Homeಕರ್ನಾಟಕಮಾಧ್ಯಮ ಲೋಕಕ್ಕೆ ಬೀಸುತ್ತಿರುವ ಕೊರೊನಾ ಬಿರುಗಾಳಿ

ಮಾಧ್ಯಮ ಲೋಕಕ್ಕೆ ಬೀಸುತ್ತಿರುವ ಕೊರೊನಾ ಬಿರುಗಾಳಿ

- Advertisement -
- Advertisement -

ಕರೋನಾ ವೈರಸ್ ಜಗತ್ತಿಗೆ ತಂದೊಡ್ಡಿದ ಆತಂಕ ಅಂತಿಂತಹುದಲ್ಲ. ಇದು ವೈರಸ್ ಸೃಷ್ಟಿಸಿದ ಆತಂಕವೋ, ಇಲ್ಲ ಕೃತಕವಾಗಿ ಮಾನವ ನಿರ್ಮಿತ ಕರ್ಮಕಾಂಡವೋ ಗೊತ್ತಿಲ್ಲ. ಒಂದಂತೂ ಸತ್ಯ. ಯಾರೇ ಸೃಷ್ಟಿ ಮಾಡಿದ್ದರು ಕೂಡಾ ಸಂಪೂರ್ಣ ಮಾನವ ಕುಲ ಸಂಕಷ್ಟದಲ್ಲಿ ಸಿಲುಕಿದೆ.. ವೈರಸ್ ಎಷ್ಟು ವೇಗವಾಗಿ ಜನರ ಜೀವವನ್ನು ಆಪೋಶನ ತೆಗೆದುಕೊಳ್ಳುತ್ತಿದೆಯೋ, ಅದಕ್ಕಿಂತ ವೇಗವಾಗಿ ಕೆಟ್ಟಿರುವ ಆರ್ಥಿಕ ವ್ಯವಸ್ಥೆಯ ಕಬಂಧ ಬಾಹುವಿನಲ್ಲಿ ಸಾಮಾನ್ಯ ಜನರ ಬದುಕನ್ನು ಸೆಳೆದುಕೊಳ್ಳುತ್ತಿದೆ..

ಸಮಾಜದ ಎಲ್ಲ ಕ್ಷೇತ್ರದ ಜನ ಕರೋನಾ, ಕರೋನಾ ಎಂದು ಜಪಿಸುವಂತೆ ಮಾದಿರುವ ಈ ಮಹಾಮಾಯ ಹೊಡೆತಕ್ಕೆ ಸಿಲುಕಿ ನರಳದ ಘಟಕಗಳಿಲ್ಲ.. ಇದಕ್ಕೆ ಮಾಧ್ಯಮ ಕ್ಷೇತ್ರ ಹೊರತಾಗಿಲ್ಲ. ಇವತ್ತಿನ ಸ್ಥಿತಿ ಎಂತಹ ಮಟ್ಟಕ್ಕೆ ತಲುಪಿದೆಯೆಂದರೆ ಕೇವಲ ಮಾಧ್ಯಮ ಲೋಕದಲ್ಲಿ ಮಾತ್ರವಲ್ಲ, ಜಗತ್ತಿನೆಲ್ಲೆಡೆ ಎಲ್ಲ ಕ್ಷೇತ್ರಗಳಲ್ಲೂ ಯಾವ ಹೊತ್ತಿನಲ್ಲಿ ಯಾರು ಬಾಗಿಲು ಹಾಕುತ್ತಾರೋ, ಯಾರು ಕೆಲಸ ಕಳೆದುಕೊಳ್ಳುತ್ತಾರೋ, ಯಾರ ಮನೆಯ ಒಲೆಯ ಕಿಚ್ಚು ಆರಿ ಹೋಗುತ್ತದೋ… ಎಂದು ಯಾರಿಗೂ ಅರ್ಥವಾಗುತ್ತಿಲ್ಲ. ಇದು ಮನುಕುಲದ ಪಾಲಿಗೆನೇ ಅತ್ಯಂತ ಆತಂಕದ ಕ್ಷಣ.

