲವಾರು ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಕಂಡುಹಿಡಿಯಲು ಮತ್ತು ಅದರ ಪರಿಣಾಮವನ್ನು ತಗ್ಗಿಸಲು ಸಹಾಯ ಮಾಡುವ ಎಂಜಿನಿಯರ್‌ಗಳ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...