ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೋನಾ ವೈರಸ್ ತಗುಲಿದ್ದು, ಅವರನ್ನು ಚಿಕಿತ್ಸೆಗಾಗಿ ಚೆನ್ನೈಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದ ಆರೋಗ್ಯ ಸಚಿವ ಶ್ರೀರಾಮುಲು “ಗಾನ ಗಂಧರ್ವ ಶ್ರೀ #SPBalasubrahmanyam ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಮದ್ರಾಸಿನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ತಮ್ಮ ಆರೋಗ್ಯದ ಕುರಿತು ಯಾರೂ ಆತಂಕಪಡುವ ಅಗತ್ಯವಿಲ್ಲವೆಂದು ಸ್ವತಃ ಅವರೇ ತಿಳಿಸಿದ್ದಾರೆ. ನಮ್ಮೆಲ್ಲರ ಪ್ರೀತಿಯ ಗಾಯಕ, ಶ್ರೀಯುತ ಎಸ್ ಪಿಬಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಓದಿ: ಮಸ್ಕಿಯಿಂದ ರಾಜ್ಯದೆಲ್ಲೆಡೆ ಹೋರಾಟದ ಹಾಡುಗಳನ್ನು ಪಸರಿಸಿದ ಜನಕವಿ ದಾನಪ್ಪ ನಿಲೋಗಲ್
ಬಹುಭಾಷಾ ಗಾಯಕರಾದ ಗಾನ ಗಂಧರ್ವ ಶ್ರೀ #SPBalasubrahmanyam ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ.
ಮದ್ರಾಸಿನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ತಮ್ಮ ಆರೋಗ್ಯದ ಕುರಿತು ಯಾರೂ ಆತಂಕಪಡುವ ಅಗತ್ಯವಿಲ್ಲವೆಂದು ಸ್ವತಃ ತಿಳಿಸಿರುವ ನಮ್ಮೆಲ್ಲರ ಪ್ರೀತಿಯ ಗಾಯಕ, ಶ್ರೀಯುತ ಎಸ್ ಪಿಬಿ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. pic.twitter.com/HJEE0P8Qoc
— B Sriramulu (@sriramulubjp) August 5, 2020
ಬುಧವಾರ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿದ್ದ ಬಾಲಸುಬ್ರಮಣ್ಯಂ ತನ್ನಲ್ಲಿರುವ ಏಕೈಕ ಲಕ್ಷಣವೆಂದರೆ ಶೀತ ಎಂದು ಹೇಳಿಕೊಂಡಿದ್ದರು. ಆದರೆ ಕಳೆದ ಮೂರು ದಿನಗಳಲ್ಲಿ ಅವರಿಗೆ ಎದೆಯ ದಟ್ಟಣೆ ಮತ್ತು ಜ್ವರ ಇತ್ತು ಎಂದು ತಿಳಿದುಬಂದಿದೆ. ಇದೇ ವೇಳೆ ಅವರು ಕಳೆದ ಎರಡು ಮೂರು ದಿನಗಳಿಂದ ನಾನು ಸ್ವಲ್ಪ ಅಸ್ವಸ್ಥತೆಯನ್ನು ಅನುಭವಿಸುತ್ತಿದ್ದೇನೆ ಯಾರು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದರು.
ಓದಿ: ಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