Homeಅಂತರಾಷ್ಟ್ರೀಯಕೊರೊನಾ ಸೇವೆ: ಭಾರತೀಯ ಮೂಲದ ವೈದ್ಯ ರವಿ ಸೋಲಂಕಿಗೆ ಇಂಗ್ಲೆಂಡ್ ಕಂಪನಿ ಪ್ರಶಸ್ತಿ

ಕೊರೊನಾ ಸೇವೆ: ಭಾರತೀಯ ಮೂಲದ ವೈದ್ಯ ರವಿ ಸೋಲಂಕಿಗೆ ಇಂಗ್ಲೆಂಡ್ ಕಂಪನಿ ಪ್ರಶಸ್ತಿ

- Advertisement -
- Advertisement -

ಇಂಗ್ಲೆಂಡ್‌ನಾದ್ಯಂತ ಕೊರೊನಾವನ್ನು ನಿಭಾಯಿಸುವಲ್ಲಿನ ಅಸಾಧಾರಣ ಸಾಧನೆಗಳಿಗಾಗಿ ರಾಯಲ್ ಅಕಾಡೆಮಿ ಆಫ್ ಎಂಜಿನಿಯರಿಂಗ್ ನೀಡುವ, ಸಾಂಕ್ರಾಮಿಕ ಸೇವೆಗಾಗಿ ವಿಶೇಷ ಪ್ರಶಸ್ತಿಗಳ 19 ಜನ ವಿಜೇತರಲ್ಲಿ ಭಾರತೀಯ ಮೂಲದ ವೈದ್ಯ ರವಿ ಸೋಲಂಕಿ ಕೂಡ ಸೇರಿದ್ದಾರೆ.

ಹೊಸ ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಚಾರಿಟಿಯು, ಸುರಕ್ಷಿತ ಮತ್ತು ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ವೆಬ್‌ಸೈಟ್ ನಿರ್ಮಿಸಲು ಸಹಾಯ ಮಾಡುವ ಸ್ವಯಂಸೇವಕ ಕೆಲಸಕ್ಕಾಗಿ, ನ್ಯೂರೋ ಡಿಜೆನೆರೆಟಿವ್ ಕಾಯಿಲೆಗಳ ಬಗ್ಗೆ ಕೆಲಸ ಮಾಡುವ ವೈದ್ಯ ರವಿ ಸೋಲಂಕಿ ಮತ್ತು ಎಂಜಿನಿಯರ್ ರೇಮಂಡ್ ಸೀಮ್ಸ್ ಅವರಿಗೆ ಈ ಪ್ರಶಸ್ತಿ ನೀಡಿದೆ. ಈ ಕೆಲಸಕ್ಕಾಗಿ ಹೆಚ್ಚು ಸಮಯ ದುಡಿದು, ಉನ್ನತ ಸೇವೆ ಸಲ್ಲಿಸಿದ್ದಕ್ಕಾಗಿ ಇವರಿಬ್ಬರನ್ನು ಶ್ಲಾಘಿಸಲಾಯಿತು.

“ರವಿ ಮತ್ತು ರೇಮಂಡ್ ಅವರ ರೌಂಡ್-ದಿ-ಕ್ಲಾಕ್ ಕೊಡುಗೆಗಳು ಹೊಸ ಚಾರಿಟಿಯನ್ನು ಸಾರ್ವಜನಿಕ ಮನಸ್ಥಿತಿಗೆ ತಕ್ಕಂತೆ, ದೇಣಿಗೆಗಳನ್ನು ತ್ವರಿತವಾಗಿ ಸಂಗ್ರಹಿಸಲು ಅವಕಾಶ ಮಾಡಿಕೊಟ್ಟವು. ಇದರಿಂದಾಗಿ ಇಂಗ್ಲೆಂಡ್‌ನಲ್ಲಿ ಕೊರೊನಾ ಬಿಕ್ಕಟ್ಟು ಉತ್ತುಂಗದಲ್ಲಿದ್ದಾಗ ಎನ್ಎಚ್ಎಸ್ ಕಾರ್ಮಿಕರು ಅಗತ್ಯವಾದ ಬೆಂಬಲವನ್ನು ಪಡೆಯಬಹುದು” ಎಂದು ಉಲ್ಲೇಖಿಸಲಾಗಿದೆ.

