Homeಮುಖಪುಟಕೊರೊನಾ: ವಲಸೆ ಕಾರ್ಮಿಕರಿಗೆ ವೇತನ ಬೆಂಬಲ ಕೋರಿ ಪಿಎಂಗೆ ಪತ್ರ ಬರೆದ ಸೋನಿಯಾ ಗಾಂಧಿ

ಕೊರೊನಾ: ವಲಸೆ ಕಾರ್ಮಿಕರಿಗೆ ವೇತನ ಬೆಂಬಲ ಕೋರಿ ಪಿಎಂಗೆ ಪತ್ರ ಬರೆದ ಸೋನಿಯಾ ಗಾಂಧಿ

ಕಲ್ಯಾಣ ಮಂಡಳಿಗಳು 49,688.07 ಕೋಟಿ ರೂ.ಗಳನ್ನು ಸೆಸ್‌ ಮೂಲಕ ಸಂಗ್ರಹಿಸಿಲಾಗಿದ್ದು ಆದಾಗ್ಯೂ, ಕೇವಲ 19,379.922 ಕೋಟಿ ರೂ. ಮಾತ್ರ ಖರ್ಚು ಮಾಡಲಾಗಿದೆ..

- Advertisement -
- Advertisement -

ಕೊರೊನಾ ವೈರಸ್ ಭೀತಿಯಿಂದ ಲಾಕ್‌ಡೌನ್‌ ಕಾರಣಕ್ಕೆ ಲಕ್ಷಾಂತರ ನಿರ್ಮಾಣ ಕಾರ್ಮಿಕರಿಗೆ ಆರ್ಥಿಕ ನೆರವು ಸೇರಿದಂತೆ ತುರ್ತು ಕಲ್ಯಾಣ ಕ್ರಮಗಳನ್ನು ರೂಪಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಮಾರ್ಚ್ 23 ರಂದು ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ “ಈ ನಿಟ್ಟಿನಲ್ಲಿ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗಳಿಗೆ ಸಲಹೆ ನೀಡುವಂತೆ” ಕೋರಿದ್ದಾರೆ.

ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಕ್ಯಾಪ್ಟನ್ ಅಮರಿಂದರ್ ಸಿಂಗ್ (ಪಂಜಾಬ್), ಅಶೋಕ್ ಗೆಹ್ಲೋಟ್ (ರಾಜಸ್ಥಾನ), ಭೂಪೇಶ್ ಬಾಗೇಲ್ (ಚತ್ತೀಸ್‌ಗಡ) ಮತ್ತು ವಿ ನಾರಾಯಣಸಾಮಿ (ಪುದುಚೇರಿ) ಯವರಿಗೂ ಸಹ ಸೋನಿಯಾ ಗಾಂಧಿಯವರು ಪತ್ರ ಬರೆದಿದ್ದಾರೆ. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಸೆಸ್ ಬಳಕೆಯಾಗದೆ ಉಳಿದಿರುವುದನ್ನು ಈ ಸಮಯದಲ್ಲಿ ಬಳಸಬೇಕೆಂದು ಕೋರಿದ್ದಾರೆ.

“ಕಳೆದ ವಾರದಲ್ಲಿ, ಭಾರತದ ಪ್ರಮುಖ ನಗರಗಳಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ದೀರ್ಘಕಾಲದ ಆರ್ಥಿಕ ಕುಸಿತದ ಭಯದಿಂದ ತಮ್ಮ ಊರು ಮತ್ತು ಹಳ್ಳಿಗಳಿಗೆ ತೆರಳಿದ್ದಾರೆ. ಭಾರತದ ಎರಡನೇ ಅತಿದೊಡ್ಡ ಉದ್ಯೋಗದಾತರಾಗಿರುವ ನಿರ್ಮಾಣ ಕ್ಷೆತ್ರದ 44 ದಶಲಕ್ಷಕ್ಕೂ ಹೆಚ್ಚು ಕಾರ್ಮಿಕರು ಈಗ ಅನಿಶ್ಚಿತ ಭವಿಷ್ಯವನ್ನು ಎದುರಿಸುತ್ತಿದ್ದಾರೆ. ಅನೇಕರು ನಗರಗಳಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಕಟ್ಟುನಿಟ್ಟಾದ ಲಾಕ್ ಡೌನ್ ಕ್ರಮಗಳಿಂದಾಗಿ ಅವರ ಜೀವನೋಪಾಯದಿಂದ ವಂಚಿತರಾಗಿದ್ದಾರೆ” ಎಂದು ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ (ಉದ್ಯೋಗ ಮತ್ತು ಸೇವೆಯ ಷರತ್ತುಗಳ ನಿಯಂತ್ರಣ) ಕಾಯ್ದೆ 1996 ಅನ್ನು ಉಲ್ಲೇಖಿಸಿರುವ ಅವರು, ಇದು ಕಾರ್ಮಿಕರಿಗೆ ವಿವಿಧ ಕಲ್ಯಾಣ ಕ್ರಮಗಳನ್ನು ಒದಗಿಸಲು ರಾಜ್ಯ ಕಲ್ಯಾಣ ಮಂಡಳಿಗಳು ಮತ್ತು ಕಲ್ಯಾಣ ನಿಧಿಯನ್ನು ಬಳಸಬಹುದೆಂಬುದನ್ನು ನೆನಪಿಸಿದ್ದಾರೆ.

ಮಾರ್ಚ್ 31, 2019 ರವರೆಗೆ ಕಲ್ಯಾಣ ಮಂಡಳಿಗಳು 49,688.07 ಕೋಟಿ ರೂ.ಗಳನ್ನು ಸೆಸ್‌ ಮೂಲಕ ಸಂಗ್ರಹಿಸಿಲಾಗಿದ್ದು ಆದಾಗ್ಯೂ, ಕೇವಲ 19,379.922 ಕೋಟಿ ರೂ. ಮಾತ್ರ ಖರ್ಚು ಮಾಡಲಾಗಿದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷರೂ ಆಗಿರುವ ಸೋನಿಯಾ ಗಾಂಧಿ ಹೇಳಿದ್ದಾರೆ.

ಕೆನಡಾ ಮತ್ತು ಇತರ ಹಲವಾರು ದೇಶಗಳು ತಮ್ಮ ಕೋವಿಡ್ -19 ಆರ್ಥಿಕ ಪ್ರತಿಕ್ರಿಯೆ ಯೋಜನೆಯ ಭಾಗವಾಗಿ ವೇತನ ಸಬ್ಸಿಡಿ ಕ್ರಮಗಳನ್ನು ಘೋಷಿಸಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...