Homeಕರ್ನಾಟಕಮಾಧ್ಯಮ ಲೋಕಕ್ಕೆ ಬೀಸುತ್ತಿರುವ ಕೊರೊನಾ ಬಿರುಗಾಳಿ

ಮಾಧ್ಯಮ ಲೋಕಕ್ಕೆ ಬೀಸುತ್ತಿರುವ ಕೊರೊನಾ ಬಿರುಗಾಳಿ

- Advertisement -
- Advertisement -

ಕರೋನಾ ವೈರಸ್ ಜಗತ್ತಿಗೆ ತಂದೊಡ್ಡಿದ ಆತಂಕ ಅಂತಿಂತಹುದಲ್ಲ. ಇದು ವೈರಸ್ ಸೃಷ್ಟಿಸಿದ ಆತಂಕವೋ, ಇಲ್ಲ ಕೃತಕವಾಗಿ ಮಾನವ ನಿರ್ಮಿತ ಕರ್ಮಕಾಂಡವೋ ಗೊತ್ತಿಲ್ಲ. ಒಂದಂತೂ ಸತ್ಯ. ಯಾರೇ ಸೃಷ್ಟಿ ಮಾಡಿದ್ದರು ಕೂಡಾ ಸಂಪೂರ್ಣ ಮಾನವ ಕುಲ ಸಂಕಷ್ಟದಲ್ಲಿ ಸಿಲುಕಿದೆ.. ವೈರಸ್ ಎಷ್ಟು ವೇಗವಾಗಿ ಜನರ ಜೀವವನ್ನು ಆಪೋಶನ ತೆಗೆದುಕೊಳ್ಳುತ್ತಿದೆಯೋ, ಅದಕ್ಕಿಂತ ವೇಗವಾಗಿ ಕೆಟ್ಟಿರುವ ಆರ್ಥಿಕ ವ್ಯವಸ್ಥೆಯ ಕಬಂಧ ಬಾಹುವಿನಲ್ಲಿ ಸಾಮಾನ್ಯ ಜನರ ಬದುಕನ್ನು ಸೆಳೆದುಕೊಳ್ಳುತ್ತಿದೆ..

ಸಮಾಜದ ಎಲ್ಲ ಕ್ಷೇತ್ರದ ಜನ ಕರೋನಾ, ಕರೋನಾ ಎಂದು ಜಪಿಸುವಂತೆ ಮಾದಿರುವ ಈ ಮಹಾಮಾಯ ಹೊಡೆತಕ್ಕೆ ಸಿಲುಕಿ ನರಳದ ಘಟಕಗಳಿಲ್ಲ.. ಇದಕ್ಕೆ ಮಾಧ್ಯಮ ಕ್ಷೇತ್ರ ಹೊರತಾಗಿಲ್ಲ. ಇವತ್ತಿನ ಸ್ಥಿತಿ ಎಂತಹ ಮಟ್ಟಕ್ಕೆ ತಲುಪಿದೆಯೆಂದರೆ ಕೇವಲ ಮಾಧ್ಯಮ ಲೋಕದಲ್ಲಿ ಮಾತ್ರವಲ್ಲ, ಜಗತ್ತಿನೆಲ್ಲೆಡೆ ಎಲ್ಲ ಕ್ಷೇತ್ರಗಳಲ್ಲೂ ಯಾವ ಹೊತ್ತಿನಲ್ಲಿ ಯಾರು ಬಾಗಿಲು ಹಾಕುತ್ತಾರೋ, ಯಾರು ಕೆಲಸ ಕಳೆದುಕೊಳ್ಳುತ್ತಾರೋ, ಯಾರ ಮನೆಯ ಒಲೆಯ ಕಿಚ್ಚು ಆರಿ ಹೋಗುತ್ತದೋ… ಎಂದು ಯಾರಿಗೂ ಅರ್ಥವಾಗುತ್ತಿಲ್ಲ. ಇದು ಮನುಕುಲದ ಪಾಲಿಗೆನೇ ಅತ್ಯಂತ ಆತಂಕದ ಕ್ಷಣ.

