Homeಕರೋನಾ ತಲ್ಲಣಕೊರೊನಾ ಉಲ್ಬಣ: ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು? ಶೀಘ್ರದಲ್ಲೇ ನಿರ್ಧಾರ: ಆರೋಗ್ಯ ಸಚಿವ ಸುಧಾಕರ್

ಕೊರೊನಾ ಉಲ್ಬಣ: ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು? ಶೀಘ್ರದಲ್ಲೇ ನಿರ್ಧಾರ: ಆರೋಗ್ಯ ಸಚಿವ ಸುಧಾಕರ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದ್ದು, ಸೋಮವಾರ 1290 ಹೊಸ ಪ್ರಕರಣಗಳು ವರದಿಯಾಗಿವೆ. ದೈನಂದಿನ ಪಾಸಿಟಿವಿಟಿ ದರ 1.60% ಇದ್ದು, ಅದರಲ್ಲೂ 90% ಪ್ರಕರಣಗಳು ಬೆಂಗಳೂರಿನಿಂದಲೇ ವರದಿಯಾಗುತ್ತಿವೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ ಶೀಘ್ರದಲ್ಲೇ ಕಠಿಣ ನಿರ್ಬಂಧಗಳನ್ನು ಹೇರಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

“ಇಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತನ್ನ ಹಿರಿಯ ಸಂಪುಟ ಸಹೋದ್ಯೋಗಿಗಳು ಮತ್ತು ಕೊರೊನಾ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಓಮೈಕ್ರಾನ್ ಹರಡುವಿಕೆಯನ್ನು ವಿಶ್ಲೇಷಿಸಿದ ನಂತರ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಿರ್ಧರಿಸಲಾಗುವುದು” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಂಗಳವಾರ ತಿಳಿಸಿದ್ದಾರೆ.

ಇದನ್ನೂ ಓದಿ:ಓಮೈಕ್ರಾನ್ ಆತಂಕ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ

“ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ಕ್ರಮಗಳು, ಮೈಕ್ರೋ ಕಂಟೈನ್‌ಮೆಂಟ್ ವಲಯಗಳು, ಶಾಲೆಗಳು ಮತ್ತು ಇತರ ನಿರ್ಬಂಧಗಳ ಕುರಿತು ಚರ್ಚಿಸಲಾಗುವುದು. ಬೆಂಗಳೂರು ಈ ಹಿಂದಿನ ಎರಡು ಅಲೆಗಳ ಕೇಂದ್ರಬಿಂದುವಾಗಿತ್ತು. ಜೊತೆಗೆ ಕರ್ನಾಟಕದಲ್ಲಿ ಪ್ರಾರಂಭವಾಗಿರುವ ಮೂರನೇ ಅಲೆಯಲ್ಲಿ ಅದೇ ಸಂಭವಿಸುವ ಸಾಧ್ಯತೆಯಿದೆ” ಎಂದು ಅವರು ಹೇಳಿದ್ದಾರೆ.

“ಬೇರೆ ದೇಶಗಳು ಮತ್ತು ರಾಜ್ಯಗಳ ಜನರು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾರೆ. ಆದ್ದರಿಂದ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ನಗರದಲ್ಲಿ ಹರಡುವಿಕೆಯನ್ನು ನಿಯಂತ್ರಿಸಿದರೆ, ರಾಜ್ಯದಲ್ಲೂ ಹರಡುವಿಕೆಯನ್ನು ನಿಯಂತ್ರಿಸಬಹುದು” ಎಂದು ಸುಧಾಕರ್ ಹೇಳಿದ್ದಾರೆ.

ಇದನ್ನೂ ಓದಿ:ಪ್ರಕರಣ ಹೆಚ್ಚಾದರೆ ಶಾಲೆ ಮುಚ್ಚಲು ಹಿಂದೆ ಸರಿಯುವುದಿಲ್ಲ: ಶಿಕ್ಷಣ ಸಚಿವ ನಾಗೇಶ್

ರಾಜ್ಯದಲ್ಲಿ ಕೊರೊನಾ ಹರಡುವುದನ್ನು ತಡೆಯಲು ಸಾಧ್ಯವಿಲ್ಲ ಆದರೆ ವಿವಿಧ ಕ್ರಮಗಳ ಮೂಲಕ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಜನರ ಜೀವನ ಮತ್ತು ಜೀವನೋಪಾಯಗಳು ಸಹಜ ಸ್ಥಿತಿಗೆ ಮರಳಿರುವುದರಿಂದ ಲಾಕ್‌ಡೌನ್‌ನಂತಹ ಪದಗಳನ್ನು ಬಳಸಬೇಡಿ ಎಂದು ಅವರು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ. ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ಕ್ರಮಗಳನ್ನು ತರಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಅವರು ತಿಳಿಸಿದ್ದಾರೆ.

15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವುದನ್ನು ರಾಜ್ಯದಲ್ಲಿ ಸೋಮವಾರದಿಂದ ಪ್ರಾರಂಭಿಸಲಾಗಿದೆ.

ಇದನ್ನೂ ಓದಿ:2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...