Homeಮುಖಪುಟಕೊರೊನಾ ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೋಕ್ವಿನ್‌ನಿಂದ ಪ್ರಯೋಜನವಿಲ್ಲ: ಅಧ್ಯಯನ ವರದಿ

ಕೊರೊನಾ ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೋಕ್ವಿನ್‌ನಿಂದ ಪ್ರಯೋಜನವಿಲ್ಲ: ಅಧ್ಯಯನ ವರದಿ

- Advertisement -
- Advertisement -

COVID-19 ರೋಗಿಗಳಿಗೆ ಮಲೇರಿಯಾ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ (HCQ) ಚಿಕಿತ್ಸೆ ನೀಡುವುದರಿಂದ ಯಾವುದೇ ಸಕಾರಾತ್ಮಕ ಪರಿಣಾಮ ಬೀರಲಿಲ್ಲ ಬದಲಿಗೆ ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಯಿತು ಎಂದು ಎರಡು ಹೊಸ ಅಧ್ಯಯನಗಳು ತಿಳಿಸಿವೆ.

ಲ್ಯಾಬ್ ನಲ್ಲಿನ ಆರಂಭಿಕ ಅಧ್ಯಯನಗಳು ಹೈಡ್ರಾಕ್ಸಿಕ್ಲೋರೋಕ್ವಿನ್ (HCQ) ಚಿಕಿತ್ಸೆಯು ಕೊರೊನಾ ವೈರಸ್ ಪುನರಾವರ್ತನೆಯಾವುದುನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ತೋರಿಸಿದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಇತರರು ಸಂಭಾವ್ಯ ಈ ಚಿಕಿತ್ಸೆಯನ್ನು “ಗೇಮ್ ಚೇಂಜರ್” ಎಂದು ಕರೆದಿದ್ದರು.

ಅಮೆರಿಕ ಸರ್ಕಾರದಿಂದ ಧನಸಹಾಯ ಪಡೆದವು ಒಳಗೊಂಡಂತೆ ನಡೆಸಿದ ಅಧ್ಯಯನಗಳು COVID-19 ಯೊಂದಿಗೆ ಆಸ್ಪತ್ರೆಗೆ ದಾಖಲಾದ ರೋಗಿಗಳಿಗೆ HCQ ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ಮೂಡಿಸಿದ್ದವು.

ಶುಕ್ರವಾರ ಬಿಡುಗಡೆಯಾದ ಮೊದಲ ಅಧ್ಯಯನದಲ್ಲಿ, ಫ್ರಾನ್ಸ್‌ನ ಸಂಶೋಧಕರು COVID-19 ಕಾರಣದಿಂದಾಗಿ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾದ ಆಮ್ಲಜನಕದ ಅಗತ್ಯವಿದ್ದ 181 ರೋಗಿಗಳ ಮೇಲೆ ನಿಗಾ ವಹಿಸಿ ಪ್ರಯೋಗ ನಡೆಸಲಾಗಿದೆ. ಅವರಲ್ಲಿ ಎಂಭತ್ತನಾಲ್ಕು ಜನರಿಗೆ ಎಚ್‌ಸಿಕ್ಯು ಚಿಕಿತ್ಸೆ ನೀಡಲಾಯಿತು ಮತ್ತು 97 ಮಂದಿ ಚಿಕಿತ್ಸೆ ನೀಡಿಲ್ಲ.

ಆದರೂ ತೀವ್ರ ನಿಗಾಕ್ಕೆ ವರ್ಗಾವಣೆ, ಏಳು ದಿನಗಳಲ್ಲಿ ಸಾವು ಅಥವಾ 10 ದಿನಗಳಲ್ಲಿ ತೀವ್ರವಾದ ಉಸಿರಾಟದ ತೊಂದರೆ ಸಿಂಡ್ರೋಮ್ ಅನ್ನು ಅಭಿವೃದ್ಧಿಪಡಿಸಲು ಗುಂಪುಗಳ ನಡುವೆ ಯಾವುದೇ ಅರ್ಥಪೂರ್ಣ ವ್ಯತ್ಯಾಸವನ್ನು ಅವರು ಕಂಡುಕೊಂಡಿಲ್ಲ ಎಂದು ಅಧ್ಯಯನ ವರದಿ ತಿಳಿಸಿದೆ.

