Homeಕೊರೊನಾಕೊರೊನಾ ಚಿಕಿತ್ಸೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

ಕೊರೊನಾ ಚಿಕಿತ್ಸೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

- Advertisement -
- Advertisement -

ಕೊರೊನಾ ಸೋಂಕಿನಿಂದ ಬಳಲುತ್ತಿರುವ ರೋಗಿಗಳಿಗೆ ನೀಡುವ ಔಷಧ ಮತ್ತು ಚಿಕಿತ್ಸೆ ಬಗ್ಗೆ ಪರಿಷ್ಕೃತ ಕ್ಲಿನಿಕಲ್ ಮಾರ್ಗಸೂಚಿ ಬಿಡುಗಡೆ ಮಾಡಿರುವ ಆರೋಗ್ಯ ಸಚಿವಾಲಯ, ವೈದ್ಯರು ಚಿಕಿತ್ಸೆಗಾಗಿ ಸ್ಟಿರಾಯ್ಡ್‌ಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಹೇಳಿದೆ.

ಕೊರೊನಾ ಎರಡನೇ ಅಲೆಯ ಸಮಯದಲ್ಲಿ ಸ್ಟಿರಾಯ್ಡ್‌ಗಳ ಅತಿಯಾದ ಬಳಕೆಗೆ ಕೊರೊನಾ ಟಾಸ್ಕ್‌ ಫೋರ್ಸ್ ಮುಖ್ಯಸ್ಥರು ವಿಷಾದ ವ್ಯಕ್ತಪಡಿಸಿದ್ದರು. ಇದರ ಬೆನ್ನಲೆಯಲ್ಲೇ ಪರಿಷ್ಕೃತ ಮಾರ್ಗಸೂಚಿಗಳು ಬಂದಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ AIIMS, ICMR- ಕೋವಿಡ್ ರಾಷ್ಟ್ರೀಯ ಟಾಸ್ಕ್‌ ಫೋರ್ಸ್ ಮತ್ತು ಜಾಯಿಂಟ್ ಮಾನಿಟರಿಂಗ್ ಗ್ರೂಪ್ (DGHS) ಈ ಪರಿಷ್ಕೃತ ಕ್ಲಿನಿಕಲ್ ಮಾರ್ಗಸೂಚಿಗಳನ್ನು ನೀಡಿವೆ.

ಸ್ಟಿರಾಯ್ಡ್‌ಗಳಂತಹ ಔಷಧಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಅಥವಾ ಅಗತ್ಯಕ್ಕಿಂತ ಹೆಚ್ಚು ಕಾಲ ಬಳಸಿದಾಗ ಆಕ್ರಮಣಕಾರಿ ಮ್ಯೂಕಾರ್ಮೈಕೋಸಿಸ್ ಅಥವಾ ‘ಕಪ್ಪು ಶಿಲೀಂಧ್ರ’ ದಂತಹ ಸೆಕೆಂಡರಿ ಸೋಂಕಿನ ಅಪಾಯ ಉಂಟಾಗಬಹುದು ಎಂದು ಪರಿಷ್ಕೃತ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

ಎರಡು-ಮೂರು ವಾರಗಳಿಗಿಂತ ಹೆಚ್ಚು ಕಾಲ ಕೆಮ್ಮು ಮುಂದುವರಿದರೆ ಕಡ್ಡಾಯವಾಗಿ ಕ್ಷಯರೋಗ ಮತ್ತು ಇತರ ಪರೀಕ್ಷೆಗಳಿಗೆ ರೋಗಿಯನ್ನು ಒಳಪಡಿಸಬೇಕು ಎಂದು ಮಾರ್ಗಸೂಚಿಗಳು ಹೇಳುತ್ತವೆ.

ಪರಿಷ್ಕೃತ ಮಾರ್ಗದರ್ಶನದ ಪ್ರಕಾರ, ಉಸಿರಾಟದ ತೊಂದರೆ ಅಥವಾ ಹೈಪೋಕ್ಸಿಯಾ ಇಲ್ಲದ ರೋಗಲಕ್ಷಣಗಳನ್ನು ಸೌಮ್ಯ ಕಾಯಿಲೆ ಎಂದು ವರ್ಗೀಕರಿಸಲಾಗಿದೆ. ಇವರಿಗೆ ಮನೆಯಲ್ಲಿ ಪ್ರತ್ಯೇಕವಾಗಿರಿಸಲು ಮತ್ತು ಅಲ್ಲಿಯೇ ಆರೈಕೆ ಮಾಡಲು ಸಲಹೆ ಮಾಡಲಾಗಿದೆ. ಕೋವಿಡ್‌ನ ಸೌಮ್ಯ ಲಕ್ಷಣಗಳಿಂದ ಬಳಲುತ್ತಿರುವವರು ಉಸಿರಾಟದ ತೊಂದರೆ, ತೀವ್ರತರವಾದ ಜ್ವರ ಅಥವಾ ಐದು ದಿನಗಳಿಗಿಂತ ಹೆಚ್ಚು ಕಾಲ ತೀವ್ರವಾದ ಕೆಮ್ಮನ್ನು ಹೊಂದಿದ್ದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು.

90 ರಿಂದ 93% ಏರಿಳಿತದ ಆಮ್ಲಜನಕದ ಸ್ಯಾಚುರೇಷನರ್‌ ಇದ್ದು, ಉಸಿರಾಟದ ತೊಂದರೆ ಇರುವವರನ್ನು ಮಧ್ಯಮ ಪ್ರಕರಣಗಳಾಗಿ ಪರಿಗಣಿಸಲಾಗುತ್ತದೆ. ಅಂತಹ ರೋಗಿಗಳಿಗೆ ಆಮ್ಲಜನಕ ಬೆಂಬಲವನ್ನು ನೀಡಬೇಕು.

ಇನ್ನು ಶೇಕಡಾ 90 ಕ್ಕಿಂತ ಕಡಿಮೆ ಆಮ್ಲಜನಕದ ಸ್ಯಾಚುರೇಷನರ್‌ ಇರುವವರನ್ನು ತೀವ್ರ ಕಾಯಿಲೆ ಎಂದು ಪರಿಗಣಿಸಿ,ಅವರನ್ನು ಐಸಿಯುಗೆ ಸೇರಿಸಬೇಕು ಎಂದು ಪರಿಷ್ಕೃತ ಮಾಗಸೂಚಿಗಳು ತಿಳಿಸಿವೆ.

ಕಳೆದ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೀತಿ ಆಯೋಗದ ಸದಸ್ಯ, (ಆರೋಗ್ಯ) ಮತ್ತು ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥರಾದ ಡಾ ವಿ.ಕೆ ಪಾಲ್, ಸ್ಟೀರಾಯ್ಡ್‌ಗಳಂತಹ ಔಷಧಗಳ ಅತಿಯಾದ ಬಳಕೆ ಮತ್ತು ದುರುಪಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...