Homeಮುಖಪುಟಕೊರೊನಾ ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೋಕ್ವಿನ್‌ನಿಂದ ಪ್ರಯೋಜನವಿಲ್ಲ: ಅಧ್ಯಯನ ವರದಿ

ಕೊರೊನಾ ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೋಕ್ವಿನ್‌ನಿಂದ ಪ್ರಯೋಜನವಿಲ್ಲ: ಅಧ್ಯಯನ ವರದಿ

- Advertisement -
- Advertisement -

COVID-19 ರೋಗಿಗಳಿಗೆ ಮಲೇರಿಯಾ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ (HCQ) ಚಿಕಿತ್ಸೆ ನೀಡುವುದರಿಂದ ಯಾವುದೇ ಸಕಾರಾತ್ಮಕ ಪರಿಣಾಮ ಬೀರಲಿಲ್ಲ ಬದಲಿಗೆ ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಯಿತು ಎಂದು ಎರಡು ಹೊಸ ಅಧ್ಯಯನಗಳು ತಿಳಿಸಿವೆ.

ಲ್ಯಾಬ್ ನಲ್ಲಿನ ಆರಂಭಿಕ ಅಧ್ಯಯನಗಳು ಹೈಡ್ರಾಕ್ಸಿಕ್ಲೋರೋಕ್ವಿನ್ (HCQ) ಚಿಕಿತ್ಸೆಯು ಕೊರೊನಾ ವೈರಸ್ ಪುನರಾವರ್ತನೆಯಾವುದುನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ತೋರಿಸಿದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಇತರರು ಸಂಭಾವ್ಯ ಈ ಚಿಕಿತ್ಸೆಯನ್ನು “ಗೇಮ್ ಚೇಂಜರ್” ಎಂದು ಕರೆದಿದ್ದರು.

ಅಮೆರಿಕ ಸರ್ಕಾರದಿಂದ ಧನಸಹಾಯ ಪಡೆದವು ಒಳಗೊಂಡಂತೆ ನಡೆಸಿದ ಅಧ್ಯಯನಗಳು COVID-19 ಯೊಂದಿಗೆ ಆಸ್ಪತ್ರೆಗೆ ದಾಖಲಾದ ರೋಗಿಗಳಿಗೆ HCQ ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ಮೂಡಿಸಿದ್ದವು.

ಶುಕ್ರವಾರ ಬಿಡುಗಡೆಯಾದ ಮೊದಲ ಅಧ್ಯಯನದಲ್ಲಿ, ಫ್ರಾನ್ಸ್‌ನ ಸಂಶೋಧಕರು COVID-19 ಕಾರಣದಿಂದಾಗಿ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾದ ಆಮ್ಲಜನಕದ ಅಗತ್ಯವಿದ್ದ 181 ರೋಗಿಗಳ ಮೇಲೆ ನಿಗಾ ವಹಿಸಿ ಪ್ರಯೋಗ ನಡೆಸಲಾಗಿದೆ. ಅವರಲ್ಲಿ ಎಂಭತ್ತನಾಲ್ಕು ಜನರಿಗೆ ಎಚ್‌ಸಿಕ್ಯು ಚಿಕಿತ್ಸೆ ನೀಡಲಾಯಿತು ಮತ್ತು 97 ಮಂದಿ ಚಿಕಿತ್ಸೆ ನೀಡಿಲ್ಲ.

ಆದರೂ ತೀವ್ರ ನಿಗಾಕ್ಕೆ ವರ್ಗಾವಣೆ, ಏಳು ದಿನಗಳಲ್ಲಿ ಸಾವು ಅಥವಾ 10 ದಿನಗಳಲ್ಲಿ ತೀವ್ರವಾದ ಉಸಿರಾಟದ ತೊಂದರೆ ಸಿಂಡ್ರೋಮ್ ಅನ್ನು ಅಭಿವೃದ್ಧಿಪಡಿಸಲು ಗುಂಪುಗಳ ನಡುವೆ ಯಾವುದೇ ಅರ್ಥಪೂರ್ಣ ವ್ಯತ್ಯಾಸವನ್ನು ಅವರು ಕಂಡುಕೊಂಡಿಲ್ಲ ಎಂದು ಅಧ್ಯಯನ ವರದಿ ತಿಳಿಸಿದೆ.