“ಸಣ್ಣ ಅಧ್ಯಯನಗಳಲ್ಲಿ ಬಂದ ಸಕಾರಾತ್ಮಕ ಫಲಿತಾಂಶಗಳ ಕಾರಣ COVID-19 ಗೆ ಸಂಭಾವ್ಯ ಚಿಕಿತ್ಸೆಯಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ವಿಶ್ವಾದ್ಯಂತ ಗಮನ ಸೆಳೆದಿದೆ” ಎಂದು BMJ ಜರ್ನಲ್‌ನಲ್ಲಿ ಪ್ರಕಟವಾದ ಸಂಶೋಧನೆಯ ಲೇಖಕರು ಹೇಳಿದ್ದಾರೆ.

“ಆದಾಗ್ಯೂ, ಈ ಅಧ್ಯಯನದ ಫಲಿತಾಂಶಗಳು COVID-19 ಯೊಂದಿಗೆ ಆಸ್ಪತ್ರೆಗೆ ದಾಖಲಾದ ಆಮ್ಲಜನಕದ ಅಗತ್ಯವಿರುವ ರೋಗಿಗಳಿಗೆ ಇದರ ಬಳಕೆ ಉತ್ತಮವಲ್ಲ ಎಂದು ಅಧ್ಯಯನ ತಿಳಿಸಿದೆ.

ಎರಡನೇ ಅಧ್ಯಯನದಲ್ಲಿ ಚೀನಾದಲ್ಲಿ ಸಂಶೋಧಕರು 150 COVID-19 ರೋಗಿಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಿದ್ದಾರೆ, ಅದರಲ್ಲಿ ಒಂದು ಗುಂಪಿಗೆ HCQ ಚಿಕಿತ್ಸೆ ನೀಡಿದ್ದಾರೆ. ನಾಲ್ಕು ವಾರಗಳ ಪರೀಕ್ಷೆಗಳ ನಂತರ ಎರಡೂ ಗುಂಪುಗಳಲ್ಲಿ ನಿರಂತರ ಸೋಂಕಿನ ಪ್ರಮಾಣವು ಬಹಿರಂಗವಾಯಿತು, ಆದರೂ ಚಿಕಿತ್ಸೆಗೆ ಪ್ರತಿಕೂಲ ಪ್ರತಿಕ್ರಿಯೆಗಳು HCQ ಗುಂಪಿನಲ್ಲಿ ಹೆಚ್ಚು ಕಂಡುಬಂದಿದೆ ಎಂದು ಹೇಳಲಾಗಿದೆ. ರೋಗಲಕ್ಷಣಗಳ ತೀವ್ರತೆ ಅಥವಾ ಅವಧಿಯು ಪ್ರತಿ ಗುಂಪಿನ ನಡುವೆ ಭಿನ್ನವಾಗಿರಲಿಲ್ಲ ಎಂದು ತಿಳಿಸಲಾಗಿದೆ.

ಮಲೇರಿಯಾ ಚಿಕಿತ್ಸೆಗಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಸಂಬಂಧಿತ ಸಂಯುಕ್ತ ಕ್ಲೋರೊಕ್ವಿನ್ ಅನ್ನು ದಶಕಗಳಿಂದ ಬಳಸಲಾಗುತ್ತದೆ.

ಕಳೆದ ತಿಂಗಳು ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ ಎಚ್‌ಸಿಕ್ಯು COVID-19 ಗೆ ಚಿಕಿತ್ಸೆ ನೀಡುವ ಯಾವುದೇ ಸೂಚನೆಯಿಲ್ಲ ಎಂದು ಎಚ್ಚರಿಸಿದೆ. ಅಲ್ಲದೇ ಇದರಿಂದ ಕೆಲವು ಅಧ್ಯಯನಗಳ ಪ್ರಕಾರ ರೋಗಿಗಳಲ್ಲಿ ಗಂಭೀರ ಮತ್ತು ಕೆಲವೊಮ್ಮೆ ಮಾರಣಾಂತಿಕ ಹೃದಯ ಸಮಸ್ಯೆಗಳನ್ನು ಕಂಡಿದೆ ಎಂದು ಅದು ಹೇಳಿದೆ.


ಇದನ್ನೂ ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...