Homeಕರೋನಾ ತಲ್ಲಣಕೊರೊನಾ: ಬೆಂಗಳೂರು ವಿವಿ 15 ದಿನ ರಜೆ; ಸಾರಿಗೆ ಮುಷ್ಕರ ಹಿನ್ನಲೆ ಪರೀಕ್ಷೆ ಮುಂದೂಡಿಕೆ

ಕೊರೊನಾ: ಬೆಂಗಳೂರು ವಿವಿ 15 ದಿನ ರಜೆ; ಸಾರಿಗೆ ಮುಷ್ಕರ ಹಿನ್ನಲೆ ಪರೀಕ್ಷೆ ಮುಂದೂಡಿಕೆ

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಕೂಡಾ ಎಪ್ರಿಲ್ 7 ರಂದು ಜರುಗಬೇಕಾಗಿದ್ದ ಪರೀಕ್ಷೆಗಳನ್ನು ಮುಂದೂಡಿದೆ.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯ (ಜ್ಞಾನಭಾರತಿ)ವು 15 ದಿನಗಳ ಕಾಲ ರಜೆ ಘೋಷಣೆ ಮಾಡಿದೆ. ಈ ರಜೆಯು ಯುಜಿ ಮತ್ತು ಪಿಜಿ ಕಾಲೇಜುಗಳಿಗೂ ಅನ್ವಯವಾಗತ್ತದೆ ಎಂದು ವಿಶ್ವವಿದ್ಯಾಲಯ ರಿಜಿಸ್ಟ್ರಾರ್‌ ಜ್ಯೋತಿ ಅವರು ಮಂಗಳವಾರ ಹೇಳಿದ್ದಾರೆ.

ಏಪ್ರಿಲ್ 20 ರವರೆಗೂ ವಿಶ್ವ ವಿದ್ಯಾಲಯವು ರಜೆ ಘೋಷಿಸಿದ್ದು ಭೌತಿಕ ತರಗತಿಗಳು, ಹಾಸ್ಟೆಲ್ ಬಂದ್ ಆಗಿರಲಿದೆ. ಬಾಕಿ ಉಳಿದ ತರಗತಿಗಳನ್ನು ಆನ್‌ಲೈನ್ ಮೂಲಕ ಪಾಠ ಮಾಡುವಂತೆ ವಿವಿ ಸೂಚನೆ ನೀಡಿದೆ. ಆದರೆ ಪ್ರಾಯೋಗಿಕ ತರಗತಿಗಳು ಎಂದಿನಂತೆ ನಡೆಯಲಿದ್ದು, ನಿಗದಿಯಾಗಿದ್ದ ಪರೀಕ್ಷೆಗಳು ಕೂಡಾ ನಡೆಯಲಿವೆ.

ಆದರೆ ನಾಳೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬಿಎ, ಬಿಎಸ್ಸಿ ಐದನೇ ಸೆಮಿಸ್ಟರ್‌, ದೂರ ಶಿಕ್ಷಣ ಪರೀಕ್ಷಗಳು, ಸ್ನಾತಕೋತ್ತರ ಡಿಪ್ಲೊಮೊ-ಗ್ರಾಮೀಣ ಅಭಿವೃದ್ದಿ ಪರೀಕ್ಷೆಯನ್ನು ಮಾತ್ರ ವಿವಿ ಮುಂದೂಡಿದೆ.

ಇಷ್ಟೇ ಅಲ್ಲದೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಎಪ್ರಿಲ್ 7 ರಂದು ಜರುಗಬೇಕಾಗಿದ್ದ ಎಲ್ಲ ಪರೀಕ್ಷೆಗಳನ್ನು ವಿಶ್ವವಿದ್ಯಾನಿಲಯವು ಮುಂದೂಡಿದೆ. ಬಸ್ ವ್ಯತ್ಯಯದ ಕುರಿತು ವಿದ್ಯಾರ್ಥಿಗಳ ಮನವಿ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ.

