Homeಕರೋನಾ ತಲ್ಲಣಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ 46 ವರ್ಷದ ಸರ್ಕಾರಿ ಆಸ್ಪತ್ರೆಯ ಉದ್ಯೋಗಿಯೊಬ್ಬರು ಭಾನುವಾರ ಸಂಜೆ ಕೊರೊನಾ ಲಸಿಕೆ ಪಡೆದ 24 ಗಂಟೆಗಳ ನಂತರ ನಿಧನರಾಗಿದ್ದಾರೆ. ಆದರೆ ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ.

ಮೃತಪಟ್ಟವರನ್ನು ಆಸ್ಪತ್ರೆಯಲ್ಲಿ ವಾರ್ಡ್‌ ಬಾಯ್ ಆಗಿದ್ದ ಮಹಿಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ನಿಧನರಾಗುವುದಕ್ಕಿಂತ ಮುಂಚೆ ಅವರು ಎದೆ ನೋವು ಮತ್ತು ಉಸಿರಾಟದ ತೊಂದರೆಗಳ ಬಗ್ಗೆ ಹೇಳಿದ್ದರು ಎನ್ನಲಾಗಿದೆ. ಲಸಿಕೆ ಚುಚ್ಚುವುದಕ್ಕಿಂತ ಮೊದಲೆ ಅವರು ಅಸ್ವಸ್ಥರಾಗಿದ್ದರು ಎಂದು ಅವರ ಕುಟುಂಬ ಹೇಳಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

“ಅವರಿಗೆ ಶನಿವಾರ ಮಧ್ಯಾಹ್ನ ಲಸಿಕೆ ನೀಡಲಾಯಿತು. ಭಾನುವಾರ ಉಸಿರಾಟದ ತೊಂದರೆ ಮತ್ತು ಎದೆ ನೋವಿನ ಬಗ್ಗೆ ಹೇಳಿದ್ದರು. ಮರಣೋತ್ತರ ಪರೀಕ್ಷೆ ನಡೆಯಲಿದೆ, ಸಾವಿಗೆ ಕಾರಣಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ಇದು ವ್ಯಾಕ್ಸಿನೇಷನ್‌‌‌ನ ಪ್ರತಿಕೂಲ ಪರಿಣಾಮದಂತೆ ಕಾಣುತ್ತಿಲ್ಲ. ಅವರು ಶನಿವಾರ ರಾತ್ರಿ ಕೂಡಾ ಆಸ್ಪತ್ರೆಯಲ್ಲಿ ಡ್ಯೂಟಿ ಮಾಡಿದ್ದರು, ಆಗ ಯಾವುದೆ ಸಮಸ್ಯೆಗಳಿರಲಿಲ್ಲ” ಎಂದು ಮೊರಾದಾಬಾದ್‌ನ ಮುಖ್ಯ ವೈದ್ಯಕೀಯ ಅಧಿಕಾರಿ ಎಂ.ಸಿ.ಗಾರ್ಗ್ ಕಳೆದ ರಾತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಾವಿಗೆ ತಕ್ಷಣದ ಕಾರಣ ಹೃದಯ-ಶ್ವಾಸಕೋಶದ ಕಾಯಿಲೆ. ಅದರಿಂದಾಗಿ ”ಹೃದಯ ಆಘಾತ / ಸೆಪ್ಟಿಸೆಮಿಕ್ ಆಘಾತ” ಆಗಿದೆ ಎಂದು ಮರಣೋತ್ತರ ವರದಿಯು ಬಹಿರಂಗಪಡಿಸಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಮೂಲಗಳು ತಿಳಿಸಿವೆ.

“ನನ್ನ ತಂದೆಯನ್ನು ಮಧ್ಯಾಹ್ನ 1.30 ರ ಸುಮಾರಿಗೆ ವ್ಯಾಕ್ಸಿನೇಷನ್ ಕೇಂದ್ರದಿಂದ ನಾನು ಮನೆಗೆ ಕರೆತಂದೆ. ಅವರಿಗೆ ಉಸಿರುಗಟ್ಟುತ್ತಿದ್ದರು ಮತ್ತು ಕೆಮ್ಮುತ್ತಿದ್ದರು. ಅಲ್ಲದೆ ಅವರು ಸ್ವಲ್ಪ ನ್ಯುಮೋನಿಯಾ, ಸಾಮಾನ್ಯ ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದರು, ಆದರೆ ಮನೆಗೆ ಹಿಂದಿರುಗಿದ ನಂತರ ಇದು ಜಾಸ್ತಿಯಾಯಿತು” ಎಂದು ಮಹಿಪಾಲ್ ಸಿಂಗ್ ಮಗ ವಿಶಾಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಭಾರತದ ಕೊರೊನಾ ವ್ಯಾಕ್ಸಿನೇಷನ್‌ನ ಮೊದಲ ದಿನವಾದ ಶನಿವಾರದಂದು ಉತ್ತರ ಪ್ರದೇಶದಲ್ಲಿ 22,643 ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...