Homeಮುಖಪುಟಕೊರೊನಾ ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೋಕ್ವಿನ್‌ನಿಂದ ಪ್ರಯೋಜನವಿಲ್ಲ: ಅಧ್ಯಯನ ವರದಿ

ಕೊರೊನಾ ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೋಕ್ವಿನ್‌ನಿಂದ ಪ್ರಯೋಜನವಿಲ್ಲ: ಅಧ್ಯಯನ ವರದಿ

- Advertisement -
- Advertisement -

COVID-19 ರೋಗಿಗಳಿಗೆ ಮಲೇರಿಯಾ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ (HCQ) ಚಿಕಿತ್ಸೆ ನೀಡುವುದರಿಂದ ಯಾವುದೇ ಸಕಾರಾತ್ಮಕ ಪರಿಣಾಮ ಬೀರಲಿಲ್ಲ ಬದಲಿಗೆ ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಯಿತು ಎಂದು ಎರಡು ಹೊಸ ಅಧ್ಯಯನಗಳು ತಿಳಿಸಿವೆ.

ಲ್ಯಾಬ್ ನಲ್ಲಿನ ಆರಂಭಿಕ ಅಧ್ಯಯನಗಳು ಹೈಡ್ರಾಕ್ಸಿಕ್ಲೋರೋಕ್ವಿನ್ (HCQ) ಚಿಕಿತ್ಸೆಯು ಕೊರೊನಾ ವೈರಸ್ ಪುನರಾವರ್ತನೆಯಾವುದುನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ತೋರಿಸಿದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಇತರರು ಸಂಭಾವ್ಯ ಈ ಚಿಕಿತ್ಸೆಯನ್ನು “ಗೇಮ್ ಚೇಂಜರ್” ಎಂದು ಕರೆದಿದ್ದರು.

ಅಮೆರಿಕ ಸರ್ಕಾರದಿಂದ ಧನಸಹಾಯ ಪಡೆದವು ಒಳಗೊಂಡಂತೆ ನಡೆಸಿದ ಅಧ್ಯಯನಗಳು COVID-19 ಯೊಂದಿಗೆ ಆಸ್ಪತ್ರೆಗೆ ದಾಖಲಾದ ರೋಗಿಗಳಿಗೆ HCQ ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ಮೂಡಿಸಿದ್ದವು.

ಶುಕ್ರವಾರ ಬಿಡುಗಡೆಯಾದ ಮೊದಲ ಅಧ್ಯಯನದಲ್ಲಿ, ಫ್ರಾನ್ಸ್‌ನ ಸಂಶೋಧಕರು COVID-19 ಕಾರಣದಿಂದಾಗಿ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾದ ಆಮ್ಲಜನಕದ ಅಗತ್ಯವಿದ್ದ 181 ರೋಗಿಗಳ ಮೇಲೆ ನಿಗಾ ವಹಿಸಿ ಪ್ರಯೋಗ ನಡೆಸಲಾಗಿದೆ. ಅವರಲ್ಲಿ ಎಂಭತ್ತನಾಲ್ಕು ಜನರಿಗೆ ಎಚ್‌ಸಿಕ್ಯು ಚಿಕಿತ್ಸೆ ನೀಡಲಾಯಿತು ಮತ್ತು 97 ಮಂದಿ ಚಿಕಿತ್ಸೆ ನೀಡಿಲ್ಲ.

ಆದರೂ ತೀವ್ರ ನಿಗಾಕ್ಕೆ ವರ್ಗಾವಣೆ, ಏಳು ದಿನಗಳಲ್ಲಿ ಸಾವು ಅಥವಾ 10 ದಿನಗಳಲ್ಲಿ ತೀವ್ರವಾದ ಉಸಿರಾಟದ ತೊಂದರೆ ಸಿಂಡ್ರೋಮ್ ಅನ್ನು ಅಭಿವೃದ್ಧಿಪಡಿಸಲು ಗುಂಪುಗಳ ನಡುವೆ ಯಾವುದೇ ಅರ್ಥಪೂರ್ಣ ವ್ಯತ್ಯಾಸವನ್ನು ಅವರು ಕಂಡುಕೊಂಡಿಲ್ಲ ಎಂದು ಅಧ್ಯಯನ ವರದಿ ತಿಳಿಸಿದೆ.

