Homeಕರೋನಾ ತಲ್ಲಣಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ 46 ವರ್ಷದ ಸರ್ಕಾರಿ ಆಸ್ಪತ್ರೆಯ ಉದ್ಯೋಗಿಯೊಬ್ಬರು ಭಾನುವಾರ ಸಂಜೆ ಕೊರೊನಾ ಲಸಿಕೆ ಪಡೆದ 24 ಗಂಟೆಗಳ ನಂತರ ನಿಧನರಾಗಿದ್ದಾರೆ. ಆದರೆ ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ.

ಮೃತಪಟ್ಟವರನ್ನು ಆಸ್ಪತ್ರೆಯಲ್ಲಿ ವಾರ್ಡ್‌ ಬಾಯ್ ಆಗಿದ್ದ ಮಹಿಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ನಿಧನರಾಗುವುದಕ್ಕಿಂತ ಮುಂಚೆ ಅವರು ಎದೆ ನೋವು ಮತ್ತು ಉಸಿರಾಟದ ತೊಂದರೆಗಳ ಬಗ್ಗೆ ಹೇಳಿದ್ದರು ಎನ್ನಲಾಗಿದೆ. ಲಸಿಕೆ ಚುಚ್ಚುವುದಕ್ಕಿಂತ ಮೊದಲೆ ಅವರು ಅಸ್ವಸ್ಥರಾಗಿದ್ದರು ಎಂದು ಅವರ ಕುಟುಂಬ ಹೇಳಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

“ಅವರಿಗೆ ಶನಿವಾರ ಮಧ್ಯಾಹ್ನ ಲಸಿಕೆ ನೀಡಲಾಯಿತು. ಭಾನುವಾರ ಉಸಿರಾಟದ ತೊಂದರೆ ಮತ್ತು ಎದೆ ನೋವಿನ ಬಗ್ಗೆ ಹೇಳಿದ್ದರು. ಮರಣೋತ್ತರ ಪರೀಕ್ಷೆ ನಡೆಯಲಿದೆ, ಸಾವಿಗೆ ಕಾರಣಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ಇದು ವ್ಯಾಕ್ಸಿನೇಷನ್‌‌‌ನ ಪ್ರತಿಕೂಲ ಪರಿಣಾಮದಂತೆ ಕಾಣುತ್ತಿಲ್ಲ. ಅವರು ಶನಿವಾರ ರಾತ್ರಿ ಕೂಡಾ ಆಸ್ಪತ್ರೆಯಲ್ಲಿ ಡ್ಯೂಟಿ ಮಾಡಿದ್ದರು, ಆಗ ಯಾವುದೆ ಸಮಸ್ಯೆಗಳಿರಲಿಲ್ಲ” ಎಂದು ಮೊರಾದಾಬಾದ್‌ನ ಮುಖ್ಯ ವೈದ್ಯಕೀಯ ಅಧಿಕಾರಿ ಎಂ.ಸಿ.ಗಾರ್ಗ್ ಕಳೆದ ರಾತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಾವಿಗೆ ತಕ್ಷಣದ ಕಾರಣ ಹೃದಯ-ಶ್ವಾಸಕೋಶದ ಕಾಯಿಲೆ. ಅದರಿಂದಾಗಿ ”ಹೃದಯ ಆಘಾತ / ಸೆಪ್ಟಿಸೆಮಿಕ್ ಆಘಾತ” ಆಗಿದೆ ಎಂದು ಮರಣೋತ್ತರ ವರದಿಯು ಬಹಿರಂಗಪಡಿಸಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಮೂಲಗಳು ತಿಳಿಸಿವೆ.

“ನನ್ನ ತಂದೆಯನ್ನು ಮಧ್ಯಾಹ್ನ 1.30 ರ ಸುಮಾರಿಗೆ ವ್ಯಾಕ್ಸಿನೇಷನ್ ಕೇಂದ್ರದಿಂದ ನಾನು ಮನೆಗೆ ಕರೆತಂದೆ. ಅವರಿಗೆ ಉಸಿರುಗಟ್ಟುತ್ತಿದ್ದರು ಮತ್ತು ಕೆಮ್ಮುತ್ತಿದ್ದರು. ಅಲ್ಲದೆ ಅವರು ಸ್ವಲ್ಪ ನ್ಯುಮೋನಿಯಾ, ಸಾಮಾನ್ಯ ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದರು, ಆದರೆ ಮನೆಗೆ ಹಿಂದಿರುಗಿದ ನಂತರ ಇದು ಜಾಸ್ತಿಯಾಯಿತು” ಎಂದು ಮಹಿಪಾಲ್ ಸಿಂಗ್ ಮಗ ವಿಶಾಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಭಾರತದ ಕೊರೊನಾ ವ್ಯಾಕ್ಸಿನೇಷನ್‌ನ ಮೊದಲ ದಿನವಾದ ಶನಿವಾರದಂದು ಉತ್ತರ ಪ್ರದೇಶದಲ್ಲಿ 22,643 ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...