ಇದು ಕೇವಲ ತಮಾಷೆಯ ವಿಷಯವಲ್ಲ. ಕೊರೊನಾದಿಂದಾಗಿ ಜಾಗತಿಕ ನೆಲೆಯಲ್ಲಿ ಹಲವು ಉದ್ಯಮಗಳು ತಳ ಹಿಡಿಯುವುದಂತೂ ಖಚಿತತವಾಗಿ ಬಿಟ್ಟಿದೆ. ಆ ಪೈಕಿ ಆಟೊಮೊಬೈಲ್, ಏವಿಯೇಷನ್‍ನಂತೆಯೇ ಮಾಧ್ಯಮ ಕೂಡ ಒಂದಾಗಿದೆ. ಜಗತ್ತಿನೆಲ್ಲೆಡೆ ಎಲ್ಲ ಮಾಧ್ಯಮ ಸಂಸ್ಥೆಗಳೂ ಜಾಹೀರಾತು ರೆವಿನ್ಯೂ ಇಲ್ಲದೇ ಸೋತು-ಸೊರಗಿ ಹೋಗಿವೆ. ಆ ಪೈಕಿ ಹಲವು ಸಂಸ್ಥೆಗಳು ಮುಚ್ಚಿ ಹೋದರೂ ಹೋಗಬಹುದು.

ಉಳಿದೆಲ್ಲ ಉದ್ಯಮಗಳ ಮೇಲೆ ಆದಂತೆಯೇ ಕೊರೊನಾ ಲಾಕ್‍ಡೌನ್ ಪರಿಣಾಮ ಪತ್ರಿಕೋದ್ಯಮದ ಮೇಲೂ ಆಗಿ ಹೋಗಿದೆ. ಆಡಳಿತ ಮಂಡಳಿಗಳು ಅಪಾರ ಮಟ್ಟದ ನಷ್ಟ ಅನುಭವಿಸುತ್ತಿವೆ. ಪರಿಣಾಮ ಕೊರೊನಾ ಪೂರ್ವ ಮತ್ತು ಕೊರೊನಾ ನಂತರದ ಮಾಧ್ಯಮ ಲೋಕಕ್ಕೆ ಹೋಲಿಸಿದರೆ ಅಪಾರ ವ್ಯತ್ಯಾಸಗಳು ಕಾಣಲಿವೆ.

ಒಂದು ಅಂದಾಜಿನ ಪ್ರಕಾರ ಕೊರೊನೋತ್ತರದಲ್ಲಿ ಮಾಧ್ಯಮ ಲೋಕದಲ್ಲಿರುವ ಶೇಕಡಾ 30-40ರಷ್ಟು ಪತ್ರಕರ್ತರು ಅವರ ಕೆಲಸ ಕಳೆದುಕೊಳ್ಳಲಿದ್ದಾರೆ. ತಂತ್ರಜ್ಞಾನ ಅಳವಡಿಕೆ, ಬದಲಾದ ವೃತ್ತಿಲೋಕದ ಸಂಸ್ಕೃತಿ, ಕಾಸ್ಟ್ ಕಟ್ಟಿಂಗ್… ಕಾರಣ ಬೇರೆ, ಬೇರೆ. ಕೆಲಸ ಹೋಗುವುದಂತೂ ಗ್ಯಾರಂಟಿ. ಇದು ಜಾಗತಿಕವಾದ ವಿದ್ಯಮಾನವಾಗಿರಲಿದೆ ಎಂಬುದೂ ಗ್ಯಾರಂಟಿ.

