Homeಮುಖಪುಟಕೊರೊನಾ ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೋಕ್ವಿನ್‌ನಿಂದ ಪ್ರಯೋಜನವಿಲ್ಲ: ಅಧ್ಯಯನ ವರದಿ

ಕೊರೊನಾ ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೋಕ್ವಿನ್‌ನಿಂದ ಪ್ರಯೋಜನವಿಲ್ಲ: ಅಧ್ಯಯನ ವರದಿ

- Advertisement -
- Advertisement -

COVID-19 ರೋಗಿಗಳಿಗೆ ಮಲೇರಿಯಾ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ (HCQ) ಚಿಕಿತ್ಸೆ ನೀಡುವುದರಿಂದ ಯಾವುದೇ ಸಕಾರಾತ್ಮಕ ಪರಿಣಾಮ ಬೀರಲಿಲ್ಲ ಬದಲಿಗೆ ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಯಿತು ಎಂದು ಎರಡು ಹೊಸ ಅಧ್ಯಯನಗಳು ತಿಳಿಸಿವೆ.

ಲ್ಯಾಬ್ ನಲ್ಲಿನ ಆರಂಭಿಕ ಅಧ್ಯಯನಗಳು ಹೈಡ್ರಾಕ್ಸಿಕ್ಲೋರೋಕ್ವಿನ್ (HCQ) ಚಿಕಿತ್ಸೆಯು ಕೊರೊನಾ ವೈರಸ್ ಪುನರಾವರ್ತನೆಯಾವುದುನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ತೋರಿಸಿದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಇತರರು ಸಂಭಾವ್ಯ ಈ ಚಿಕಿತ್ಸೆಯನ್ನು “ಗೇಮ್ ಚೇಂಜರ್” ಎಂದು ಕರೆದಿದ್ದರು.

ಅಮೆರಿಕ ಸರ್ಕಾರದಿಂದ ಧನಸಹಾಯ ಪಡೆದವು ಒಳಗೊಂಡಂತೆ ನಡೆಸಿದ ಅಧ್ಯಯನಗಳು COVID-19 ಯೊಂದಿಗೆ ಆಸ್ಪತ್ರೆಗೆ ದಾಖಲಾದ ರೋಗಿಗಳಿಗೆ HCQ ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ಮೂಡಿಸಿದ್ದವು.

ಶುಕ್ರವಾರ ಬಿಡುಗಡೆಯಾದ ಮೊದಲ ಅಧ್ಯಯನದಲ್ಲಿ, ಫ್ರಾನ್ಸ್‌ನ ಸಂಶೋಧಕರು COVID-19 ಕಾರಣದಿಂದಾಗಿ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾದ ಆಮ್ಲಜನಕದ ಅಗತ್ಯವಿದ್ದ 181 ರೋಗಿಗಳ ಮೇಲೆ ನಿಗಾ ವಹಿಸಿ ಪ್ರಯೋಗ ನಡೆಸಲಾಗಿದೆ. ಅವರಲ್ಲಿ ಎಂಭತ್ತನಾಲ್ಕು ಜನರಿಗೆ ಎಚ್‌ಸಿಕ್ಯು ಚಿಕಿತ್ಸೆ ನೀಡಲಾಯಿತು ಮತ್ತು 97 ಮಂದಿ ಚಿಕಿತ್ಸೆ ನೀಡಿಲ್ಲ.

ಆದರೂ ತೀವ್ರ ನಿಗಾಕ್ಕೆ ವರ್ಗಾವಣೆ, ಏಳು ದಿನಗಳಲ್ಲಿ ಸಾವು ಅಥವಾ 10 ದಿನಗಳಲ್ಲಿ ತೀವ್ರವಾದ ಉಸಿರಾಟದ ತೊಂದರೆ ಸಿಂಡ್ರೋಮ್ ಅನ್ನು ಅಭಿವೃದ್ಧಿಪಡಿಸಲು ಗುಂಪುಗಳ ನಡುವೆ ಯಾವುದೇ ಅರ್ಥಪೂರ್ಣ ವ್ಯತ್ಯಾಸವನ್ನು ಅವರು ಕಂಡುಕೊಂಡಿಲ್ಲ ಎಂದು ಅಧ್ಯಯನ ವರದಿ ತಿಳಿಸಿದೆ.