“ಅವರ ತಾಂತ್ರಿಕ ತಿಳಿವಳಿಕೆ ಮೂರು ತಿಂಗಳಲ್ಲಿ 90,000 ಎನ್‌ಎಚ್‌ಎಸ್ ಕಾರ್ಮಿಕರನ್ನು ಬೆಂಬಲಿಸಲು ಹೀರೋಸ್‌ಗೆ ಅವಕಾಶ ಮಾಡಿಕೊಟ್ಟಿದೆ. ಡಿಜಿಟಲ್ ಪ್ಲಾಟ್‌ಫಾರ್ಮ್ ವಿಸ್ತರಿಸಲು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಒದಗಿಸುವ ಬೆಂಬಲವನ್ನು ಮುಂದುವರೆಸಲು ತಂಡದ ಕಾರ್ಯಗಳು ನಡೆಯುತ್ತಿವೆ” ಎಂದು ಅದು ಹೇಳಿದೆ.

ಎರಡು ದಿನಗಳಿಗಿಂತ ಕಡಿಮೆ ಅವಧಿಯಲ್ಲಿ, ಇದರ ಮೂಲಕ 5,43,000 ಕ್ಕೂ ಹೆಚ್ಚು ವಸ್ತುಗಳನ್ನು, ಸುಸ್ಥಿರ ಪಿಪಿಇಯಿಂದ ಮಕ್ಕಳ ಆರೈಕೆ ಮತ್ತು ಸಮಾಲೋಚನೆ ಸೇವೆಗಳವರೆಗೆ ಅಗತ್ಯ ಸೌಲಭ್ಯಗಳನ್ನು ಎನ್‌ಎಚ್‌ಎಸ್ ಕಾರ್ಮಿಕರಿಗೆ ಒದಗಿಸಲಾಗಿದೆ.

ಈ ವರ್ಷದ ಕೊನೆಯಲ್ಲಿ ಎಲ್ಲಾ 19 ವಿಜೇತರಿಗೆ ಪದಕಗಳನ್ನು ನೀಡಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೊರೊನಾ ಸಾಂಕ್ರಾಮಿಕವು ನಮ್ಮ ಕಾಲದ ಅತಿದೊಡ್ಡ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟು. ಇದರಿಂದ ಸಮಾಜವು ಅನೇಕ ಸವಾಲುಗಳನ್ನು ಎದುರಿಸಿದೆ. ಎಂಜಿನಿಯರಿಂಗ್ ಪರಿಣತಿ ಮತ್ತು ನಾವೀನ್ಯತೆಯು ಜೀವಗಳನ್ನು ಉಳಿಸಲು ಮತ್ತು ಜೀವನೋಪಾಯವನ್ನು ರಕ್ಷಿಸುವ ಜಾಗತಿಕ ಹೋರಾಟದ ಕೇಂದ್ರವಾಗಿದೆ ಎಂದು ರಾಯಲ್ ಅಕಾಡೆಮಿ ಆಫ್ ಎಂಜಿನಿಯರಿಂಗ್ ಅಧ್ಯಕ್ಷ ಪ್ರೊಫೆಸರ್ ಸರ್ ಜಿಮ್ ಮೆಕ್ಡೊನಾಲ್ಡ್ ಹೇಳಿದ್ದಾರೆ.

ತಮ್ಮ ತರಬೇತಿ ಮತ್ತು ಕೌಶಲ್ಯಗಳನ್ನು ಬಳಸಿಕೊಂಡು ಹಲವಾರು ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಕಂಡುಹಿಡಿಯಲು ಮತ್ತು ಅದರ ಪರಿಣಾಮವನ್ನು ತಗ್ಗಿಸಲು ಸಹಾಯ ಮಾಡುವ ಎಂಜಿನಿಯರ್‌ಗಳ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....