ಇದಕ್ಕೆ ಸಣ್ಣ ಅಥವಾ ದೊಡ್ಡ ಸಂಸ್ಥೆಯೆಂಬ ಬೇದಭಾವವಿಲ್ಲ; ಇದರ ಹೊಡೆತಕ್ಕೆ ದೇಶದ ನಂಬರ್ ಒನ್ ಇಂಗ್ಲಿಷ್ ಪತ್ರಿಕೆ ಟೈಂಸ್ ಆಫ್ ಇಂಡಿಯಾ ಕೂಡಾ ಹೊರತಾಗಿಲ್ಲ. ಅದು ತನ್ನ ಭಾನುವಾರದ ಪುರವಣಿಯ ಇಡೀ ತಂಡವನ್ನೇ ಕೆಲಸದಿಂದ ತೆಗೆದುಹಾಕಿದೆ. ಆ ಪುರವಣಿಯ ಸಂಪಾದಕಿ 24 ವರ್ಷಗಳ ಕಾಲ ಆ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು ಎನ್ನುವ ಮಾಹಿತಿಯನ್ನೂ ಇಲ್ಲಿ ಕೊಡಬೇಕು.

ಈ ಲಾಕ್‍ಡೌನ್, ಸೀಲ್‍ಡೌನ್, ಸ್ಮಾರ್ಟ್ ಲಾಕ್‍ಡೌನ್, ಸೂಪರ್ ಸ್ಮಾರ್ಟ್ ಲಾಕ್‍ಡೌನ್…. ಆಗುವುದಕ್ಕಿಂತ ಮೊದಲೇ ರಾಜ್ಯದ ಅತ್ಯಂತ ವಿಶ್ವಾಸಾರ್ಹ ಪತ್ರಿಕೆಯೇ ಕನಿಷ್ಠ ಮೂವತ್ತು ಹಿರಿಯ ಪತ್ರಕರ್ತರನ್ನು ಮನೆಗೆ ಕಳುಹಿಸಲು ತೀರ್ಮಾನ ಮಾಡಿತ್ತು. ಅದೂ ಅತ್ಯಂತ ಹಳೆಯ ಮತ್ತು ಸಂಪ್ರದಾಯದ ನೆಲೆಯಲ್ಲಿ ಗಟ್ಟಿಯಾಗಿದ್ದ ಸಂಸ್ಥೆ. ಒಂದು ಕಾಲದಲ್ಲಿ ಆ ಸಂಸ್ಥೆಯಲ್ಲಿ ಉದ್ಯೋಗ ಸಿಕ್ಕಿದರೆ ಬದುಕೇ ಬೆಳಗಿ ಹೋಯಿತು ಎಂಬ ಭಾವನೆ ಇತ್ತು. ಅಂತಹ ಸಂಸ್ಥೆಯೇ ಇಂದು ಬೇಡವೆಂದವರನ್ನೆಲ್ಲಾ ಹೊರಗೆ ಹಾಕುತ್ತಿದೆ. ಪರಿಸ್ಥಿತಿ ಆ ಹಂತ ತಲುಪಿರುವಾಗ ಬೇರೆ ಸಂಸ್ಥೆಗಳ ಉದ್ಯೋಗಿಗಳ ಪಾಡೇನು?

ಪತ್ರಿಕೆಯ ಈ ಸಂಚಿಕೆ ಅಂತಿಮಗೊಳ್ಳುತ್ತಿರುವ ಹೊತ್ತಿನಲ್ಲಿ ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕೆಲಸ ಕಳೆದುಕೊಳ್ಳುತ್ತಿರುವ

ಮಾಧ್ಯಮ ಸಂಸ್ಥೆಗಳ ನೌಕರರ ವಿವರ ಹೀಗಿದೆ.

1. ಇಂಡಿಯನ್ ಎಕ್ಸ್‍ಪ್ರೆಸ್ ಮತ್ತು ಬಿಸಿನೆಸ್ ಸ್ಟ್ಯಾಂಡರ್ಡ್ ಸಿಬ್ಬಂದಿ ವೇತನ ಕಡಿತವನ್ನು ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ. ಇಂಡಿಯನ್ ಎಕ್ಸ್‍ಪ್ರೆಸ್ HR ಪತ್ರದ ಸಾರಾಂಶ ಹೀಗಿದೆ.

