Homeಕರೋನಾ ತಲ್ಲಣಕೊರೊನಾ ಉಲ್ಬಣ: ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು? ಶೀಘ್ರದಲ್ಲೇ ನಿರ್ಧಾರ: ಆರೋಗ್ಯ ಸಚಿವ ಸುಧಾಕರ್

ಕೊರೊನಾ ಉಲ್ಬಣ: ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು? ಶೀಘ್ರದಲ್ಲೇ ನಿರ್ಧಾರ: ಆರೋಗ್ಯ ಸಚಿವ ಸುಧಾಕರ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದ್ದು, ಸೋಮವಾರ 1290 ಹೊಸ ಪ್ರಕರಣಗಳು ವರದಿಯಾಗಿವೆ. ದೈನಂದಿನ ಪಾಸಿಟಿವಿಟಿ ದರ 1.60% ಇದ್ದು, ಅದರಲ್ಲೂ 90% ಪ್ರಕರಣಗಳು ಬೆಂಗಳೂರಿನಿಂದಲೇ ವರದಿಯಾಗುತ್ತಿವೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ ಶೀಘ್ರದಲ್ಲೇ ಕಠಿಣ ನಿರ್ಬಂಧಗಳನ್ನು ಹೇರಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

“ಇಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತನ್ನ ಹಿರಿಯ ಸಂಪುಟ ಸಹೋದ್ಯೋಗಿಗಳು ಮತ್ತು ಕೊರೊನಾ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಓಮೈಕ್ರಾನ್ ಹರಡುವಿಕೆಯನ್ನು ವಿಶ್ಲೇಷಿಸಿದ ನಂತರ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಿರ್ಧರಿಸಲಾಗುವುದು” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಂಗಳವಾರ ತಿಳಿಸಿದ್ದಾರೆ.

ಇದನ್ನೂ ಓದಿ:ಓಮೈಕ್ರಾನ್ ಆತಂಕ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ

“ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ಕ್ರಮಗಳು, ಮೈಕ್ರೋ ಕಂಟೈನ್‌ಮೆಂಟ್ ವಲಯಗಳು, ಶಾಲೆಗಳು ಮತ್ತು ಇತರ ನಿರ್ಬಂಧಗಳ ಕುರಿತು ಚರ್ಚಿಸಲಾಗುವುದು. ಬೆಂಗಳೂರು ಈ ಹಿಂದಿನ ಎರಡು ಅಲೆಗಳ ಕೇಂದ್ರಬಿಂದುವಾಗಿತ್ತು. ಜೊತೆಗೆ ಕರ್ನಾಟಕದಲ್ಲಿ ಪ್ರಾರಂಭವಾಗಿರುವ ಮೂರನೇ ಅಲೆಯಲ್ಲಿ ಅದೇ ಸಂಭವಿಸುವ ಸಾಧ್ಯತೆಯಿದೆ” ಎಂದು ಅವರು ಹೇಳಿದ್ದಾರೆ.

“ಬೇರೆ ದೇಶಗಳು ಮತ್ತು ರಾಜ್ಯಗಳ ಜನರು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾರೆ. ಆದ್ದರಿಂದ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ನಗರದಲ್ಲಿ ಹರಡುವಿಕೆಯನ್ನು ನಿಯಂತ್ರಿಸಿದರೆ, ರಾಜ್ಯದಲ್ಲೂ ಹರಡುವಿಕೆಯನ್ನು ನಿಯಂತ್ರಿಸಬಹುದು” ಎಂದು ಸುಧಾಕರ್ ಹೇಳಿದ್ದಾರೆ.

ಇದನ್ನೂ ಓದಿ:ಪ್ರಕರಣ ಹೆಚ್ಚಾದರೆ ಶಾಲೆ ಮುಚ್ಚಲು ಹಿಂದೆ ಸರಿಯುವುದಿಲ್ಲ: ಶಿಕ್ಷಣ ಸಚಿವ ನಾಗೇಶ್

ರಾಜ್ಯದಲ್ಲಿ ಕೊರೊನಾ ಹರಡುವುದನ್ನು ತಡೆಯಲು ಸಾಧ್ಯವಿಲ್ಲ ಆದರೆ ವಿವಿಧ ಕ್ರಮಗಳ ಮೂಲಕ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಜನರ ಜೀವನ ಮತ್ತು ಜೀವನೋಪಾಯಗಳು ಸಹಜ ಸ್ಥಿತಿಗೆ ಮರಳಿರುವುದರಿಂದ ಲಾಕ್‌ಡೌನ್‌ನಂತಹ ಪದಗಳನ್ನು ಬಳಸಬೇಡಿ ಎಂದು ಅವರು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ. ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ಕ್ರಮಗಳನ್ನು ತರಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಅವರು ತಿಳಿಸಿದ್ದಾರೆ.

15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವುದನ್ನು ರಾಜ್ಯದಲ್ಲಿ ಸೋಮವಾರದಿಂದ ಪ್ರಾರಂಭಿಸಲಾಗಿದೆ.

ಇದನ್ನೂ ಓದಿ:2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...