ಇದನ್ನೂ ಓದಿ: ಟಿಎಂಸಿ ಮಹಿಳಾ ಅಭ್ಯರ್ಥಿಯನ್ನು ಅಟ್ಟಿಸಿಕೊಂಡು ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರು

ರಜೆಯು ಏಪ್ರಿಲ್ 20 ರವರೆಗೂ ಇರಲಿದ್ದು, ಈ ಸಮಯದಲ್ಲಿ ಭೌತಿಕ ತರಗತಿಗಳು, ಹಾಸ್ಟೆಲ್‌ಗಳು ಮುಚ್ಚಲ್ಪಟ್ಟಿರುತ್ತವೆ. ಬಾಕಿ ಉಳಿದ ತರಗತಿಗಳನ್ನು ಆನ್‌‌ಲೈನ್ ಮೂಲಕ ಪಾಠ ಮಾಡುವಂತೆ ಸೂಚನೆ ನೀಡಲಾಗಿದೆ. ಆದರೆ ಪ್ರಾಯೋಗಿಕ ತರಗತಿಗಳು ಎಂದಿನಂತೆ ನಡೆಯಲಿದ್ದು, ಜೊತೆಗೆ ಮುಷ್ಕರ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟ ನಾಳಿನ ಒಂದು ದಿನದ ಪರೀಕ್ಷೆಗಳನ್ನು ಬಿಟ್ಟು ಉಳಿದಂತೆ ನಿಗದಿಯಾಗಿರುವ ಎಲ್ಲಾ ಪರೀಕ್ಷೆಗಳು ಕೂಡಾ ನಡೆಯಲಿವೆ.

ಬುಧವಾರ (ಏಪ್ರಿಲ್ 07) ಸಾರಿಗೆ ನೌಕರರು ಮುಷ್ಕರ ಹೂಡಲು ಸಜ್ಜಾಗಿದ್ದು, ರಾಜ್ಯ ಸರ್ಕಾರದ ವಿರುದ್ದ ಸಂಘರ್ಷಕ್ಕೆ ಮುಂದಾಗಿದ್ದಾರೆ. ಆದರೆ ಸರ್ಕಾರ ಮಾತ್ರ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ನೌಕರರು ಮುಷ್ಕರ ನಡೆಸಿದರೆ ಸರ್ಕಾರ ‘ಎಸ್ಮಾ’ ಜಾರಿಗೆ ಮುಂದಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಎಷ್ಟು ದಲಿತರನ್ನು ಸಿಎಂ ಮಾಡಿದೆ, ಎಷ್ಟು ದಲಿತ ಮಂತ್ರಿಗಳನ್ನು ಹೊಂದಿದೆ? ಕಾಂಗ್ರೆಸ್ ಪ್ರಶ್ನೆ

ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರು ಪ್ರಮುಖವಾಗಿ, ‘ಆರನೇ ವೇತನ ಆಯೋಗದ ವರದಿ’ ಜಾರಿಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರವು ಆರನೇ ವೇತನ ಜಾರಿ ಬದಲು ಸಾರಿಗೆ ನೌಕರರಿಗೆ 8% ರಷ್ಟು ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಆದರೆ ಇದನ್ನು ನೌಕರರು ನಿರಾಕರಿಸಿದ್ದು, “ತಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ಆರನೇ ವೇತನ ಆಯೋಗ ಜಾರಿಯೇ ಆಗಬೇಕು. ಅದಕ್ಕಾಗಿ ಬುಧವಾರ ಮುಷ್ಕರ ನಡೆಸಿಯೇ ತೀರುತ್ತೇವೆ” ಎಂದು ಹೇಳಿದ್ದಾರೆ.

ನೌಕರರ ಮುಷ್ಕರ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಇದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ಇಲಾಖೆ ಎಸಿಎಸ್ ಅಂಜುಮ್ ಪರ್ವೇಜ್, KSRTC ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ ಸೇರಿ ಹಲವರು ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನೌಕರರು ಮುಷ್ಕರ ಹೂಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ವೇತನ ಹೆಚ್ಚಳದ ಭರವಸೆಗಳನ್ನು ನೀಡಿದರೂ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿಚಾರದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಭೆಯಲ್ಲಿ ಸೂಚಿಸಿದರೆಂಬ ಮಾಹಿತಿಯಿದೆ.

ಇದನ್ನೂ ಓದಿ: ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ಸಾರಿಗೆ ನೌಕರರ ಮುಷ್ಕರದ ಬಗ್ಗೆ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದೇನು? ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...