ಮೊದಲ ಹೆಜ್ಜೆಯಾಗಿ, ನಾವೆಲ್ಲರೂ ಇಂದಿನಿಂದ ತಾತ್ಕಾಲಿಕ ವೇತನ ಕಡಿತವನ್ನು ತೆಗೆದುಕೊಳ್ಳಲು ಒಪ್ಪಿಕೊಳ್ಳುವ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ. ನೀವೆಲ್ಲರೂ ನನ್ನೊಂದಿಗಿದ್ದೀರಿ ಎಂಬುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ.

ಮುಖ್ಯ ಸಂಪಾದಕ ರಾಜ್ ಕಮಲ ಜಾ ಮತ್ತು ವರ್ಗೀಸ್ ಅವರು ಶೇ.100ರಷ್ಟು ವೇತನ ಪಡೆಯದಿರಲು ನಿರ್ಧರಿಸಿದ್ದಾರೆ. ಅಧ್ಯಕ್ಷರು ಮತ್ತು ಅನಂತ್ ಕೂಡ ಶೇ.100ರಷ್ಟು ವೇತನ ಕಡಿತವನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಪರಿಸ್ಥಿತಿ ಸುಧಾರಿಸದಿದ್ದರೆ ನನಗೆ ಬೇರೆ ಆಯ್ಕೆ ಇರುವುದಿಲ್ಲ. ಆದರೆ ಹೆಚ್ಚಿನ ತ್ಯಾಗ ಮಾಡಲು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ.

2. ಔಟ್‍ಲುಕ್ ಮುದ್ರಣ ಪ್ರಕಟಣೆಯನ್ನು ನಿಲ್ಲಿಸಿದೆ.

3. ನ್ಯೂಸ್‍ನೇಷನ್ ಇಂಗ್ಲಿಷ್ ಡಿಜಿಟಲ್ ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದ 16 ಉದ್ಯೋಗಿಗಳನ್ನು ಕಡಿತಗೊಳಿಸಿದೆ.

4. ಕ್ವಿಂಟ್ ತಂಡದ ಅರ್ಧದಷ್ಟು ಜನರು ವೇತನವಿಲ್ಲದೆ ರಜೆ ಹೋಗಲು ಕೇಳಿಕೊಳ್ಳಲಾಗಿದೆ. ಜೊತೆಗೆ ಕ್ವಿಂಟ್ ತನ್ನ ಟೆಕ್ ಮತ್ತು ಆಟೋ ವಿಭಾಗವನ್ನು ಮುಚ್ಚಿದೆ

5. ಇಂಡಿಯಾ ಟುಡೆ 46 ವರದಿಗಾರರು, 6 ಕ್ಯಾಮೆರಾಮೆನ್ ಮತ್ತು 17 ಕಾರ್ಯಕ್ರಮ ನಿರ್ಮಾಪಕರನ್ನು ಮನೆಗೆ ಕಳುಹಿಸಿದೆ..

6. ಅಮರ್ ಉಜಲಾದಲ್ಲಿ 50% ಸಂಬಳ ಕಡಿತ ಮಾಡಿದೆ..

7. ಪಿಟಿಐ 60% ವೇತನವನ್ನು ಮಾತ್ರ ಬಿಡುಗಡೆ ಮಾಡಿದೆ?

8. ನಯೀ ದುನಿಯಾ (ಉರ್ದು) ಮತ್ತು ಸ್ಟಾರ್ ಆಫ್ ಮೈಸೂರು ಪ್ರಕಟಣೆಯನ್ನು ಸ್ಥಗಿತಗೊಳಿಸಿದೆ.

9. ಬಿಸಿನೆಸ್ ಸ್ಟ್ಯಾಂಡರ್ಡ್ ಎಚ್‍ಆರ್‍ನಿಂದ ಪ್ರತಿಯೊಬ್ಬ ಉದ್ಯೋಗಿಗೂ ಮೇಲ್ ಹೊಗಿದೆ.. ಇಮೇಲ್ ಸಾರಾಂಶ ಹೀಗಿದೆ.. ಮೇ ತಿಂಗಳಿನಿಂದ ಸಂಬಳ ಕಡಿತವನ್ನು ಯೋಜಿಸಲಾಗಿದೆ. 10 ರಿಂದ 15 ಲಕ್ಷ ವಾರ್ಷಿಕ ವೇತನ ಪಡೆಯುತ್ತಿರುವವರಿಗೆ ಶೇ 10, ಹೆಚ್ಚಿನ ಸಂಬಳ ಪಡೆಯುತ್ತಿರುವವರಿಗೆ ಶೇ.30 ಸಂಬಳ ಕಡಿತಗೊಳಿಸಲು ನಿರ್ಧರಿಸಲಾಗಿದೆ.

