Homeಕರೋನಾ ತಲ್ಲಣಕೊರೊನಾ: ಜನರಿಗೆ ನೆರವಾಗಿ ಎಂದು ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ‌

ಕೊರೊನಾ: ಜನರಿಗೆ ನೆರವಾಗಿ ಎಂದು ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ‌

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ತೀವ್ರಗೊಳ್ಳುತ್ತಿದ್ದು ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಈ ಸಮಯದಲ್ಲಿ ಜನರಿಗೆ ನೆರವಾಗಿ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷದ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಅವರು, “ಕೋವಿಡ್ 2ನೇ ಅಲೆ ರಾಜ್ಯ ಮತ್ತು ರಾಷ್ಟ್ರವನ್ನು ಬಾಧಿಸುತ್ತಿದೆ. ಈ ಸಂದರ್ಭದಲ್ಲಿ ಭ್ರಷ್ಟ, ಬೇಜವಾಬ್ದಾರಿ, ಅದಕ್ಷ ಮತ್ತು ಜನವಿರೋಧಿ ಸ್ವಭಾವದ ಬಿ.ಜೆ.ಪಿ. ಸರ್ಕಾರಗಳು ರಾಜ್ಯ ಮತ್ತು ರಾಷ್ಟ್ರದಲ್ಲಿ ಅಧಿಕಾರ ನಡೆಸುತ್ತಿವೆ. ತಜ್ಞರುಗಳು ಮತ್ತು ಪರಿಣಿತರು 2020ರ ನವೆಂಬರ್ ತಿಂಗಳಲ್ಲಿಯೇ ಕೋವಿಡ್ 2ನೇ ಅಲೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ಹೊತ್ತಿಗೆ ತನ್ನ ಭೀಕರತೆಯನ್ನು ಪ್ರದರ್ಶಿಸಲಿದೆ ಎಂದು ಹೇಳಿದ್ದರು. ಸದರಿ ವರದಿಗಳನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಬೇಕಾಗಿತ್ತು. ಬದಲಾಗಿ ಕೇಂದ್ರದ ಆರೋಗ್ಯ ಸಚಿವರುಗಳಾದಿಯಾಗಿ ಅನೇಕರು ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿಯೇ ‘ನಾವು ಕೋವಿಡ್ ವಿರುದ್ದ ಜಯ ಸಾಧಿಸುವ ಹಂತಕ್ಕೆ ಬಂದಿದ್ದೇವೆ. ಕೊರೊನಾವನ್ನು ಸಮರ್ಥವಾಗಿ ಎದುರಿಸಿದ್ದೇವೆ ಎಂದು ಜಯಘೋಷ ಮಾಡಲಾರಂಭಿಸಿದರು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕ್ಷಮಿಸಿ, ಕೊರೊನಾ ಲಸಿಕೆ ಎಂದು ತಿಳಿದಿರಲಿಲ್ಲ- ಪತ್ರ ಬರೆದು ಕದ್ದಿದ್ದ ಲಸಿಕೆ ತಂದಿಟ್ಟ ಕಳ್ಳ