“ಸಣ್ಣ ಅಧ್ಯಯನಗಳಲ್ಲಿ ಬಂದ ಸಕಾರಾತ್ಮಕ ಫಲಿತಾಂಶಗಳ ಕಾರಣ COVID-19 ಗೆ ಸಂಭಾವ್ಯ ಚಿಕಿತ್ಸೆಯಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ವಿಶ್ವಾದ್ಯಂತ ಗಮನ ಸೆಳೆದಿದೆ” ಎಂದು BMJ ಜರ್ನಲ್‌ನಲ್ಲಿ ಪ್ರಕಟವಾದ ಸಂಶೋಧನೆಯ ಲೇಖಕರು ಹೇಳಿದ್ದಾರೆ.

“ಆದಾಗ್ಯೂ, ಈ ಅಧ್ಯಯನದ ಫಲಿತಾಂಶಗಳು COVID-19 ಯೊಂದಿಗೆ ಆಸ್ಪತ್ರೆಗೆ ದಾಖಲಾದ ಆಮ್ಲಜನಕದ ಅಗತ್ಯವಿರುವ ರೋಗಿಗಳಿಗೆ ಇದರ ಬಳಕೆ ಉತ್ತಮವಲ್ಲ ಎಂದು ಅಧ್ಯಯನ ತಿಳಿಸಿದೆ.

ಎರಡನೇ ಅಧ್ಯಯನದಲ್ಲಿ ಚೀನಾದಲ್ಲಿ ಸಂಶೋಧಕರು 150 COVID-19 ರೋಗಿಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಿದ್ದಾರೆ, ಅದರಲ್ಲಿ ಒಂದು ಗುಂಪಿಗೆ HCQ ಚಿಕಿತ್ಸೆ ನೀಡಿದ್ದಾರೆ. ನಾಲ್ಕು ವಾರಗಳ ಪರೀಕ್ಷೆಗಳ ನಂತರ ಎರಡೂ ಗುಂಪುಗಳಲ್ಲಿ ನಿರಂತರ ಸೋಂಕಿನ ಪ್ರಮಾಣವು ಬಹಿರಂಗವಾಯಿತು, ಆದರೂ ಚಿಕಿತ್ಸೆಗೆ ಪ್ರತಿಕೂಲ ಪ್ರತಿಕ್ರಿಯೆಗಳು HCQ ಗುಂಪಿನಲ್ಲಿ ಹೆಚ್ಚು ಕಂಡುಬಂದಿದೆ ಎಂದು ಹೇಳಲಾಗಿದೆ. ರೋಗಲಕ್ಷಣಗಳ ತೀವ್ರತೆ ಅಥವಾ ಅವಧಿಯು ಪ್ರತಿ ಗುಂಪಿನ ನಡುವೆ ಭಿನ್ನವಾಗಿರಲಿಲ್ಲ ಎಂದು ತಿಳಿಸಲಾಗಿದೆ.

ಮಲೇರಿಯಾ ಚಿಕಿತ್ಸೆಗಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಸಂಬಂಧಿತ ಸಂಯುಕ್ತ ಕ್ಲೋರೊಕ್ವಿನ್ ಅನ್ನು ದಶಕಗಳಿಂದ ಬಳಸಲಾಗುತ್ತದೆ.

ಕಳೆದ ತಿಂಗಳು ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ ಎಚ್‌ಸಿಕ್ಯು COVID-19 ಗೆ ಚಿಕಿತ್ಸೆ ನೀಡುವ ಯಾವುದೇ ಸೂಚನೆಯಿಲ್ಲ ಎಂದು ಎಚ್ಚರಿಸಿದೆ. ಅಲ್ಲದೇ ಇದರಿಂದ ಕೆಲವು ಅಧ್ಯಯನಗಳ ಪ್ರಕಾರ ರೋಗಿಗಳಲ್ಲಿ ಗಂಭೀರ ಮತ್ತು ಕೆಲವೊಮ್ಮೆ ಮಾರಣಾಂತಿಕ ಹೃದಯ ಸಮಸ್ಯೆಗಳನ್ನು ಕಂಡಿದೆ ಎಂದು ಅದು ಹೇಳಿದೆ.


ಇದನ್ನೂ ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....