ಇದು ಕೇವಲ ತಮಾಷೆಯ ವಿಷಯವಲ್ಲ. ಕೊರೊನಾದಿಂದಾಗಿ ಜಾಗತಿಕ ನೆಲೆಯಲ್ಲಿ ಹಲವು ಉದ್ಯಮಗಳು ತಳ ಹಿಡಿಯುವುದಂತೂ ಖಚಿತತವಾಗಿ ಬಿಟ್ಟಿದೆ. ಆ ಪೈಕಿ ಆಟೊಮೊಬೈಲ್, ಏವಿಯೇಷನ್‍ನಂತೆಯೇ ಮಾಧ್ಯಮ ಕೂಡ ಒಂದಾಗಿದೆ. ಜಗತ್ತಿನೆಲ್ಲೆಡೆ ಎಲ್ಲ ಮಾಧ್ಯಮ ಸಂಸ್ಥೆಗಳೂ ಜಾಹೀರಾತು ರೆವಿನ್ಯೂ ಇಲ್ಲದೇ ಸೋತು-ಸೊರಗಿ ಹೋಗಿವೆ. ಆ ಪೈಕಿ ಹಲವು ಸಂಸ್ಥೆಗಳು ಮುಚ್ಚಿ ಹೋದರೂ ಹೋಗಬಹುದು.

ಉಳಿದೆಲ್ಲ ಉದ್ಯಮಗಳ ಮೇಲೆ ಆದಂತೆಯೇ ಕೊರೊನಾ ಲಾಕ್‍ಡೌನ್ ಪರಿಣಾಮ ಪತ್ರಿಕೋದ್ಯಮದ ಮೇಲೂ ಆಗಿ ಹೋಗಿದೆ. ಆಡಳಿತ ಮಂಡಳಿಗಳು ಅಪಾರ ಮಟ್ಟದ ನಷ್ಟ ಅನುಭವಿಸುತ್ತಿವೆ. ಪರಿಣಾಮ ಕೊರೊನಾ ಪೂರ್ವ ಮತ್ತು ಕೊರೊನಾ ನಂತರದ ಮಾಧ್ಯಮ ಲೋಕಕ್ಕೆ ಹೋಲಿಸಿದರೆ ಅಪಾರ ವ್ಯತ್ಯಾಸಗಳು ಕಾಣಲಿವೆ.

ಒಂದು ಅಂದಾಜಿನ ಪ್ರಕಾರ ಕೊರೊನೋತ್ತರದಲ್ಲಿ ಮಾಧ್ಯಮ ಲೋಕದಲ್ಲಿರುವ ಶೇಕಡಾ 30-40ರಷ್ಟು ಪತ್ರಕರ್ತರು ಅವರ ಕೆಲಸ ಕಳೆದುಕೊಳ್ಳಲಿದ್ದಾರೆ. ತಂತ್ರಜ್ಞಾನ ಅಳವಡಿಕೆ, ಬದಲಾದ ವೃತ್ತಿಲೋಕದ ಸಂಸ್ಕೃತಿ, ಕಾಸ್ಟ್ ಕಟ್ಟಿಂಗ್… ಕಾರಣ ಬೇರೆ, ಬೇರೆ. ಕೆಲಸ ಹೋಗುವುದಂತೂ ಗ್ಯಾರಂಟಿ. ಇದು ಜಾಗತಿಕವಾದ ವಿದ್ಯಮಾನವಾಗಿರಲಿದೆ ಎಂಬುದೂ ಗ್ಯಾರಂಟಿ.

