Homeಕೊರೊನಾಕೊರೊನಾ ಚಿಕಿತ್ಸೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

ಕೊರೊನಾ ಚಿಕಿತ್ಸೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

- Advertisement -
- Advertisement -

ಕೊರೊನಾ ಸೋಂಕಿನಿಂದ ಬಳಲುತ್ತಿರುವ ರೋಗಿಗಳಿಗೆ ನೀಡುವ ಔಷಧ ಮತ್ತು ಚಿಕಿತ್ಸೆ ಬಗ್ಗೆ ಪರಿಷ್ಕೃತ ಕ್ಲಿನಿಕಲ್ ಮಾರ್ಗಸೂಚಿ ಬಿಡುಗಡೆ ಮಾಡಿರುವ ಆರೋಗ್ಯ ಸಚಿವಾಲಯ, ವೈದ್ಯರು ಚಿಕಿತ್ಸೆಗಾಗಿ ಸ್ಟಿರಾಯ್ಡ್‌ಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಹೇಳಿದೆ.

ಕೊರೊನಾ ಎರಡನೇ ಅಲೆಯ ಸಮಯದಲ್ಲಿ ಸ್ಟಿರಾಯ್ಡ್‌ಗಳ ಅತಿಯಾದ ಬಳಕೆಗೆ ಕೊರೊನಾ ಟಾಸ್ಕ್‌ ಫೋರ್ಸ್ ಮುಖ್ಯಸ್ಥರು ವಿಷಾದ ವ್ಯಕ್ತಪಡಿಸಿದ್ದರು. ಇದರ ಬೆನ್ನಲೆಯಲ್ಲೇ ಪರಿಷ್ಕೃತ ಮಾರ್ಗಸೂಚಿಗಳು ಬಂದಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ AIIMS, ICMR- ಕೋವಿಡ್ ರಾಷ್ಟ್ರೀಯ ಟಾಸ್ಕ್‌ ಫೋರ್ಸ್ ಮತ್ತು ಜಾಯಿಂಟ್ ಮಾನಿಟರಿಂಗ್ ಗ್ರೂಪ್ (DGHS) ಈ ಪರಿಷ್ಕೃತ ಕ್ಲಿನಿಕಲ್ ಮಾರ್ಗಸೂಚಿಗಳನ್ನು ನೀಡಿವೆ.

ಸ್ಟಿರಾಯ್ಡ್‌ಗಳಂತಹ ಔಷಧಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಅಥವಾ ಅಗತ್ಯಕ್ಕಿಂತ ಹೆಚ್ಚು ಕಾಲ ಬಳಸಿದಾಗ ಆಕ್ರಮಣಕಾರಿ ಮ್ಯೂಕಾರ್ಮೈಕೋಸಿಸ್ ಅಥವಾ ‘ಕಪ್ಪು ಶಿಲೀಂಧ್ರ’ ದಂತಹ ಸೆಕೆಂಡರಿ ಸೋಂಕಿನ ಅಪಾಯ ಉಂಟಾಗಬಹುದು ಎಂದು ಪರಿಷ್ಕೃತ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

ಎರಡು-ಮೂರು ವಾರಗಳಿಗಿಂತ ಹೆಚ್ಚು ಕಾಲ ಕೆಮ್ಮು ಮುಂದುವರಿದರೆ ಕಡ್ಡಾಯವಾಗಿ ಕ್ಷಯರೋಗ ಮತ್ತು ಇತರ ಪರೀಕ್ಷೆಗಳಿಗೆ ರೋಗಿಯನ್ನು ಒಳಪಡಿಸಬೇಕು ಎಂದು ಮಾರ್ಗಸೂಚಿಗಳು ಹೇಳುತ್ತವೆ.

ಪರಿಷ್ಕೃತ ಮಾರ್ಗದರ್ಶನದ ಪ್ರಕಾರ, ಉಸಿರಾಟದ ತೊಂದರೆ ಅಥವಾ ಹೈಪೋಕ್ಸಿಯಾ ಇಲ್ಲದ ರೋಗಲಕ್ಷಣಗಳನ್ನು ಸೌಮ್ಯ ಕಾಯಿಲೆ ಎಂದು ವರ್ಗೀಕರಿಸಲಾಗಿದೆ. ಇವರಿಗೆ ಮನೆಯಲ್ಲಿ ಪ್ರತ್ಯೇಕವಾಗಿರಿಸಲು ಮತ್ತು ಅಲ್ಲಿಯೇ ಆರೈಕೆ ಮಾಡಲು ಸಲಹೆ ಮಾಡಲಾಗಿದೆ. ಕೋವಿಡ್‌ನ ಸೌಮ್ಯ ಲಕ್ಷಣಗಳಿಂದ ಬಳಲುತ್ತಿರುವವರು ಉಸಿರಾಟದ ತೊಂದರೆ, ತೀವ್ರತರವಾದ ಜ್ವರ ಅಥವಾ ಐದು ದಿನಗಳಿಗಿಂತ ಹೆಚ್ಚು ಕಾಲ ತೀವ್ರವಾದ ಕೆಮ್ಮನ್ನು ಹೊಂದಿದ್ದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು.

90 ರಿಂದ 93% ಏರಿಳಿತದ ಆಮ್ಲಜನಕದ ಸ್ಯಾಚುರೇಷನರ್‌ ಇದ್ದು, ಉಸಿರಾಟದ ತೊಂದರೆ ಇರುವವರನ್ನು ಮಧ್ಯಮ ಪ್ರಕರಣಗಳಾಗಿ ಪರಿಗಣಿಸಲಾಗುತ್ತದೆ. ಅಂತಹ ರೋಗಿಗಳಿಗೆ ಆಮ್ಲಜನಕ ಬೆಂಬಲವನ್ನು ನೀಡಬೇಕು.

ಇನ್ನು ಶೇಕಡಾ 90 ಕ್ಕಿಂತ ಕಡಿಮೆ ಆಮ್ಲಜನಕದ ಸ್ಯಾಚುರೇಷನರ್‌ ಇರುವವರನ್ನು ತೀವ್ರ ಕಾಯಿಲೆ ಎಂದು ಪರಿಗಣಿಸಿ,ಅವರನ್ನು ಐಸಿಯುಗೆ ಸೇರಿಸಬೇಕು ಎಂದು ಪರಿಷ್ಕೃತ ಮಾಗಸೂಚಿಗಳು ತಿಳಿಸಿವೆ.

ಕಳೆದ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೀತಿ ಆಯೋಗದ ಸದಸ್ಯ, (ಆರೋಗ್ಯ) ಮತ್ತು ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥರಾದ ಡಾ ವಿ.ಕೆ ಪಾಲ್, ಸ್ಟೀರಾಯ್ಡ್‌ಗಳಂತಹ ಔಷಧಗಳ ಅತಿಯಾದ ಬಳಕೆ ಮತ್ತು ದುರುಪಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...