Homeಕರೋನಾ ತಲ್ಲಣಕೊರೊನಾ: ಮೃತದೇಹವನ್ನು ಕಸದ ವಾಹನದಲ್ಲಿ ಸಾಗಾಟ!

ಕೊರೊನಾ: ಮೃತದೇಹವನ್ನು ಕಸದ ವಾಹನದಲ್ಲಿ ಸಾಗಾಟ!

- Advertisement -
- Advertisement -

ಚತ್ತೀಸ್‌ಗಡದ ರಾಜನಂದಗಾಂವ್‌ನಲ್ಲಿ ಕೊರೊನಾದಿಂದ ಮೃತಪಟ್ಟ ರೋಗಿಗಳ ಶವಗಳನ್ನು ಸಾಗಿಸಲು ಕಸದ ವ್ಯಾನ್ ಬಳಸುವ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಾಲ್ಕು ನೈರ್ಮಲ್ಯ ಕಾರ್ಮಿಕರು, ಪೂರ್ಣ ಪಿಪಿಇ ಕಿಟ್‌ಗಳನ್ನು ಧರಿಸಿ, ಶವಗಳನ್ನು ಶವಸಂಸ್ಕಾರಕ್ಕೆ ಕರೆದೊಯ್ಯಲು ಬೇಕಾಗಿ ವ್ಯಾನ್‌ನ ಹಿಂಭಾಗಕ್ಕೆ ಎತ್ತಿ ಹಾಕುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ತಲ್ಲಣ ಸೃಷ್ಟಿಸಿದ್ದು, ಸರ್ಕಾರದ ವಿರುದ್ದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಘಟನೆಯ ಬಗ್ಗೆ ಮುಖ್ಯ ವೈದ್ಯಕೀಯ ಆರೋಗ್ಯ ಅಧಿಕಾರಿ, “ವಾಹನವನ್ನು ಜೋಡಿಸುವುದು ನಗರ ಪಂಚಾಯತ್ ಮತ್ತು ಸಿಎಮ್ಒನ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳಲ್ಲಿನ ಉಲ್ಬಣ ಮತ್ತು ಹಾಸಿಗೆಗಳ ಕೊರತೆಯನ್ನು ಎದುರಿಸಲು, ರಾಜನಂದಗಾಂವ್‌ನ ಪ್ರೆಸ್ ಕ್ಲಬ್ ತನ್ನ ಆವರಣವನ್ನು ಕೋವಿಡ್ ಕೇಂದ್ರವನ್ನಾಗಿ ಪರಿವರ್ತಿಸಿದೆ. ರೋಗಲಕ್ಷಣವಿಲ್ಲದ ಆದರೆ ವೈದ್ಯಕೀಯ ನೆರವು ಅಗತ್ಯವಿರುವ ರೋಗಿಗಳಿಗೆ ಪ್ರೆಸ್ ಕ್ಲಬ್ ಸದಸ್ಯರು 30 ಹಾಸಿಗೆಗಳನ್ನು ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ದೇಶದ ಅತ್ಯಂತ ಹೆಚ್ಚು ಕೊರೊನಾ ಪೀಡಿತ ರಾಜ್ಯಗಳಲ್ಲಿ ಒಂದಾದ ಚತ್ತೀಸ್‌ಗಡದಲ್ಲಿ ಹೆಚ್ಚುತ್ತಿರುವ ಪ್ರಕರಣಗಳು ಮತ್ತು ಸಾವಿನಿಂದಾಗಿ ಆರೋಗ್ಯ ಮೂಲಸೌಕರ್ಯದ ಕೊರತೆ ಉಂಟಾಗಿದೆ.

ಪ್ರಮುಖ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕಗಳು ಮತ್ತು ಆಮ್ಲಜನಕ-ಸುಸಜ್ಜಿತ ಹಾಸಿಗೆಗಳು ಕಳೆದ ಒಂದು ವಾರದಿಂದ ಸುಮಾರು 100 ಪ್ರತಿಶತದಷ್ಟು ತುಂಬಿಹೋಗಿದೆ. ಶನಿವಾರದಂದು ರೆಕಾರ್ಡ್ ಮಾಡಲಾದ ವೀಡಿಯೊ ಕ್ಲಿಪ್ ಒಂದರಲ್ಲಿ ಮೃತ ದೇಹಗಳನ್ನು ಫ್ರೀಜರ್‌ಗಳಲ್ಲಿ ಇರಿಸಿಕೊಳ್ಳುವ ಬದಲು, ಎಲ್ಲೆಂದರಲ್ಲಿ ಇರಿಸಲಾಗುತ್ತಿವ ದೃಶ್ಯವನ್ನು ತೋರಿಸಿತ್ತು.

ಚತ್ತೀಸ್‌ಗಡದಲ್ಲಿ ಬುಧವಾರ 14,250 ಹೊಸ ಕೊರೊನಾ ಪ್ರಕರಣಗಳು ಮತ್ತು 120 ಸಾವುಗಳು ವರದಿಯಾಗಿದೆ. ರಾಜ್ಯದಲ್ಲಿ ಸೋಂಕಿನ ಸಂಖ್ಯೆ 4,86,244 ಮತ್ತು ಸಾವಿನ ಸಂಖ್ಯೆ 5,307 ಕ್ಕೆ ತಲುಪಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ತಿಳಿಸಿದೆ.

ಕಳೆದ ಒಂದು ತಿಂಗಳಲ್ಲಿ ರಾಜ್ಯದಲ್ಲಿ 1.68 ಲಕ್ಷ ಪ್ರಕರಣಗಳು ಮತ್ತು 1,417 ಸಾವುಗಳು ದಾಖಲಾಗಿವೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ರೆಮ್ಡಿಸಿವಿರ್‌ ಕೊರತೆ: ಖಾಸಗಿ ಆಸ್ಪತ್ರೆಗಳ ಒಕ್ಕೂಟ ‘ಫಾನಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...