ಇದಕ್ಕೆ ಸಣ್ಣ ಅಥವಾ ದೊಡ್ಡ ಸಂಸ್ಥೆಯೆಂಬ ಬೇದಭಾವವಿಲ್ಲ; ಇದರ ಹೊಡೆತಕ್ಕೆ ದೇಶದ ನಂಬರ್ ಒನ್ ಇಂಗ್ಲಿಷ್ ಪತ್ರಿಕೆ ಟೈಂಸ್ ಆಫ್ ಇಂಡಿಯಾ ಕೂಡಾ ಹೊರತಾಗಿಲ್ಲ. ಅದು ತನ್ನ ಭಾನುವಾರದ ಪುರವಣಿಯ ಇಡೀ ತಂಡವನ್ನೇ ಕೆಲಸದಿಂದ ತೆಗೆದುಹಾಕಿದೆ. ಆ ಪುರವಣಿಯ ಸಂಪಾದಕಿ 24 ವರ್ಷಗಳ ಕಾಲ ಆ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು ಎನ್ನುವ ಮಾಹಿತಿಯನ್ನೂ ಇಲ್ಲಿ ಕೊಡಬೇಕು.

ಈ ಲಾಕ್‍ಡೌನ್, ಸೀಲ್‍ಡೌನ್, ಸ್ಮಾರ್ಟ್ ಲಾಕ್‍ಡೌನ್, ಸೂಪರ್ ಸ್ಮಾರ್ಟ್ ಲಾಕ್‍ಡೌನ್…. ಆಗುವುದಕ್ಕಿಂತ ಮೊದಲೇ ರಾಜ್ಯದ ಅತ್ಯಂತ ವಿಶ್ವಾಸಾರ್ಹ ಪತ್ರಿಕೆಯೇ ಕನಿಷ್ಠ ಮೂವತ್ತು ಹಿರಿಯ ಪತ್ರಕರ್ತರನ್ನು ಮನೆಗೆ ಕಳುಹಿಸಲು ತೀರ್ಮಾನ ಮಾಡಿತ್ತು. ಅದೂ ಅತ್ಯಂತ ಹಳೆಯ ಮತ್ತು ಸಂಪ್ರದಾಯದ ನೆಲೆಯಲ್ಲಿ ಗಟ್ಟಿಯಾಗಿದ್ದ ಸಂಸ್ಥೆ. ಒಂದು ಕಾಲದಲ್ಲಿ ಆ ಸಂಸ್ಥೆಯಲ್ಲಿ ಉದ್ಯೋಗ ಸಿಕ್ಕಿದರೆ ಬದುಕೇ ಬೆಳಗಿ ಹೋಯಿತು ಎಂಬ ಭಾವನೆ ಇತ್ತು. ಅಂತಹ ಸಂಸ್ಥೆಯೇ ಇಂದು ಬೇಡವೆಂದವರನ್ನೆಲ್ಲಾ ಹೊರಗೆ ಹಾಕುತ್ತಿದೆ. ಪರಿಸ್ಥಿತಿ ಆ ಹಂತ ತಲುಪಿರುವಾಗ ಬೇರೆ ಸಂಸ್ಥೆಗಳ ಉದ್ಯೋಗಿಗಳ ಪಾಡೇನು?

ಪತ್ರಿಕೆಯ ಈ ಸಂಚಿಕೆ ಅಂತಿಮಗೊಳ್ಳುತ್ತಿರುವ ಹೊತ್ತಿನಲ್ಲಿ ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕೆಲಸ ಕಳೆದುಕೊಳ್ಳುತ್ತಿರುವ

ಮಾಧ್ಯಮ ಸಂಸ್ಥೆಗಳ ನೌಕರರ ವಿವರ ಹೀಗಿದೆ.

1. ಇಂಡಿಯನ್ ಎಕ್ಸ್‍ಪ್ರೆಸ್ ಮತ್ತು ಬಿಸಿನೆಸ್ ಸ್ಟ್ಯಾಂಡರ್ಡ್ ಸಿಬ್ಬಂದಿ ವೇತನ ಕಡಿತವನ್ನು ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ. ಇಂಡಿಯನ್ ಎಕ್ಸ್‍ಪ್ರೆಸ್ HR ಪತ್ರದ ಸಾರಾಂಶ ಹೀಗಿದೆ.