“ಸಣ್ಣ ಅಧ್ಯಯನಗಳಲ್ಲಿ ಬಂದ ಸಕಾರಾತ್ಮಕ ಫಲಿತಾಂಶಗಳ ಕಾರಣ COVID-19 ಗೆ ಸಂಭಾವ್ಯ ಚಿಕಿತ್ಸೆಯಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ವಿಶ್ವಾದ್ಯಂತ ಗಮನ ಸೆಳೆದಿದೆ” ಎಂದು BMJ ಜರ್ನಲ್‌ನಲ್ಲಿ ಪ್ರಕಟವಾದ ಸಂಶೋಧನೆಯ ಲೇಖಕರು ಹೇಳಿದ್ದಾರೆ.

“ಆದಾಗ್ಯೂ, ಈ ಅಧ್ಯಯನದ ಫಲಿತಾಂಶಗಳು COVID-19 ಯೊಂದಿಗೆ ಆಸ್ಪತ್ರೆಗೆ ದಾಖಲಾದ ಆಮ್ಲಜನಕದ ಅಗತ್ಯವಿರುವ ರೋಗಿಗಳಿಗೆ ಇದರ ಬಳಕೆ ಉತ್ತಮವಲ್ಲ ಎಂದು ಅಧ್ಯಯನ ತಿಳಿಸಿದೆ.

ಎರಡನೇ ಅಧ್ಯಯನದಲ್ಲಿ ಚೀನಾದಲ್ಲಿ ಸಂಶೋಧಕರು 150 COVID-19 ರೋಗಿಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಿದ್ದಾರೆ, ಅದರಲ್ಲಿ ಒಂದು ಗುಂಪಿಗೆ HCQ ಚಿಕಿತ್ಸೆ ನೀಡಿದ್ದಾರೆ. ನಾಲ್ಕು ವಾರಗಳ ಪರೀಕ್ಷೆಗಳ ನಂತರ ಎರಡೂ ಗುಂಪುಗಳಲ್ಲಿ ನಿರಂತರ ಸೋಂಕಿನ ಪ್ರಮಾಣವು ಬಹಿರಂಗವಾಯಿತು, ಆದರೂ ಚಿಕಿತ್ಸೆಗೆ ಪ್ರತಿಕೂಲ ಪ್ರತಿಕ್ರಿಯೆಗಳು HCQ ಗುಂಪಿನಲ್ಲಿ ಹೆಚ್ಚು ಕಂಡುಬಂದಿದೆ ಎಂದು ಹೇಳಲಾಗಿದೆ. ರೋಗಲಕ್ಷಣಗಳ ತೀವ್ರತೆ ಅಥವಾ ಅವಧಿಯು ಪ್ರತಿ ಗುಂಪಿನ ನಡುವೆ ಭಿನ್ನವಾಗಿರಲಿಲ್ಲ ಎಂದು ತಿಳಿಸಲಾಗಿದೆ.

ಮಲೇರಿಯಾ ಚಿಕಿತ್ಸೆಗಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಸಂಬಂಧಿತ ಸಂಯುಕ್ತ ಕ್ಲೋರೊಕ್ವಿನ್ ಅನ್ನು ದಶಕಗಳಿಂದ ಬಳಸಲಾಗುತ್ತದೆ.

ಕಳೆದ ತಿಂಗಳು ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ ಎಚ್‌ಸಿಕ್ಯು COVID-19 ಗೆ ಚಿಕಿತ್ಸೆ ನೀಡುವ ಯಾವುದೇ ಸೂಚನೆಯಿಲ್ಲ ಎಂದು ಎಚ್ಚರಿಸಿದೆ. ಅಲ್ಲದೇ ಇದರಿಂದ ಕೆಲವು ಅಧ್ಯಯನಗಳ ಪ್ರಕಾರ ರೋಗಿಗಳಲ್ಲಿ ಗಂಭೀರ ಮತ್ತು ಕೆಲವೊಮ್ಮೆ ಮಾರಣಾಂತಿಕ ಹೃದಯ ಸಮಸ್ಯೆಗಳನ್ನು ಕಂಡಿದೆ ಎಂದು ಅದು ಹೇಳಿದೆ.


ಇದನ್ನೂ ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...