Homeಕರೋನಾ ತಲ್ಲಣಕೊರೊನಾ: ಡೇಟಾಗಳನ್ನು ಸರಿಯಾಗಿ ನಿರ್ವಹಿಸದ ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಕೊರೊನಾ: ಡೇಟಾಗಳನ್ನು ಸರಿಯಾಗಿ ನಿರ್ವಹಿಸದ ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ ಎಂದು ವೈದ್ಯರೊಬ್ಬರು ಹೇಳಿದ್ದಾರೆ

- Advertisement -
- Advertisement -

ಕೊರೊನಾ ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಗಳು, ಖಾಲಿ ಇರುವ ಹಾಸಿಗೆಗಳು ಮತ್ತು ಪರೀಕ್ಷೆಗಳ ಅಂಕಿ-ಅಂಶವನ್ನು ಸರಿಯಾಗಿ ನಿರ್ವಹಿಸದ ಕಾರಣಕ್ಕಾಗಿ ಗುಜರಾತ್ ಹೈಕೋರ್ಟ್‌‌ ರಾಜ್ಯ ಸರ್ಕಾರವನ್ನು ಗುರುವಾರ ತರಾಟೆಗೆ ತೆಗೆದುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಪೀಠವು ರಾಜ್ಯದ ಆರೋಗ್ಯ ಸೌಲಭ್ಯದ ವೆಬ್‌ಸೈಟ್‌‌ ಪ್ರಸ್ತುತ ಸಮಯದ ಅಂಕಿಅಂಶಗಳನ್ನು ಒದಗಿಸುವುದಿಲ್ಲ ಎಂದು ಹೇಳಿದ್ದಾರೆ. “ಅದರಲ್ಲಿ ಆರೋಗ್ಯ ಸೌಲಭ್ಯದ ಲಭ್ಯತೆ ಇದೆ ಎಂದು ಇದು ತೋರಿಸುತ್ತದೆ, ಆದರೆ ಆಸ್ಪತ್ರೆಗೆ ಹೋಗಿ ನೋಡಿದಾಗ ಅಲ್ಲಿ ಸೌಲಭ್ಯವು ಇಲ್ಲದೆ ಇರುವುದನ್ನು ಕಾಣಬಹುದು” ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮ್‌ ನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಆರೋಗ್ಯ ಸೌಲಭ್ಯದ ಪೋರ್ಟಲ್‌ ಅನ್ನು ಆಸ್ಪತ್ರೆಗಳ ಸಂಘವು ನಿರ್ವಹಿಸುತ್ತಿದೆ ಎಂದು ರಾಜ್ಯ ಸರ್ಕಾವು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು ಅಂಕಿ ಅಂಶವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಮತ್ತು ನಿಖರವಾದ ಮಾಹಿತಿಯನ್ನು ಒದಗಿಸಬೇಕು ಎಂದು ಆದೇಶ ನೀಡಿದೆ.

“ಅದನ್ನು ಆಸ್ಪತ್ರೆಗಳ ಸಂಘಕ್ಕೆ ಬಿಡಲು ಸಾಧ್ಯವಿಲ್ಲ. ಬಹಳಷ್ಟು ಕುಟುಂಬಗಳು ಸಣ್ಣ ಮನೆಯಲ್ಲಿ ವಾಸಿಸುತ್ತವೆ. ಎರಡು ಪರೀಕ್ಷೆಗಳಲ್ಲೂ ಪಾಸಿಟಿವ್‌ ಬಂದರೆ, ಇತರರು ಏನು ಮಾಡಬೇಕು? ಪೋಷಕರು ಪಾಸಿಟಿವ್ ಆದರೆ ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಕುಟುಂಬ ಸದಸ್ಯರಿಗೆ ಏನಾದರೂ ವ್ಯವಸ್ಥೆ ಇದೆಯೇ?” ಎಂದು ನ್ಯಾಯಮೂರ್ತಿ ಪ್ರಶ್ನಿಸಿದ್ದಾರೆ.

ಗುಜರತ್‌‌ನಲ್ಲಿ ಕೊರೊನಾ ತಾಂಡವಾಡುತ್ತಿದ್ದು, ಪರಿಸ್ಥಿತಿ ಕೈಮೀರಿದೆ ಎಂದು ವರದಿಯಾಗಿದೆ. ಸೋಂಕಿನಿಂದಾಗಿ ಮೃತಪಟ್ಟವರ ಅಂತ್ಯಕ್ರಿಯೆಗೂ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಅಲ್ಲಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು: ಮಣಿಪಾಲ ಆಸ್ಪತ್ರೆಗೆ ದಾಖಲು

ಈ ನಡುವೆ ಕೊರೊನಾ ಸೋಂಕು ದೃಢಪಟ್ಟು ಅಸ್ವಸ್ಥರಾಗಿ ಮರಣ ಹೊಂದಿರುವ ರೋಗಿಗಳನ್ನು ಕೊರೊನಾ ಸಾವುಗಳಿಗೆ ಸೇರಿಸದಂತೆ ಸರ್ಕಾರದಿಂದ ಆದೇಶಗಳಿವೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ.

ಸೂರತ್ ಮೂಲದ ಡಾ. ಚಂದ್ರೇಶ್ ಜರ್ದೋಶ್, “ಇದು ಹೊಸ ವಿಷಯವೇನಲ್ಲ. ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸೂರತ್‌ನ ಚಿತಾಗಾರಗಳಲ್ಲಿ ಸ್ಥಳಾವಕಾಶವಿಲ್ಲದೇ ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ, ವಿದ್ಯುತ್ ಚಿತಾಗಾರದ ಲೋಹದ ಯಂತ್ರಗಳು ಸತತ ಅಂತ್ಯಕ್ರಿಯೆಯಿಂದ ಕರಗಿ ಹೋಗುತ್ತಿವೆ. ಆದರೆ, ಸರ್ಕಾರ ಮಾತ್ರ ಕೊರೊನಾ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯಲ್ಲಿ ವ್ಯತ್ಯಾಸ ತೋರಿಸುವ ಅಂಕಿ ಅಂಶಗಳನ್ನು ನೀಡುತ್ತಿದೆ.

ಇದನ್ನೂ ಓದಿ: ಸಭೆ-ಸಮಾರಂಭಗಳಲ್ಲಿ 200 ಜನಕ್ಕಷ್ಟೇ ಅವಕಾಶ: ಕುಂಭಮೇಳಕ್ಕೆ ವಿನಾಯಿತಿ ನೀಡಿದ ಉತ್ತರಾಖಂಡ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...