ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ಹರಡಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳೆ ಕಾರಣವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸಂಸತ್ತಿನಲ್ಲಿ ಆರೋಪಿಸಿದ್ದಾರೆ. ವಿರೋಧ ಪಕ್ಷಗಳು ಸಕರಾತ್ಮಕವಾಗಿ ಏನನ್ನು ಮಾಡಲಿಲ್ಲ, ಕೋವಿಡ್ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಿ ಎಂದು ಜನರಿಗೆ ಮನವಿ ಮಾಡಲಿಲ್ಲ, ಆದರೆ ದೇಶಾದ್ಯಂತ ಕೋವಿಡ್ ಹರಡಲು ಅವರ ಕೊಡುಗೆ ಸಾಕಷ್ಟಿದೆ ಎಂದು ದೂರಿದ್ದಾರೆ.
“ಮೊದಲ ಕೋವಿಡ್ ಅಲೆಯಲ್ಲಿ ನಾವು ಲಾಕ್ಡೌನ್ ಹೇರಿದ್ದೆವು. ವಿಶ್ವ ಆರೋಗ್ಯ ಸಂಸ್ಥೆಯು ನೀವು ಇರುವಲ್ಲಿಯೇ ಇರಿ ಎಂದು ಎಚ್ಚರಿಕೆ ನೀಡಿತ್ತು. ಆದರೆ ಕಾಂಗ್ರೆಸ್ ಪಕ್ಷವು ತನ್ನ ಮಿತಿಯನ್ನು ದಾಟಿತು. ಅದು ಮುಂಬೈ ರೈಲ್ವೆ ಸ್ಟೇಷನ್ನಲ್ಲಿ ವಲಸೆ ಕಾರ್ಮಿಕರಿಗೆ ಟಿಕೆಟ್ ಕೊಡಿಸಿ ದೇಶಾದ್ಯಂತ ವೈರಸ್ ಹರಡಿ ಎಂದು ಹುರಿದುಂಬಿಸಿತು” ಎಂದು ನರೇಂದ್ರ ಮೋದಿ ಆರೋಪಿಸಿದ್ದಾರೆ.
ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳೇ ಕೋವಿಡ್ ಹರಡಲು ಕಾರಣವಾಗಿವೆ. ಅವು ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡಿದವು. ದೆಹಲಿ ಸರ್ಕಾರವು ವಾಹನಗಳಲ್ಲಿ ಮೈಕ್ ಹಾಕಿಕೊಂಡು ನಿಮಗಾಗಿ ಬಸ್ ವ್ಯವಸ್ಥೆ ಮಾಡಿದ್ದೇವೆ ಎಂದು ಸಾರಿತು. ಹಾಗಾಗಿ ಉತ್ತರ ಪ್ರದೇಶ ಸೇರಿದಂತೆ ಯಾವ ರಾಜ್ಯಗಳಲ್ಲಿ ಕೊರೊನಾ ಇರಲಿಲ್ಲವೋ ಅಲ್ಲಿಯೂ ಕೊರೊನಾ ಹರಡಲು ಕಾರಣವಾಯಿತು ಎಂದು ದೂರಿದ್ದಾರೆ.
ಕೆಲವರು ಕೊರೊನಾ ಮೋದಿಯವರ ವರ್ಚಸ್ಸನ್ನು ಹಾಳು ಮಾಡುತ್ತದೆ ಎಂದು ನಂಬಿದ್ದರು. ಹಾಗಾಗಿಯೇ ಈ ಕೆಲಸ ಮಾಡಿದರು ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ಈ ರೀತಿಯ ಸಂಕಷ್ಟ ಬಂದಾಗ ಎಷ್ಟು ಜನ ಜನಪ್ರತಿನಿಧಿಗಳು ಜನರಿಗೆ ಮಾಸ್ಕ್ ಹಾಕುವಂತೆ, ಕೈತೊಳೆಯುವಂತೆ, ಸಾಮಾಜಿಕ ಅಂತರ ಕಾಪಾಡುವಂತೆ ಹೇಳಿದರು? ನೀವು ಹೀಗೆ ಹೇಳಿದರೆ ಇದರಿಂದ ಬಿಜೆಪಿ ಅಥವಾ ಮೋದಿ ಹೇಗೆ ಲಾಭ ಪಡೆದುಕೊಳ್ಳುತ್ತಾರೆ? ಕಾಂಗ್ರೆಸ್ ವರ್ತನೆಯಿಂದ ನಾನು ಮಾತ್ರವಲ್ಲ, ಇಡೀ ದೇಶವೇ ತೊಂದರೆಗೆ ಸಿಲುಕಿತು. ಹಾಗಾಗಿಯೇ ಹಲವು ರಾಜ್ಯಗಳು ದಶಕಗಳಿಂದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿವೆ ಎಂದಿದ್ದಾರೆ.
ತನ್ನ ತಪ್ಪನ್ನು ಮರೆಮಾಚಲು ಎಂತಹ ಮಾರ್ಗ ಕಂಡು ಕೊಂಡಿಯ ಮಾರಾಯ, ಥು ನಿನ್ನ ಜನ್ಮಕ್ಕೆ.
ಈ ಹಿಂದೆ ಚಂದ್ರ ಗ್ರಹಣ ಮತ್ತು ಸೂರ್ಯಗ್ರಹಣ ಆಗಿದ್ದಕ್ಕೆ ಕಾಂಗ್ರೆಸ್ನವರು ಕಾರಣ
ಈ ಹಿಂದೆ ಚಂದ್ರ ಗ್ರಹಣ ಮತ್ತು ಸೂರ್ಯಗ್ರಹಣ ಆಗಿದ್ದಕ್ಕೆ ಕಾಂಗ್ರೆಸ್ನವರು ಕಾರಣ
ಈ ಹಿಂದೆ ಚಂದ್ರ ಗ್ರಹಣ ಮತ್ತು ಸೂರ್ಯಗ್ರಹಣ ಆಗಿದ್ದಕ್ಕೆ ಕಾಂಗ್ರೆಸ್ನವರು ಕಾರಣ