Homeಕರೋನಾ ತಲ್ಲಣಕೊರೊನಾ: ಬೆಂಗಳೂರು ವಿವಿ 15 ದಿನ ರಜೆ; ಸಾರಿಗೆ ಮುಷ್ಕರ ಹಿನ್ನಲೆ ಪರೀಕ್ಷೆ ಮುಂದೂಡಿಕೆ

ಕೊರೊನಾ: ಬೆಂಗಳೂರು ವಿವಿ 15 ದಿನ ರಜೆ; ಸಾರಿಗೆ ಮುಷ್ಕರ ಹಿನ್ನಲೆ ಪರೀಕ್ಷೆ ಮುಂದೂಡಿಕೆ

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಕೂಡಾ ಎಪ್ರಿಲ್ 7 ರಂದು ಜರುಗಬೇಕಾಗಿದ್ದ ಪರೀಕ್ಷೆಗಳನ್ನು ಮುಂದೂಡಿದೆ.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯ (ಜ್ಞಾನಭಾರತಿ)ವು 15 ದಿನಗಳ ಕಾಲ ರಜೆ ಘೋಷಣೆ ಮಾಡಿದೆ. ಈ ರಜೆಯು ಯುಜಿ ಮತ್ತು ಪಿಜಿ ಕಾಲೇಜುಗಳಿಗೂ ಅನ್ವಯವಾಗತ್ತದೆ ಎಂದು ವಿಶ್ವವಿದ್ಯಾಲಯ ರಿಜಿಸ್ಟ್ರಾರ್‌ ಜ್ಯೋತಿ ಅವರು ಮಂಗಳವಾರ ಹೇಳಿದ್ದಾರೆ.

ಏಪ್ರಿಲ್ 20 ರವರೆಗೂ ವಿಶ್ವ ವಿದ್ಯಾಲಯವು ರಜೆ ಘೋಷಿಸಿದ್ದು ಭೌತಿಕ ತರಗತಿಗಳು, ಹಾಸ್ಟೆಲ್ ಬಂದ್ ಆಗಿರಲಿದೆ. ಬಾಕಿ ಉಳಿದ ತರಗತಿಗಳನ್ನು ಆನ್‌ಲೈನ್ ಮೂಲಕ ಪಾಠ ಮಾಡುವಂತೆ ವಿವಿ ಸೂಚನೆ ನೀಡಿದೆ. ಆದರೆ ಪ್ರಾಯೋಗಿಕ ತರಗತಿಗಳು ಎಂದಿನಂತೆ ನಡೆಯಲಿದ್ದು, ನಿಗದಿಯಾಗಿದ್ದ ಪರೀಕ್ಷೆಗಳು ಕೂಡಾ ನಡೆಯಲಿವೆ.

ಆದರೆ ನಾಳೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬಿಎ, ಬಿಎಸ್ಸಿ ಐದನೇ ಸೆಮಿಸ್ಟರ್‌, ದೂರ ಶಿಕ್ಷಣ ಪರೀಕ್ಷಗಳು, ಸ್ನಾತಕೋತ್ತರ ಡಿಪ್ಲೊಮೊ-ಗ್ರಾಮೀಣ ಅಭಿವೃದ್ದಿ ಪರೀಕ್ಷೆಯನ್ನು ಮಾತ್ರ ವಿವಿ ಮುಂದೂಡಿದೆ.

ಇಷ್ಟೇ ಅಲ್ಲದೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಎಪ್ರಿಲ್ 7 ರಂದು ಜರುಗಬೇಕಾಗಿದ್ದ ಎಲ್ಲ ಪರೀಕ್ಷೆಗಳನ್ನು ವಿಶ್ವವಿದ್ಯಾನಿಲಯವು ಮುಂದೂಡಿದೆ. ಬಸ್ ವ್ಯತ್ಯಯದ ಕುರಿತು ವಿದ್ಯಾರ್ಥಿಗಳ ಮನವಿ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ.

