Homeಮುಖಪುಟಕಾಂಗ್ರೆಸ್ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಮೂಲಕ ದೇಶಾದ್ಯಂತ ಕೊರೊನಾ ಹರಡಿತು: ಪಿಎಂ ಮೋದಿ

ಕಾಂಗ್ರೆಸ್ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಮೂಲಕ ದೇಶಾದ್ಯಂತ ಕೊರೊನಾ ಹರಡಿತು: ಪಿಎಂ ಮೋದಿ

- Advertisement -
- Advertisement -

ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ಹರಡಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳೆ ಕಾರಣವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸಂಸತ್ತಿನಲ್ಲಿ ಆರೋಪಿಸಿದ್ದಾರೆ. ವಿರೋಧ ಪಕ್ಷಗಳು ಸಕರಾತ್ಮಕವಾಗಿ ಏನನ್ನು ಮಾಡಲಿಲ್ಲ, ಕೋವಿಡ್ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಿ ಎಂದು ಜನರಿಗೆ ಮನವಿ ಮಾಡಲಿಲ್ಲ, ಆದರೆ ದೇಶಾದ್ಯಂತ ಕೋವಿಡ್ ಹರಡಲು ಅವರ ಕೊಡುಗೆ ಸಾಕಷ್ಟಿದೆ ಎಂದು ದೂರಿದ್ದಾರೆ.

“ಮೊದಲ ಕೋವಿಡ್ ಅಲೆಯಲ್ಲಿ ನಾವು ಲಾಕ್‌ಡೌನ್ ಹೇರಿದ್ದೆವು. ವಿಶ್ವ ಆರೋಗ್ಯ ಸಂಸ್ಥೆಯು ನೀವು ಇರುವಲ್ಲಿಯೇ ಇರಿ ಎಂದು ಎಚ್ಚರಿಕೆ ನೀಡಿತ್ತು. ಆದರೆ ಕಾಂಗ್ರೆಸ್ ಪಕ್ಷವು ತನ್ನ ಮಿತಿಯನ್ನು ದಾಟಿತು. ಅದು ಮುಂಬೈ ರೈಲ್ವೆ ಸ್ಟೇಷನ್‌ನಲ್ಲಿ ವಲಸೆ ಕಾರ್ಮಿಕರಿಗೆ ಟಿಕೆಟ್ ಕೊಡಿಸಿ ದೇಶಾದ್ಯಂತ ವೈರಸ್ ಹರಡಿ ಎಂದು ಹುರಿದುಂಬಿಸಿತು” ಎಂದು ನರೇಂದ್ರ ಮೋದಿ ಆರೋಪಿಸಿದ್ದಾರೆ.

ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳೇ ಕೋವಿಡ್ ಹರಡಲು ಕಾರಣವಾಗಿವೆ. ಅವು ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡಿದವು. ದೆಹಲಿ ಸರ್ಕಾರವು ವಾಹನಗಳಲ್ಲಿ ಮೈಕ್ ಹಾಕಿಕೊಂಡು ನಿಮಗಾಗಿ ಬಸ್ ವ್ಯವಸ್ಥೆ ಮಾಡಿದ್ದೇವೆ ಎಂದು ಸಾರಿತು. ಹಾಗಾಗಿ ಉತ್ತರ ಪ್ರದೇಶ ಸೇರಿದಂತೆ ಯಾವ ರಾಜ್ಯಗಳಲ್ಲಿ ಕೊರೊನಾ ಇರಲಿಲ್ಲವೋ ಅಲ್ಲಿಯೂ ಕೊರೊನಾ ಹರಡಲು ಕಾರಣವಾಯಿತು ಎಂದು ದೂರಿದ್ದಾರೆ.

ಕೆಲವರು ಕೊರೊನಾ ಮೋದಿಯವರ ವರ್ಚಸ್ಸನ್ನು ಹಾಳು ಮಾಡುತ್ತದೆ ಎಂದು ನಂಬಿದ್ದರು. ಹಾಗಾಗಿಯೇ ಈ ಕೆಲಸ ಮಾಡಿದರು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಈ ರೀತಿಯ ಸಂಕಷ್ಟ ಬಂದಾಗ ಎಷ್ಟು ಜನ ಜನಪ್ರತಿನಿಧಿಗಳು ಜನರಿಗೆ ಮಾಸ್ಕ್ ಹಾಕುವಂತೆ, ಕೈತೊಳೆಯುವಂತೆ, ಸಾಮಾಜಿಕ ಅಂತರ ಕಾಪಾಡುವಂತೆ ಹೇಳಿದರು? ನೀವು ಹೀಗೆ ಹೇಳಿದರೆ ಇದರಿಂದ ಬಿಜೆಪಿ ಅಥವಾ ಮೋದಿ ಹೇಗೆ ಲಾಭ ಪಡೆದುಕೊಳ್ಳುತ್ತಾರೆ? ಕಾಂಗ್ರೆಸ್ ವರ್ತನೆಯಿಂದ ನಾನು ಮಾತ್ರವಲ್ಲ, ಇಡೀ ದೇಶವೇ ತೊಂದರೆಗೆ ಸಿಲುಕಿತು. ಹಾಗಾಗಿಯೇ ಹಲವು ರಾಜ್ಯಗಳು ದಶಕಗಳಿಂದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿವೆ ಎಂದಿದ್ದಾರೆ.


ಇದನ್ನೂ ಓದಿ: ಯುಪಿಯಲ್ಲಿನ ತನ್ನ ಮೊದಲ ಚುನಾವಣಾ ರ್ಯಾಲಿ ರದ್ದುಗೊಳಿಸಿದ ಪಿಎಂ ಮೋದಿ: ಬಿಜೆಪಿಗೆ ಜನರೆಂದರೆ ಭಯವೆಂದು ವ್ಯಂಗ್ಯವಾಡಿದ ಜಯಂತ್ ಚೌಧರಿ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ತನ್ನ ತಪ್ಪನ್ನು ಮರೆಮಾಚಲು ಎಂತಹ ಮಾರ್ಗ ಕಂಡು ಕೊಂಡಿಯ ಮಾರಾಯ, ಥು ನಿನ್ನ ಜನ್ಮಕ್ಕೆ.

  2. ಈ ಹಿಂದೆ ಚಂದ್ರ ಗ್ರಹಣ ಮತ್ತು ಸೂರ್ಯಗ್ರಹಣ ಆಗಿದ್ದಕ್ಕೆ ಕಾಂಗ್ರೆಸ್ನವರು ಕಾರಣ

  3. ಈ ಹಿಂದೆ ಚಂದ್ರ ಗ್ರಹಣ ಮತ್ತು ಸೂರ್ಯಗ್ರಹಣ ಆಗಿದ್ದಕ್ಕೆ ಕಾಂಗ್ರೆಸ್ನವರು ಕಾರಣ

  4. ಈ ಹಿಂದೆ ಚಂದ್ರ ಗ್ರಹಣ ಮತ್ತು ಸೂರ್ಯಗ್ರಹಣ ಆಗಿದ್ದಕ್ಕೆ ಕಾಂಗ್ರೆಸ್ನವರು ಕಾರಣ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...