ಮೊದಲ ಹೆಜ್ಜೆಯಾಗಿ, ನಾವೆಲ್ಲರೂ ಇಂದಿನಿಂದ ತಾತ್ಕಾಲಿಕ ವೇತನ ಕಡಿತವನ್ನು ತೆಗೆದುಕೊಳ್ಳಲು ಒಪ್ಪಿಕೊಳ್ಳುವ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ. ನೀವೆಲ್ಲರೂ ನನ್ನೊಂದಿಗಿದ್ದೀರಿ ಎಂಬುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ.

ಮುಖ್ಯ ಸಂಪಾದಕ ರಾಜ್ ಕಮಲ ಜಾ ಮತ್ತು ವರ್ಗೀಸ್ ಅವರು ಶೇ.100ರಷ್ಟು ವೇತನ ಪಡೆಯದಿರಲು ನಿರ್ಧರಿಸಿದ್ದಾರೆ. ಅಧ್ಯಕ್ಷರು ಮತ್ತು ಅನಂತ್ ಕೂಡ ಶೇ.100ರಷ್ಟು ವೇತನ ಕಡಿತವನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಪರಿಸ್ಥಿತಿ ಸುಧಾರಿಸದಿದ್ದರೆ ನನಗೆ ಬೇರೆ ಆಯ್ಕೆ ಇರುವುದಿಲ್ಲ. ಆದರೆ ಹೆಚ್ಚಿನ ತ್ಯಾಗ ಮಾಡಲು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ.

2. ಔಟ್‍ಲುಕ್ ಮುದ್ರಣ ಪ್ರಕಟಣೆಯನ್ನು ನಿಲ್ಲಿಸಿದೆ.

3. ನ್ಯೂಸ್‍ನೇಷನ್ ಇಂಗ್ಲಿಷ್ ಡಿಜಿಟಲ್ ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದ 16 ಉದ್ಯೋಗಿಗಳನ್ನು ಕಡಿತಗೊಳಿಸಿದೆ.

4. ಕ್ವಿಂಟ್ ತಂಡದ ಅರ್ಧದಷ್ಟು ಜನರು ವೇತನವಿಲ್ಲದೆ ರಜೆ ಹೋಗಲು ಕೇಳಿಕೊಳ್ಳಲಾಗಿದೆ. ಜೊತೆಗೆ ಕ್ವಿಂಟ್ ತನ್ನ ಟೆಕ್ ಮತ್ತು ಆಟೋ ವಿಭಾಗವನ್ನು ಮುಚ್ಚಿದೆ

5. ಇಂಡಿಯಾ ಟುಡೆ 46 ವರದಿಗಾರರು, 6 ಕ್ಯಾಮೆರಾಮೆನ್ ಮತ್ತು 17 ಕಾರ್ಯಕ್ರಮ ನಿರ್ಮಾಪಕರನ್ನು ಮನೆಗೆ ಕಳುಹಿಸಿದೆ..

6. ಅಮರ್ ಉಜಲಾದಲ್ಲಿ 50% ಸಂಬಳ ಕಡಿತ ಮಾಡಿದೆ..

7. ಪಿಟಿಐ 60% ವೇತನವನ್ನು ಮಾತ್ರ ಬಿಡುಗಡೆ ಮಾಡಿದೆ?

8. ನಯೀ ದುನಿಯಾ (ಉರ್ದು) ಮತ್ತು ಸ್ಟಾರ್ ಆಫ್ ಮೈಸೂರು ಪ್ರಕಟಣೆಯನ್ನು ಸ್ಥಗಿತಗೊಳಿಸಿದೆ.

9. ಬಿಸಿನೆಸ್ ಸ್ಟ್ಯಾಂಡರ್ಡ್ ಎಚ್‍ಆರ್‍ನಿಂದ ಪ್ರತಿಯೊಬ್ಬ ಉದ್ಯೋಗಿಗೂ ಮೇಲ್ ಹೊಗಿದೆ.. ಇಮೇಲ್ ಸಾರಾಂಶ ಹೀಗಿದೆ.. ಮೇ ತಿಂಗಳಿನಿಂದ ಸಂಬಳ ಕಡಿತವನ್ನು ಯೋಜಿಸಲಾಗಿದೆ. 10 ರಿಂದ 15 ಲಕ್ಷ ವಾರ್ಷಿಕ ವೇತನ ಪಡೆಯುತ್ತಿರುವವರಿಗೆ ಶೇ 10, ಹೆಚ್ಚಿನ ಸಂಬಳ ಪಡೆಯುತ್ತಿರುವವರಿಗೆ ಶೇ.30 ಸಂಬಳ ಕಡಿತಗೊಳಿಸಲು ನಿರ್ಧರಿಸಲಾಗಿದೆ.