ಇದನ್ನೂ ಓದಿ: ಟಿಎಂಸಿ ಮಹಿಳಾ ಅಭ್ಯರ್ಥಿಯನ್ನು ಅಟ್ಟಿಸಿಕೊಂಡು ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರು

ರಜೆಯು ಏಪ್ರಿಲ್ 20 ರವರೆಗೂ ಇರಲಿದ್ದು, ಈ ಸಮಯದಲ್ಲಿ ಭೌತಿಕ ತರಗತಿಗಳು, ಹಾಸ್ಟೆಲ್‌ಗಳು ಮುಚ್ಚಲ್ಪಟ್ಟಿರುತ್ತವೆ. ಬಾಕಿ ಉಳಿದ ತರಗತಿಗಳನ್ನು ಆನ್‌‌ಲೈನ್ ಮೂಲಕ ಪಾಠ ಮಾಡುವಂತೆ ಸೂಚನೆ ನೀಡಲಾಗಿದೆ. ಆದರೆ ಪ್ರಾಯೋಗಿಕ ತರಗತಿಗಳು ಎಂದಿನಂತೆ ನಡೆಯಲಿದ್ದು, ಜೊತೆಗೆ ಮುಷ್ಕರ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟ ನಾಳಿನ ಒಂದು ದಿನದ ಪರೀಕ್ಷೆಗಳನ್ನು ಬಿಟ್ಟು ಉಳಿದಂತೆ ನಿಗದಿಯಾಗಿರುವ ಎಲ್ಲಾ ಪರೀಕ್ಷೆಗಳು ಕೂಡಾ ನಡೆಯಲಿವೆ.

ಬುಧವಾರ (ಏಪ್ರಿಲ್ 07) ಸಾರಿಗೆ ನೌಕರರು ಮುಷ್ಕರ ಹೂಡಲು ಸಜ್ಜಾಗಿದ್ದು, ರಾಜ್ಯ ಸರ್ಕಾರದ ವಿರುದ್ದ ಸಂಘರ್ಷಕ್ಕೆ ಮುಂದಾಗಿದ್ದಾರೆ. ಆದರೆ ಸರ್ಕಾರ ಮಾತ್ರ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ನೌಕರರು ಮುಷ್ಕರ ನಡೆಸಿದರೆ ಸರ್ಕಾರ ‘ಎಸ್ಮಾ’ ಜಾರಿಗೆ ಮುಂದಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಎಷ್ಟು ದಲಿತರನ್ನು ಸಿಎಂ ಮಾಡಿದೆ, ಎಷ್ಟು ದಲಿತ ಮಂತ್ರಿಗಳನ್ನು ಹೊಂದಿದೆ? ಕಾಂಗ್ರೆಸ್ ಪ್ರಶ್ನೆ

ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರು ಪ್ರಮುಖವಾಗಿ, ‘ಆರನೇ ವೇತನ ಆಯೋಗದ ವರದಿ’ ಜಾರಿಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರವು ಆರನೇ ವೇತನ ಜಾರಿ ಬದಲು ಸಾರಿಗೆ ನೌಕರರಿಗೆ 8% ರಷ್ಟು ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಆದರೆ ಇದನ್ನು ನೌಕರರು ನಿರಾಕರಿಸಿದ್ದು, “ತಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ಆರನೇ ವೇತನ ಆಯೋಗ ಜಾರಿಯೇ ಆಗಬೇಕು. ಅದಕ್ಕಾಗಿ ಬುಧವಾರ ಮುಷ್ಕರ ನಡೆಸಿಯೇ ತೀರುತ್ತೇವೆ” ಎಂದು ಹೇಳಿದ್ದಾರೆ.

ನೌಕರರ ಮುಷ್ಕರ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಇದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ಇಲಾಖೆ ಎಸಿಎಸ್ ಅಂಜುಮ್ ಪರ್ವೇಜ್, KSRTC ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ ಸೇರಿ ಹಲವರು ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನೌಕರರು ಮುಷ್ಕರ ಹೂಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ವೇತನ ಹೆಚ್ಚಳದ ಭರವಸೆಗಳನ್ನು ನೀಡಿದರೂ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿಚಾರದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಭೆಯಲ್ಲಿ ಸೂಚಿಸಿದರೆಂಬ ಮಾಹಿತಿಯಿದೆ.

ಇದನ್ನೂ ಓದಿ: ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ಸಾರಿಗೆ ನೌಕರರ ಮುಷ್ಕರದ ಬಗ್ಗೆ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದೇನು? ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...