Homeಕರೋನಾ ತಲ್ಲಣಕೊರೊನಾ: ಡೇಟಾಗಳನ್ನು ಸರಿಯಾಗಿ ನಿರ್ವಹಿಸದ ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಕೊರೊನಾ: ಡೇಟಾಗಳನ್ನು ಸರಿಯಾಗಿ ನಿರ್ವಹಿಸದ ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ ಎಂದು ವೈದ್ಯರೊಬ್ಬರು ಹೇಳಿದ್ದಾರೆ

- Advertisement -
- Advertisement -

ಕೊರೊನಾ ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಗಳು, ಖಾಲಿ ಇರುವ ಹಾಸಿಗೆಗಳು ಮತ್ತು ಪರೀಕ್ಷೆಗಳ ಅಂಕಿ-ಅಂಶವನ್ನು ಸರಿಯಾಗಿ ನಿರ್ವಹಿಸದ ಕಾರಣಕ್ಕಾಗಿ ಗುಜರಾತ್ ಹೈಕೋರ್ಟ್‌‌ ರಾಜ್ಯ ಸರ್ಕಾರವನ್ನು ಗುರುವಾರ ತರಾಟೆಗೆ ತೆಗೆದುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಪೀಠವು ರಾಜ್ಯದ ಆರೋಗ್ಯ ಸೌಲಭ್ಯದ ವೆಬ್‌ಸೈಟ್‌‌ ಪ್ರಸ್ತುತ ಸಮಯದ ಅಂಕಿಅಂಶಗಳನ್ನು ಒದಗಿಸುವುದಿಲ್ಲ ಎಂದು ಹೇಳಿದ್ದಾರೆ. “ಅದರಲ್ಲಿ ಆರೋಗ್ಯ ಸೌಲಭ್ಯದ ಲಭ್ಯತೆ ಇದೆ ಎಂದು ಇದು ತೋರಿಸುತ್ತದೆ, ಆದರೆ ಆಸ್ಪತ್ರೆಗೆ ಹೋಗಿ ನೋಡಿದಾಗ ಅಲ್ಲಿ ಸೌಲಭ್ಯವು ಇಲ್ಲದೆ ಇರುವುದನ್ನು ಕಾಣಬಹುದು” ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮ್‌ ನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಆರೋಗ್ಯ ಸೌಲಭ್ಯದ ಪೋರ್ಟಲ್‌ ಅನ್ನು ಆಸ್ಪತ್ರೆಗಳ ಸಂಘವು ನಿರ್ವಹಿಸುತ್ತಿದೆ ಎಂದು ರಾಜ್ಯ ಸರ್ಕಾವು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು ಅಂಕಿ ಅಂಶವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಮತ್ತು ನಿಖರವಾದ ಮಾಹಿತಿಯನ್ನು ಒದಗಿಸಬೇಕು ಎಂದು ಆದೇಶ ನೀಡಿದೆ.

“ಅದನ್ನು ಆಸ್ಪತ್ರೆಗಳ ಸಂಘಕ್ಕೆ ಬಿಡಲು ಸಾಧ್ಯವಿಲ್ಲ. ಬಹಳಷ್ಟು ಕುಟುಂಬಗಳು ಸಣ್ಣ ಮನೆಯಲ್ಲಿ ವಾಸಿಸುತ್ತವೆ. ಎರಡು ಪರೀಕ್ಷೆಗಳಲ್ಲೂ ಪಾಸಿಟಿವ್‌ ಬಂದರೆ, ಇತರರು ಏನು ಮಾಡಬೇಕು? ಪೋಷಕರು ಪಾಸಿಟಿವ್ ಆದರೆ ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಕುಟುಂಬ ಸದಸ್ಯರಿಗೆ ಏನಾದರೂ ವ್ಯವಸ್ಥೆ ಇದೆಯೇ?” ಎಂದು ನ್ಯಾಯಮೂರ್ತಿ ಪ್ರಶ್ನಿಸಿದ್ದಾರೆ.

ಗುಜರತ್‌‌ನಲ್ಲಿ ಕೊರೊನಾ ತಾಂಡವಾಡುತ್ತಿದ್ದು, ಪರಿಸ್ಥಿತಿ ಕೈಮೀರಿದೆ ಎಂದು ವರದಿಯಾಗಿದೆ. ಸೋಂಕಿನಿಂದಾಗಿ ಮೃತಪಟ್ಟವರ ಅಂತ್ಯಕ್ರಿಯೆಗೂ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಅಲ್ಲಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು: ಮಣಿಪಾಲ ಆಸ್ಪತ್ರೆಗೆ ದಾಖಲು

ಈ ನಡುವೆ ಕೊರೊನಾ ಸೋಂಕು ದೃಢಪಟ್ಟು ಅಸ್ವಸ್ಥರಾಗಿ ಮರಣ ಹೊಂದಿರುವ ರೋಗಿಗಳನ್ನು ಕೊರೊನಾ ಸಾವುಗಳಿಗೆ ಸೇರಿಸದಂತೆ ಸರ್ಕಾರದಿಂದ ಆದೇಶಗಳಿವೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ.

ಸೂರತ್ ಮೂಲದ ಡಾ. ಚಂದ್ರೇಶ್ ಜರ್ದೋಶ್, “ಇದು ಹೊಸ ವಿಷಯವೇನಲ್ಲ. ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸೂರತ್‌ನ ಚಿತಾಗಾರಗಳಲ್ಲಿ ಸ್ಥಳಾವಕಾಶವಿಲ್ಲದೇ ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ, ವಿದ್ಯುತ್ ಚಿತಾಗಾರದ ಲೋಹದ ಯಂತ್ರಗಳು ಸತತ ಅಂತ್ಯಕ್ರಿಯೆಯಿಂದ ಕರಗಿ ಹೋಗುತ್ತಿವೆ. ಆದರೆ, ಸರ್ಕಾರ ಮಾತ್ರ ಕೊರೊನಾ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯಲ್ಲಿ ವ್ಯತ್ಯಾಸ ತೋರಿಸುವ ಅಂಕಿ ಅಂಶಗಳನ್ನು ನೀಡುತ್ತಿದೆ.

ಇದನ್ನೂ ಓದಿ: ಸಭೆ-ಸಮಾರಂಭಗಳಲ್ಲಿ 200 ಜನಕ್ಕಷ್ಟೇ ಅವಕಾಶ: ಕುಂಭಮೇಳಕ್ಕೆ ವಿನಾಯಿತಿ ನೀಡಿದ ಉತ್ತರಾಖಂಡ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...