ಬೆಂಗಳೂರಿನಲ್ಲಿ ಕ್ರಮೇಣ ಸೋಂಕು ಇಳಿಮುಖವಾಗುತ್ತಿದೆ. ಒಂದು ತಿಂಗಳ ಹಿಂದೆ 15000 ದಿಂದ 20000 ದ ವರೆಗೆ ಇರುತ್ತಿದ್ದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಈಗ ಕೇವಲ 2000-3000 ಕೋವಿಡ್ ಪ್ರಕರಣಗಳಷ್ಟೇ ಪತ್ತೆಯಾಗುತ್ತಿವೆ. ಸರ್ಕಾರ ಲಾಕ್ಡೌನ್ ಸಡಿಲಿಸಿ ಅನ್ಲಾಕ್ ಮಾಡಿದ ಪರಿಣಾಮದಿಂದ ಕೊರೋನಾ ಸೋಂಕಿನಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ. ಹಾಗಾಗಿ ಕಠಿಣ ನಿಯಮಗಳನ್ನು ಹೊರಡಿಸಲಾಗಿದೆ.
ದೇಶದ ಬೇರೆ ಬೇರೆ ರಾಜ್ಯಗಳು ಮತ್ತು ಇತರ ಜಿಲ್ಲೆಗಳಿಂದ ಕಾರ್ಮಿಕರು, ಉದ್ಯೋಗಿಗಳು ಬೆಂಗಳೂರಿನತ್ತ ದೌಡಾಯಿಸುತ್ತಿದ್ದಾರೆ. ಇಂದು ಜೂನ್ 14 ರಿಂದ ಬೆಂಗಳೂರು ಅನ್ಲಾಕ್ ಆಗಿರುವ ಕಾರಣ ಬಹುತೇಕರು ತಮ್ಮ ತಮ್ಮ ಕೆಲಸ ಮತ್ತು ಉದ್ಯೋಗಗಳಿಗೆ ತೆರಳಲಿದ್ದಾರೆ. ಇದೆಲ್ಲದರ ಪರಿಣಾಮ ಬೆಂಗಳೂರಿನಲ್ಲಿ ಜನದಟ್ಟಣೆ ಹೆಚ್ಚಲಿದೆ. ಹಾಗೂ ಮೆಜೆಸ್ಟಿಕ್ ರೈಲ್ವೆ ನಿಲ್ಧಾಣ ಮುಂತಾದ ಕಡೆ ಜನ ಸಂದಣಿ ಉಂಟಾಗಲಿದೆ. ಇದೆಲ್ಲದರ ಪರಿಣಾಮ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಹೊರಗಡೆಯಿಂದ ಬೆಂಗಳೂರು ಪ್ರವೇಶಿಸುವವರಿಗೆ ಕಡ್ಡಾಯ ಕೊರೋನಾ ನೆಗೆಟಿವ್ ವರದಿಯನ್ನು ತರುವಂತೆ ಸಹ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಜಿಲ್ಲಾ ಪ್ರವಾಸದಿಂದ ಮರಳಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ಸಂಬಂಧ ಕೊರೋನಾ ಟೆಸ್ಟ್ ನೆಗೆಟಿವ್ ವರದಿಯ ಕುರಿತು ಅಧಿಕಾರಿಗಳಿಗೆ ತಿಳಿಸುತ್ತೇನೆ. ಬೆಂಗಳೂರಿಗೆ ಬರುವವರನ್ನು ಕೊರೋನಾ ಟೆಸ್ಟ್ಗೆ ಒಳಪಡಿಸುವ ವ್ಯವಸ್ಥೆ ಮಾಡುವಂತೆ ಆದೇಶಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : Sanchari Vijay | ಬೈಕ್ ಅಪಘಾತಕ್ಕೀಡಾಗಿದ್ದ ನಟ ಸಂಚಾರಿ ವಿಜಯ್ ನಿಧನ


