Homeಕರೋನಾ ತಲ್ಲಣಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ 46 ವರ್ಷದ ಸರ್ಕಾರಿ ಆಸ್ಪತ್ರೆಯ ಉದ್ಯೋಗಿಯೊಬ್ಬರು ಭಾನುವಾರ ಸಂಜೆ ಕೊರೊನಾ ಲಸಿಕೆ ಪಡೆದ 24 ಗಂಟೆಗಳ ನಂತರ ನಿಧನರಾಗಿದ್ದಾರೆ. ಆದರೆ ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ.

ಮೃತಪಟ್ಟವರನ್ನು ಆಸ್ಪತ್ರೆಯಲ್ಲಿ ವಾರ್ಡ್‌ ಬಾಯ್ ಆಗಿದ್ದ ಮಹಿಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ನಿಧನರಾಗುವುದಕ್ಕಿಂತ ಮುಂಚೆ ಅವರು ಎದೆ ನೋವು ಮತ್ತು ಉಸಿರಾಟದ ತೊಂದರೆಗಳ ಬಗ್ಗೆ ಹೇಳಿದ್ದರು ಎನ್ನಲಾಗಿದೆ. ಲಸಿಕೆ ಚುಚ್ಚುವುದಕ್ಕಿಂತ ಮೊದಲೆ ಅವರು ಅಸ್ವಸ್ಥರಾಗಿದ್ದರು ಎಂದು ಅವರ ಕುಟುಂಬ ಹೇಳಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

“ಅವರಿಗೆ ಶನಿವಾರ ಮಧ್ಯಾಹ್ನ ಲಸಿಕೆ ನೀಡಲಾಯಿತು. ಭಾನುವಾರ ಉಸಿರಾಟದ ತೊಂದರೆ ಮತ್ತು ಎದೆ ನೋವಿನ ಬಗ್ಗೆ ಹೇಳಿದ್ದರು. ಮರಣೋತ್ತರ ಪರೀಕ್ಷೆ ನಡೆಯಲಿದೆ, ಸಾವಿಗೆ ಕಾರಣಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ಇದು ವ್ಯಾಕ್ಸಿನೇಷನ್‌‌‌ನ ಪ್ರತಿಕೂಲ ಪರಿಣಾಮದಂತೆ ಕಾಣುತ್ತಿಲ್ಲ. ಅವರು ಶನಿವಾರ ರಾತ್ರಿ ಕೂಡಾ ಆಸ್ಪತ್ರೆಯಲ್ಲಿ ಡ್ಯೂಟಿ ಮಾಡಿದ್ದರು, ಆಗ ಯಾವುದೆ ಸಮಸ್ಯೆಗಳಿರಲಿಲ್ಲ” ಎಂದು ಮೊರಾದಾಬಾದ್‌ನ ಮುಖ್ಯ ವೈದ್ಯಕೀಯ ಅಧಿಕಾರಿ ಎಂ.ಸಿ.ಗಾರ್ಗ್ ಕಳೆದ ರಾತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಾವಿಗೆ ತಕ್ಷಣದ ಕಾರಣ ಹೃದಯ-ಶ್ವಾಸಕೋಶದ ಕಾಯಿಲೆ. ಅದರಿಂದಾಗಿ ”ಹೃದಯ ಆಘಾತ / ಸೆಪ್ಟಿಸೆಮಿಕ್ ಆಘಾತ” ಆಗಿದೆ ಎಂದು ಮರಣೋತ್ತರ ವರದಿಯು ಬಹಿರಂಗಪಡಿಸಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಮೂಲಗಳು ತಿಳಿಸಿವೆ.

“ನನ್ನ ತಂದೆಯನ್ನು ಮಧ್ಯಾಹ್ನ 1.30 ರ ಸುಮಾರಿಗೆ ವ್ಯಾಕ್ಸಿನೇಷನ್ ಕೇಂದ್ರದಿಂದ ನಾನು ಮನೆಗೆ ಕರೆತಂದೆ. ಅವರಿಗೆ ಉಸಿರುಗಟ್ಟುತ್ತಿದ್ದರು ಮತ್ತು ಕೆಮ್ಮುತ್ತಿದ್ದರು. ಅಲ್ಲದೆ ಅವರು ಸ್ವಲ್ಪ ನ್ಯುಮೋನಿಯಾ, ಸಾಮಾನ್ಯ ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದರು, ಆದರೆ ಮನೆಗೆ ಹಿಂದಿರುಗಿದ ನಂತರ ಇದು ಜಾಸ್ತಿಯಾಯಿತು” ಎಂದು ಮಹಿಪಾಲ್ ಸಿಂಗ್ ಮಗ ವಿಶಾಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಭಾರತದ ಕೊರೊನಾ ವ್ಯಾಕ್ಸಿನೇಷನ್‌ನ ಮೊದಲ ದಿನವಾದ ಶನಿವಾರದಂದು ಉತ್ತರ ಪ್ರದೇಶದಲ್ಲಿ 22,643 ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...