Homeಕರೋನಾ ತಲ್ಲಣಕೊರೊನಾ ಉಲ್ಬಣ: ಮೇ 1ರ ವರೆಗೆ ಮಹಾರಾಷ್ಟ್ರದಲ್ಲಿ ಕರ್ಫ್ಯೂ

ಕೊರೊನಾ ಉಲ್ಬಣ: ಮೇ 1ರ ವರೆಗೆ ಮಹಾರಾಷ್ಟ್ರದಲ್ಲಿ ಕರ್ಫ್ಯೂ

- Advertisement -
- Advertisement -

ಮಹಾರಾಷ್ಟ್ರದಾದ್ಯಂತ ಕೊರೊನಾ ಉಲ್ಬಣವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಏಪ್ರಿಲ್ 14 ರ ರಾತ್ರಿ 08 ರಿಂದ ಮೇ 1 ರವರೆಗೆ ರಾಜ್ಯದ ಜನರ ಸಂಚಾರಕ್ಕೆ ಕರ್ಫ್ಯೂ ತರಹದ ನಿರ್ಬಂಧಗಳನ್ನು ಮಂಗಳವಾರ ಘೋಷಿಸಿದ್ದಾರೆ. ಆದರೆ ಅದು ಲಾಕ್‌ಡೌನ್ ಅಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯವನ್ನು ಉದ್ದೇಶಿಸಿ ಮಾಡಿದ 38 ನಿಮಿಷಗಳ ಭಾಷಣದಲ್ಲಿ, ಏಪ್ರಿಲ್ 6 ರಿಂದ ಜಾರಿಗೆ ತಂದಿದ್ದ ನಿಯಮಗಳಿಗಿಂತ ಕಠಿಣವಾದ ನಿರ್ಬಂಧಗಳನ್ನು ಠಾಕ್ರೆ ಘೋಷಿಸಿದರು. ಆದರೆ ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಿದ್ದಾರೆ. ಇದರಿಂದಾಗಿ ಪರಿಣಾಮ ಬೀರುವ ಕ್ಷೇತ್ರಗಳು ಮತ್ತು ಕೆಲವು ವಿಭಾಗಗಳಿಗೆ 5,476 ಕೋಟಿ ರೂ. ಪರಿಹಾರ ಘೋಷಿಸಿದ್ದಾರೆ.

ಆಡಳಿತ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ಸೆಕ್ಷನ್ 144 ರ ಅಡಿಯಲ್ಲಿ ರಾಜ್ಯದಲ್ಲಿ ಬುಧವಾರ ರಾತ್ರಿಯಿಂದ ನಿಷೇಧಾಜ್ಞೆ ವಿಧಿಸಲಾಗಿದ್ದು, ಮೇ 1 ರವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಹೊರಡಿಸುವಲ್ಲಿ ಯುಪಿಎಗಿಂತ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವೇ ಮುಂದು!

ನಿರ್ಬಂಧದಂತೆ, ಯಾವುದೇ ವ್ಯಕ್ತಿಯು ಸಕಾರಣವಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಓಡಾಡಬಾರದು. ಕೆಲಸದ ದಿನಗಳಲ್ಲಿ ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳು, ಚಟುವಟಿಕೆಗಳು ಮತ್ತು ಸೇವೆಗಳು ಮುಚ್ಚಲ್ಪಡುತ್ತವೆ. ಚಲನಚಿತ್ರಗಳು, ಧಾರಾವಾಹಿಗಳು ಮತ್ತು ಜಾಹೀರಾತುಗಳ ಚಿತ್ರೀಕರಣವು ಮುಚ್ಚಲ್ಪಡುತ್ತದೆ. ಮದುವೆಗಳಲ್ಲಿ ಕೇವಲ 25 ಜನರಿಗೆ ಮಾತ್ರ ಅವಕಾಶವಿರುತ್ತದೆ.

ಆದಾಗ್ಯೂ, ರೈಲುಗಳು ಮತ್ತು ಬಸ್ ಸೇವೆಗಳು ಸೇರಿದಂತೆ ಸಾರ್ವಜನಿಕ ಸಾರಿಗೆ, ದಿನಸಿ, ತರಕಾರಿ ಅಂಗಡಿಗಳು, ಹಣ್ಣು ಮಾರಾಟಗಾರರು, ಡೈರಿಗಳು, ಬೇಕರಿಗಳು, ಮಿಠಾಯಿಗಳು, ಎಲ್ಲಾ ರೀತಿಯ ಆಹಾರ ಮಳಿಗೆಗಳು ಮತ್ತು ಸಾರ್ವಜನಿಕ ಉಪಯುಕ್ತತೆಗಳಂತಹ ಅಗತ್ಯ ಸೇವೆಗಳು ತೆರೆದಿರುತ್ತವೆ.

ಉತ್ಪಾದನಾ ವಲಯಕ್ಕೆ ಸಂಬಂಧಿಸಿದಂತೆ, ಕೈಗಾರಿಕೆಗಳಿಗೆ 50% ಸಾಮರ್ಥ್ಯದಲ್ಲಿ ಕಾರ್ಯಾಚರಣೆ ಮಾಡಲು ಅನುಮತಿ ನೀಡಿದೆ. ಆದರೆ ಈ ಕೈಗಾರಿಕೆಗಳು ತಮ್ಮ ಕಾರ್ಮಿಕರಿಗೆ ಉಳಿದುಕೊಳ್ಳಲು ಕ್ಯಾಂಪಸ್‌ನಲ್ಲೇ ಅಥವಾ ಪ್ರತ್ಯೇಕವಾದ ವ್ಯವಸ್ಥೆ ಮಾಡಬೇಕಾಗುತ್ತದೆ. ಕೈಗಾರಿಕೆಯ ಆವರಣದ ಹೊರಗೆ ಸಿಬ್ಬಂದಿಗಳು ಓಡಾಡುವಂತಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಿಣರಾಯಿ ವಿಜಯನ್ ಸಂಪುಟಕ್ಕೆ ಕೇರಳ ಶಿಕ್ಷಣ ಸಚಿವ ಕೆ.ಟಿ. ಜಲೀಲ್‌‌ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...