ಇದು ರಾಷ್ಟ್ರೀಯ ಸಂಸ್ಥೆಗಳ ಕಥೆಯಾದರೆ, ಕನ್ನಡ ಮಾಧ್ಯಮ ಲೋಕವನ್ನೇ ತೆಗೆದುಕೊಂಡರೆ, 8 ಸಾವಿರದಿಂದ 10 ಸಾವಿರ ಉದ್ಯೋಗಿಗಳು ಕೆಲಸ ಮಾಡಿತ್ತಿದ್ದಾರೆ. ಈ ಪೈಕಿ ಜೀವನ ಭದ್ರ ಮಾಡಿಕೊಂಡಿರುವವರ ಸಂಖ್ಯೆ ಎಷ್ಟಿರಬಹುದು. ಹೆಚ್ಚೆಂದರೆ ನೂರಿನ್ನೂರು ಜನರು. ಉಳಿದಂತೆ ಶೇ.95ರಷ್ಟು ಪತ್ರಕರ್ತರು ಈವತ್ತೂ ಹೋರಾಟದ ಹಾದಿಯಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ಇಂತಹವರಿಗೆ ಒಂದು ತಿಂಗಳು ಸಂಬಳ ಬರದೇ ಹೋದರೆ ಬದುಕು ಮೂರಾಬಟ್ಟೆಯಾಗಿ ಹೋಗುತ್ತದೆ.

ಅದರಲ್ಲಂತೂ ಕೂಗು ಮಾರಿಗಳಾಗಿ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಕನ್ನಡದ ಸುದ್ದಿ ವಾಹಿನಿಗಳಲ್ಲಿ ಕೆಲಸ ಮಾಡುವ ಪತ್ರಕರ್ತರ ಪೈಕಿ ಕೆಲವೇ ಕೆಲವರನ್ನು ಬಿಟ್ಟರೆ ಉಳಿದವರ ಸ್ಥಿತಿ ಹೇಳಿಕೊಳ್ಳುವ ಹಾಗಿಲ್ಲ. ಆರ್ಥಿಕ ಕುಸಿತದಿಂದ ಮೊದಲೇ ಏದುಸಿರುಬಿಡುತ್ತಿದ್ದ ಮಾಧ್ಯಮಗಳಿಗೆ ಕೊರೊನಾ ಬಿಕ್ಕಟ್ಟು ಕಡೆಯ ಮೊಳೆ ಹೊಡೆಯುತ್ತಿದೆಯೇ ಎಂಬ ಪರಿಸ್ಥಿತಿ ತಲೆದೋರಿದೆ. ಸಂಪೂರ್ಣ ಚಿತ್ರಣವು ತೆರೆದುಕೊಳ್ಳುವುದು ಇನ್ನೂ ಮೂರ್ನಾಲ್ಕು ತಿಂಗಳ ನಂತರವೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಚ್ಚು ಮೀಡಿಯಾ ಗೆ ಹೆಚ್ಚು ಒಡೆತ ಬೀಳಲಿದೆ. Online, social mediaಗಳ ಒಡೆತದಿಂದ ಮೊದಲೇ ಹಿನ್ನಡೆಯನ್ನು ಕಂಡಿದ್ದ ಅಚ್ಚು ಒಯ್ಯುಗೆ ಮತ್ತಶ್ಟು ಮುಗ್ಗರಿಸಲಿದೆ. ಹೊತ್ತಿಗೆ ತಕ್ಕಂತೆ ಬದಲಾಗುವುದೊಂದೇ ಉಳಿದಿರುವ ದಾರಿ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...