ಇದು ರಾಷ್ಟ್ರೀಯ ಸಂಸ್ಥೆಗಳ ಕಥೆಯಾದರೆ, ಕನ್ನಡ ಮಾಧ್ಯಮ ಲೋಕವನ್ನೇ ತೆಗೆದುಕೊಂಡರೆ, 8 ಸಾವಿರದಿಂದ 10 ಸಾವಿರ ಉದ್ಯೋಗಿಗಳು ಕೆಲಸ ಮಾಡಿತ್ತಿದ್ದಾರೆ. ಈ ಪೈಕಿ ಜೀವನ ಭದ್ರ ಮಾಡಿಕೊಂಡಿರುವವರ ಸಂಖ್ಯೆ ಎಷ್ಟಿರಬಹುದು. ಹೆಚ್ಚೆಂದರೆ ನೂರಿನ್ನೂರು ಜನರು. ಉಳಿದಂತೆ ಶೇ.95ರಷ್ಟು ಪತ್ರಕರ್ತರು ಈವತ್ತೂ ಹೋರಾಟದ ಹಾದಿಯಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ಇಂತಹವರಿಗೆ ಒಂದು ತಿಂಗಳು ಸಂಬಳ ಬರದೇ ಹೋದರೆ ಬದುಕು ಮೂರಾಬಟ್ಟೆಯಾಗಿ ಹೋಗುತ್ತದೆ.

ಅದರಲ್ಲಂತೂ ಕೂಗು ಮಾರಿಗಳಾಗಿ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಕನ್ನಡದ ಸುದ್ದಿ ವಾಹಿನಿಗಳಲ್ಲಿ ಕೆಲಸ ಮಾಡುವ ಪತ್ರಕರ್ತರ ಪೈಕಿ ಕೆಲವೇ ಕೆಲವರನ್ನು ಬಿಟ್ಟರೆ ಉಳಿದವರ ಸ್ಥಿತಿ ಹೇಳಿಕೊಳ್ಳುವ ಹಾಗಿಲ್ಲ. ಆರ್ಥಿಕ ಕುಸಿತದಿಂದ ಮೊದಲೇ ಏದುಸಿರುಬಿಡುತ್ತಿದ್ದ ಮಾಧ್ಯಮಗಳಿಗೆ ಕೊರೊನಾ ಬಿಕ್ಕಟ್ಟು ಕಡೆಯ ಮೊಳೆ ಹೊಡೆಯುತ್ತಿದೆಯೇ ಎಂಬ ಪರಿಸ್ಥಿತಿ ತಲೆದೋರಿದೆ. ಸಂಪೂರ್ಣ ಚಿತ್ರಣವು ತೆರೆದುಕೊಳ್ಳುವುದು ಇನ್ನೂ ಮೂರ್ನಾಲ್ಕು ತಿಂಗಳ ನಂತರವೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಚ್ಚು ಮೀಡಿಯಾ ಗೆ ಹೆಚ್ಚು ಒಡೆತ ಬೀಳಲಿದೆ. Online, social mediaಗಳ ಒಡೆತದಿಂದ ಮೊದಲೇ ಹಿನ್ನಡೆಯನ್ನು ಕಂಡಿದ್ದ ಅಚ್ಚು ಒಯ್ಯುಗೆ ಮತ್ತಶ್ಟು ಮುಗ್ಗರಿಸಲಿದೆ. ಹೊತ್ತಿಗೆ ತಕ್ಕಂತೆ ಬದಲಾಗುವುದೊಂದೇ ಉಳಿದಿರುವ ದಾರಿ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...