“ಆ ಸಂಧರ್ಭದಲ್ಲೂ ಸಹ ವೈದ್ಯಕೀಯ ತಜ್ಞರುಗಳು ನಾವಿನ್ನೂ ಕೊರೊನಾದ ವಿರುದ್ದ ಗೆಲುವು ಸಾಧಿಸಿಲ್ಲ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಭೀಕರವಾಗಿರಲಿದೆ ಎಂದು ಎಚ್ಚರಿಕೆ ನೀಡುತ್ತಲೆ ಬಂದರು. ಈ ಎಚ್ಚರಿಕೆಗಳನ್ನು ಸರ್ಕಾರಗಳು ಕಸದ ಬುಟ್ಟಿಗೆ ಎಸೆದವು. ಸಮರ್ಪಕವಾಗಿ ಟೆಸ್ಟ್‌‌ಗಳನ್ನೂ ಸಹ ನಡೆಸುತ್ತಿಲ್ಲ, ನಡೆಸಿದ ಟೆಸ್ಟ್‌‌ಗಳ ವರದಿ ವಾರವಾದರೂ ಜನರ ಕೈಗೆ ವೈದ್ಯರುಗಳ ಕೈಗೆ ಸಿಗುತ್ತಿಲ್ಲ. ಇದೆಲ್ಲದರಿಂದಾಗಿ ಕೋವಿಡ್‍ನಿಂದ ಮರಣ ಹೊಂದುವವರಷ್ಟೆ ಆತಂಕದಿಂದ ಮರಣ ಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ತಜ್ಞರ ವರದಿಯನ್ನು ಗಂಭೀರವಾಗಿ ಪರಿಗಣಿಸಿ ಲ್ಯಾಬುಗಳು, ಆಸ್ಪತ್ರೆಗಳು, ಹಾಸಿಗೆಗಳು, ಆಕ್ಸಿಜನ್ ವ್ಯವಸ್ಥೆ, ಐ.ಸಿ.ಯು, ವೆಂಟಿಲೇಟರ್‍ಗಳು, ಕೋವಿಡ್ ನಿಯಂತ್ರಣಕ್ಕೆ ಬೇಕಾದ ಔಷಧಿಗಳು ಇತ್ಯಾದಿಯಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದರೆ ಇವತ್ತಿನ ಈ ಅನಾಹುತವನ್ನು ತಪ್ಪಿಸಬಹುದಾಗಿತ್ತು. ಈ ಸಿದ್ದತೆಗಳನ್ನೇನೂ ಮಾಡಿಕೊಳ್ಳದ ಕಾರಣದಿಂದಾಗಿಯೇ ಜನರು ಅನಾಥರಂತೆ ರಸ್ತೆಗಳಲ್ಲಿ, ಆಸ್ಪತ್ರೆಯ ವರಾಂಡಗಳಲ್ಲಿ ಮರಣ ಹೊಂದುತ್ತಿದ್ದಾರೆ. ಹಾಗಾಗಿ ಜನ ಕೊರೊನಾದಿಂದ ಮರಣ ಹೊಂದಿದರು ಎಂಬುದಕ್ಕಿಂತ ಬಿ.ಜೆ.ಪಿ. ಸರ್ಕಾರಗಳು ತಮ್ಮ ಅದಕ್ಷತೆ ಮತ್ತು ಉಡಾಫೆ ಸ್ವಭಾವದಿಂದಾಗಿ ಅಮಾಯಕ ಜನಗಳ ಕೊಲೆಗಳಿಗೆ ಕಾರಣರಾಗುತ್ತಿವೆ. ಮರಣ ಹೊಂದುತ್ತಿರುವ ಬಹುಪಾಲು ಜನರು ರಾಜಕೀಯ ನಿರ್ಲಕ್ಷ್ಯದಿಂದ ಆದ ಕೊಲೆಗಳು ಎನ್ನದೆ ಅನ್ಯ ದಾರಿ ಇಲ್ಲ” ಎಂದು ಅವರ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

“ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರಗಳಿಗೆ ಮರಣ ಹೊಂದಿದವರ ಶವಸಂಸ್ಕಾರವನ್ನೂ ಸಹ ಘನತೆಯಿಂದ ನಡೆಸಲು ಸಾಧ್ಯವಾಗದಷ್ಟರ ಮಟ್ಟಿಗೆ ಪರಿಸ್ಥಿತಿ ಅರಾಜಕವಾಗಿದೆ. ಈ ಬಿ.ಜೆ.ಪಿ. ಸರ್ಕಾರಗಳಿಂದ ಜನ ಏನನ್ನು ನಿರೀಕ್ಷೆ ಮಾಡದಷ್ಟು ಮಟ್ಟಿಗೆ ಹತಶಾರಾಗಿದ್ದಾರೆ. ಕಳೆದ ವರ್ಷ ಕೋವಿಡ್ ಮೊದಲ ಅಲೆ ಅಪ್ಪಳಿಸಿದಾಗ ಮಾಡಿದ ಅರಾಜಕ ಮತ್ತು ತುಘಲಕ್‍ಶಾಹಿ ಆಡಳಿತವನ್ನೇ ಬಿ.ಜೆ.ಪಿ. ಸರ್ಕಾರ ಈಗಲೂ ಮಾಡುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಎರಡೇಟು ತಿನ್ನುತ್ತಿ’; ಆಕ್ಸಿಜನ್ ಸಿಲಿಂಡರ್‌ ಕೇಳಿದ ವ್ಯಕ್ತಿಗೆ ಬೆದರಿಸಿದ ಕೇಂದ್ರ ಸಚಿವ!

“ಸರ್ಕಾರ ಏಕಾಏಕಿ ಕರ್ಫ್ಯೂ ವಿಧಿಸುವುದು, ಬೀದಿಗಳಲ್ಲಿದ್ದ ಜನರ ಮೇಲೆ ಲಾಠಿ ಚಾರ್ಜು ಮಾಡಿ ಓಡಿಸುವುದು. ಅಂಗಡಿ ಮುಂಗಟ್ಟುಗಳನ್ನು ಯಾವುದೇ ಮುನ್ಸೂಚನೆ ನೀಡದೆ ಬಾಗಿಲು ಮುಚ್ಚಿಸುವುದು. ಬಾಯಿಗೆ ಬಂದಂತೆ ಸಚಿವರುಗಳು, ಅಧಿಕಾರಿಗಳು ಮಾತನಾಡಿ ಜನರಲ್ಲಿ ಗೊಂದಲ ಹುಟ್ಟಿಸುವುದನ್ನೇ ಈಗಲೂ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ.

