Homeಮುಖಪುಟಕೊರೊನಾ: ವಲಸೆ ಕಾರ್ಮಿಕರಿಗೆ ವೇತನ ಬೆಂಬಲ ಕೋರಿ ಪಿಎಂಗೆ ಪತ್ರ ಬರೆದ ಸೋನಿಯಾ ಗಾಂಧಿ

ಕೊರೊನಾ: ವಲಸೆ ಕಾರ್ಮಿಕರಿಗೆ ವೇತನ ಬೆಂಬಲ ಕೋರಿ ಪಿಎಂಗೆ ಪತ್ರ ಬರೆದ ಸೋನಿಯಾ ಗಾಂಧಿ

ಕಲ್ಯಾಣ ಮಂಡಳಿಗಳು 49,688.07 ಕೋಟಿ ರೂ.ಗಳನ್ನು ಸೆಸ್‌ ಮೂಲಕ ಸಂಗ್ರಹಿಸಿಲಾಗಿದ್ದು ಆದಾಗ್ಯೂ, ಕೇವಲ 19,379.922 ಕೋಟಿ ರೂ. ಮಾತ್ರ ಖರ್ಚು ಮಾಡಲಾಗಿದೆ..

- Advertisement -
- Advertisement -

ಕೊರೊನಾ ವೈರಸ್ ಭೀತಿಯಿಂದ ಲಾಕ್‌ಡೌನ್‌ ಕಾರಣಕ್ಕೆ ಲಕ್ಷಾಂತರ ನಿರ್ಮಾಣ ಕಾರ್ಮಿಕರಿಗೆ ಆರ್ಥಿಕ ನೆರವು ಸೇರಿದಂತೆ ತುರ್ತು ಕಲ್ಯಾಣ ಕ್ರಮಗಳನ್ನು ರೂಪಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಮಾರ್ಚ್ 23 ರಂದು ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ “ಈ ನಿಟ್ಟಿನಲ್ಲಿ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗಳಿಗೆ ಸಲಹೆ ನೀಡುವಂತೆ” ಕೋರಿದ್ದಾರೆ.

ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಕ್ಯಾಪ್ಟನ್ ಅಮರಿಂದರ್ ಸಿಂಗ್ (ಪಂಜಾಬ್), ಅಶೋಕ್ ಗೆಹ್ಲೋಟ್ (ರಾಜಸ್ಥಾನ), ಭೂಪೇಶ್ ಬಾಗೇಲ್ (ಚತ್ತೀಸ್‌ಗಡ) ಮತ್ತು ವಿ ನಾರಾಯಣಸಾಮಿ (ಪುದುಚೇರಿ) ಯವರಿಗೂ ಸಹ ಸೋನಿಯಾ ಗಾಂಧಿಯವರು ಪತ್ರ ಬರೆದಿದ್ದಾರೆ. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಸೆಸ್ ಬಳಕೆಯಾಗದೆ ಉಳಿದಿರುವುದನ್ನು ಈ ಸಮಯದಲ್ಲಿ ಬಳಸಬೇಕೆಂದು ಕೋರಿದ್ದಾರೆ.

“ಕಳೆದ ವಾರದಲ್ಲಿ, ಭಾರತದ ಪ್ರಮುಖ ನಗರಗಳಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ದೀರ್ಘಕಾಲದ ಆರ್ಥಿಕ ಕುಸಿತದ ಭಯದಿಂದ ತಮ್ಮ ಊರು ಮತ್ತು ಹಳ್ಳಿಗಳಿಗೆ ತೆರಳಿದ್ದಾರೆ. ಭಾರತದ ಎರಡನೇ ಅತಿದೊಡ್ಡ ಉದ್ಯೋಗದಾತರಾಗಿರುವ ನಿರ್ಮಾಣ ಕ್ಷೆತ್ರದ 44 ದಶಲಕ್ಷಕ್ಕೂ ಹೆಚ್ಚು ಕಾರ್ಮಿಕರು ಈಗ ಅನಿಶ್ಚಿತ ಭವಿಷ್ಯವನ್ನು ಎದುರಿಸುತ್ತಿದ್ದಾರೆ. ಅನೇಕರು ನಗರಗಳಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಕಟ್ಟುನಿಟ್ಟಾದ ಲಾಕ್ ಡೌನ್ ಕ್ರಮಗಳಿಂದಾಗಿ ಅವರ ಜೀವನೋಪಾಯದಿಂದ ವಂಚಿತರಾಗಿದ್ದಾರೆ” ಎಂದು ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ (ಉದ್ಯೋಗ ಮತ್ತು ಸೇವೆಯ ಷರತ್ತುಗಳ ನಿಯಂತ್ರಣ) ಕಾಯ್ದೆ 1996 ಅನ್ನು ಉಲ್ಲೇಖಿಸಿರುವ ಅವರು, ಇದು ಕಾರ್ಮಿಕರಿಗೆ ವಿವಿಧ ಕಲ್ಯಾಣ ಕ್ರಮಗಳನ್ನು ಒದಗಿಸಲು ರಾಜ್ಯ ಕಲ್ಯಾಣ ಮಂಡಳಿಗಳು ಮತ್ತು ಕಲ್ಯಾಣ ನಿಧಿಯನ್ನು ಬಳಸಬಹುದೆಂಬುದನ್ನು ನೆನಪಿಸಿದ್ದಾರೆ.

ಮಾರ್ಚ್ 31, 2019 ರವರೆಗೆ ಕಲ್ಯಾಣ ಮಂಡಳಿಗಳು 49,688.07 ಕೋಟಿ ರೂ.ಗಳನ್ನು ಸೆಸ್‌ ಮೂಲಕ ಸಂಗ್ರಹಿಸಿಲಾಗಿದ್ದು ಆದಾಗ್ಯೂ, ಕೇವಲ 19,379.922 ಕೋಟಿ ರೂ. ಮಾತ್ರ ಖರ್ಚು ಮಾಡಲಾಗಿದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷರೂ ಆಗಿರುವ ಸೋನಿಯಾ ಗಾಂಧಿ ಹೇಳಿದ್ದಾರೆ.

ಕೆನಡಾ ಮತ್ತು ಇತರ ಹಲವಾರು ದೇಶಗಳು ತಮ್ಮ ಕೋವಿಡ್ -19 ಆರ್ಥಿಕ ಪ್ರತಿಕ್ರಿಯೆ ಯೋಜನೆಯ ಭಾಗವಾಗಿ ವೇತನ ಸಬ್ಸಿಡಿ ಕ್ರಮಗಳನ್ನು ಘೋಷಿಸಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...