“ಸಣ್ಣ ಅಧ್ಯಯನಗಳಲ್ಲಿ ಬಂದ ಸಕಾರಾತ್ಮಕ ಫಲಿತಾಂಶಗಳ ಕಾರಣ COVID-19 ಗೆ ಸಂಭಾವ್ಯ ಚಿಕಿತ್ಸೆಯಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ವಿಶ್ವಾದ್ಯಂತ ಗಮನ ಸೆಳೆದಿದೆ” ಎಂದು BMJ ಜರ್ನಲ್‌ನಲ್ಲಿ ಪ್ರಕಟವಾದ ಸಂಶೋಧನೆಯ ಲೇಖಕರು ಹೇಳಿದ್ದಾರೆ.

“ಆದಾಗ್ಯೂ, ಈ ಅಧ್ಯಯನದ ಫಲಿತಾಂಶಗಳು COVID-19 ಯೊಂದಿಗೆ ಆಸ್ಪತ್ರೆಗೆ ದಾಖಲಾದ ಆಮ್ಲಜನಕದ ಅಗತ್ಯವಿರುವ ರೋಗಿಗಳಿಗೆ ಇದರ ಬಳಕೆ ಉತ್ತಮವಲ್ಲ ಎಂದು ಅಧ್ಯಯನ ತಿಳಿಸಿದೆ.

ಎರಡನೇ ಅಧ್ಯಯನದಲ್ಲಿ ಚೀನಾದಲ್ಲಿ ಸಂಶೋಧಕರು 150 COVID-19 ರೋಗಿಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಿದ್ದಾರೆ, ಅದರಲ್ಲಿ ಒಂದು ಗುಂಪಿಗೆ HCQ ಚಿಕಿತ್ಸೆ ನೀಡಿದ್ದಾರೆ. ನಾಲ್ಕು ವಾರಗಳ ಪರೀಕ್ಷೆಗಳ ನಂತರ ಎರಡೂ ಗುಂಪುಗಳಲ್ಲಿ ನಿರಂತರ ಸೋಂಕಿನ ಪ್ರಮಾಣವು ಬಹಿರಂಗವಾಯಿತು, ಆದರೂ ಚಿಕಿತ್ಸೆಗೆ ಪ್ರತಿಕೂಲ ಪ್ರತಿಕ್ರಿಯೆಗಳು HCQ ಗುಂಪಿನಲ್ಲಿ ಹೆಚ್ಚು ಕಂಡುಬಂದಿದೆ ಎಂದು ಹೇಳಲಾಗಿದೆ. ರೋಗಲಕ್ಷಣಗಳ ತೀವ್ರತೆ ಅಥವಾ ಅವಧಿಯು ಪ್ರತಿ ಗುಂಪಿನ ನಡುವೆ ಭಿನ್ನವಾಗಿರಲಿಲ್ಲ ಎಂದು ತಿಳಿಸಲಾಗಿದೆ.

ಮಲೇರಿಯಾ ಚಿಕಿತ್ಸೆಗಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಸಂಬಂಧಿತ ಸಂಯುಕ್ತ ಕ್ಲೋರೊಕ್ವಿನ್ ಅನ್ನು ದಶಕಗಳಿಂದ ಬಳಸಲಾಗುತ್ತದೆ.

ಕಳೆದ ತಿಂಗಳು ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ ಎಚ್‌ಸಿಕ್ಯು COVID-19 ಗೆ ಚಿಕಿತ್ಸೆ ನೀಡುವ ಯಾವುದೇ ಸೂಚನೆಯಿಲ್ಲ ಎಂದು ಎಚ್ಚರಿಸಿದೆ. ಅಲ್ಲದೇ ಇದರಿಂದ ಕೆಲವು ಅಧ್ಯಯನಗಳ ಪ್ರಕಾರ ರೋಗಿಗಳಲ್ಲಿ ಗಂಭೀರ ಮತ್ತು ಕೆಲವೊಮ್ಮೆ ಮಾರಣಾಂತಿಕ ಹೃದಯ ಸಮಸ್ಯೆಗಳನ್ನು ಕಂಡಿದೆ ಎಂದು ಅದು ಹೇಳಿದೆ.


ಇದನ್ನೂ ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...