‘‘ಸಂಕಷ್ಟದಲ್ಲಿರುವ ಬಡಜನರು ಹಸಿವಿನಿಂದ ನರಳದಂತೆ ನೋಡಿಕೊಳ್ಳಲು, ಪಡಿತರ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಬೇಕಾಗಿತ್ತು. ಅದರ ಬದಲಾಗಿ ಜನರಿಗೆ ನೀಡುವ ಪಡಿತರ ಅಕ್ಕಿಯನ್ನು 2 ಕೆ.ಜಿ ಗೆ ಇಳಿಸಲಾಗಿದೆ. ಇಂದಿರಾ ಕ್ಯಾಂಟಿನ್‍ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ರೈತರು ಬಳಸುವ ರಸಗೊಬ್ಬರ ದರಗಳನ್ನು ಕ್ವಿಂಟಾಲ್‍ಗೆ 1400 ಗಳಷ್ಟು ಹೆಚ್ಚು ಮಾಡಲಾಗಿದೆ. ಜನರನ್ನು ಶತ್ರುಗಳು ಎಂದು ಭಾವಿಸುವ ಸರ್ಕಾರಗಳು ಮಾತ್ರ ಈ ರೀತಿಯ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯ. ಜನರು ಸಂಕಷ್ಟದಲ್ಲಿರುವಾಗ, ದುಡಿಮೆಯಿಲ್ಲದೆ ಕೈಯಲ್ಲಿ ಹಣವಿಲ್ಲದಿರುವಾಗ ಸರ್ಕಾರ ಅವರ ಕಡೆಯ ಹನಿ ರಕ್ತವನ್ನೂ ಹೀರಲು ಹೊರಟಿದೆ. ಇಂತಹ ಜನದ್ರೋಹಿ ಆಡಳಿತವನ್ನು ನಾನು ಚರಿತ್ರೆಯಲ್ಲಿ ಎಲ್ಲೂ ಓದಿಲ್ಲ ಮತ್ತು ಕೇಳಿಲ್ಲ” ಎಂದು ಪತ್ರದಲ್ಲಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

“ಇಂತಹ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಕಳೆದ ಬಾರಿ ಜನರ ಜೊತೆ ನಿಂತು ಅನ್ನ, ಆಹಾರದ ವ್ಯವಸ್ಥೆಯನ್ನು ಮಾಡಲು ಸಾಕಷ್ಟು ಶ್ರಮಿಸಿದ್ದೀರಿ. ಹಾಗೆಯೇ ರೈತರು ಬೆಳೆದ ತರಕಾರಿ, ಹಣ್ಣು ಇತರೆ ಉತ್ಪನ್ನಗಳನ್ನು ಖರೀದಿಸಿ, ಜನರಿಗೆ ತಲುಪಿಸುವ ಸ್ತುತ್ಯಾರ್ಹವಾದ ಕೆಲಸಗಳನ್ನು ಮಾಡಿದ್ದೀರಿ. ಇವೆಲ್ಲವನ್ನು ಜನತೆ ಕೃತಜ್ಞತೆಯಿಂದ ನೆನೆಸುತ್ತಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಕೋವಿಡ್‍ನ 2ನೇ ಅಲೆ ರಾಕ್ಷಸ ರೂಪವನ್ನು ತಳೆಯುತ್ತಿರುವ ಈ ಸಂದರ್ಭದಲ್ಲೂ ಸಹ ತಾವುಗಳು ಜನರ ಜೊತೆ ನಿಂತು, ಆಸ್ಪತ್ರೆ, ಆಕ್ಸಿಜನ್, ಔಷಧಿಗಳು, ಆಂಬ್ಯುಲೆನ್ಸ್‍ಗಳು, ಇನ್ನಿತರ ಚಿಕಿತ್ಸೆಗಳಿಗೆ ನೆರವಾಗಬೇಕೆಂದು ಹಾಗೂ ಹಸಿವಿನಿಂದ ಬಳಲುತ್ತಿರುವವರಿಗೆ ಅನ್ನ ಆಹಾರದ ವ್ಯವಸ್ಥೆಯನ್ನು ಸಹ ಕಳೆದ ವರ್ಷದಂತೆಯೇ ಈ ವರ್ಷವೂ ಮಾಡುವ ಮೂಲಕ ಜನರ ಸಕಲ ಸಂಕಷ್ಟಗಳಿಗೆ ಸ್ಪಂದಿಸುವ ಮಾನವೀಯ ಕಾರ್ಯಗಳನ್ನು ಮಾಡಬೇಕು” ಎಂದು ಶಾಸಕರೊಂದಿಗೆ ಸಿದ್ದರಾಮಯ್ಯ ಅವರು ವಿನಂತಿ ಮಾಡಿದ್ದಾರೆ.

ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...