Homeಕರೋನಾ ತಲ್ಲಣದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ: 2.55 ಲಕ್ಷ ಹೊಸ ಕೇಸ್‌ಗಳು

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ: 2.55 ಲಕ್ಷ ಹೊಸ ಕೇಸ್‌ಗಳು

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ ಐದು ದಿನಗಳಿಂದ ವರದಿಯಾಗುತ್ತಿದ್ದ ಮೂರು ಲಕ್ಷಕ್ಕೂ ಹೆಚ್ಚು ಪ್ರಕರಣಗಳ ಸರಣಿ ಮುಗಿದೆ. ಕಳೆದ 24 ಗಂಟೆಗಳಲ್ಲಿ 2,55,874 ಹೊಸ ಪ್ರಕರಣಗಳು ದಾಖಲಾಗಿವೆ. ಇದು ನಿನ್ನೆಯ (ಜ.24) 3.06 ಲಕ್ಷ ಪ್ರಕರಣಗಳಿಗಿಂತ ಶೇಕಡಾ 16.39 ಕಡಿಮೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 614 ಕೊರೊನಾ ಸಂಬಂಧಿತ ಸಾವುಗಳು ವರದಿಯಾಗಿವೆ. ಕೊರೊನಾ ಪಾಸಿಟಿವಿಟಿ ದರ ಶೇಕಡಾ 15.52 ಕ್ಕೆ ಇಳಿದಿದೆ. ಆದರೆ ಸಾಪ್ತಾಹಿಕ ಪಾಸಿಟಿವಿಟಿ ದರವು ಶೇಕಡಾ 17.17 ನಲ್ಲಿದೆ.  ದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಕವರೇಜ್ 162.92 ಕೋಟಿ ಪ್ರಮಾಣವನ್ನು ದಾಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮಹಾರಾಷ್ಟ್ರದಲ್ಲಿ 28,286 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 75,35,511 ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ 2,000 ಸೋಂಕಿತರು ದಾಖಲಾಗಿದ್ದಾರೆ. ಆದರೆ, ಸುಮಾರು ಒಂದು ತಿಂಗಳಲ್ಲಿ ನಗರದಲ್ಲಿ ವರದಿಯಾದ ಕಡಿಮೆ ದೈನಂದಿನ ಪ್ರಕರಣಗಳಾಗಿವೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಾದರೂ, ಲಸಿಕೆ ಕಾರಣಕ್ಕೆ ಸಾವು ನೋವು ಕಡಿಮೆಯಾಗಿದೆ: ICMR ಮುಖ್ಯಸ್ಥ

ದೆಹಲಿಯಲ್ಲಿ 5,760 ಹೊಸ ಕೇಸಸ್ ವರದಿಯಾಗಿವೆ. ದೈನಂದಿನ ಅಂಕಿ ಅಂಶಗಳಲ್ಲಿ ಶೇಕಡಾ 37 ರಷ್ಟು ಕಡಿಮೆಯಾಗಿದೆ. 11.79 ಪ್ರತಿಶತದಲ್ಲಿ, ಸಕಾರಾತ್ಮಕತೆಯ ದರವು ಹಿಂದಿನ ದಿನಕ್ಕೆ ಹೋಲಿಸಿದರೆ 13.3 ಪ್ರತಿಶತದಷ್ಟು ಇಳಿಕೆ ಕಂಡಿದೆ. ಜನವರಿ 13 ರಂದು ಗರಿಷ್ಠ 28,867 ದೈನಂದಿನ ಪ್ರಕರಣಗಳು ವರದಿಯಾದ ನಂತರ ರಾಷ್ಟ್ರೀಯ ರಾಜಧಾನಿಯಲ್ಲಿ ದೈನಂದಿನ ಸೋಂಕಿನ ಪ್ರಮಾಣ ಇಳಿಮುಖವಾಗಿದೆ.

ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಅನ್ನು ತೆಗೆದುಹಾಕಿದ ಮೂರು ದಿನಗಳ ನಂತರ ಕಳೆದ 24 ಗಂಟೆಗಳಲ್ಲಿ 46,426 ಕೋವಿಡ್ ಪ್ರಕರಣಗಳು ವರದಿ ಮಾಡಿದೆ. ಬೆಂಗಳೂರಿನಲ್ಲಿ ಒಂದೇ ದಿನ 21,569 ಕೇಸಸ್ ವರದಿಯಾಗಿವೆ.

ದೇಶದಲ್ಲಿ ವಯಸ್ಕರು ಕನಿಷ್ಠ 72 ಪ್ರತಿಶತದಷ್ಟು ಜನರು ಸಂಪೂರ್ಣವಾಗಿ ಲಸಿಕೆ ಪಡೆದಿದ್ದಾರೆ. ಆದರೆ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಲ್ಲಿ ಶೇಕಡಾ 52 ರಷ್ಟು ಮಂದಿ ತಮ್ಮ ಮೊದಲ ಡೋಸ್‌ ಪಡೆದಿದ್ದಾರೆ ಎಂದು ಸಚಿವಾಯಲ ತಿಳಿಸಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಅಭಿವೃದ್ಧಿಗೆ ಒಂದು ಪೈಸೆಯು ಕೊಡದ ಪಿಎಂ ಕೇರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...