Homeಕರೋನಾ ತಲ್ಲಣಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ 46 ವರ್ಷದ ಸರ್ಕಾರಿ ಆಸ್ಪತ್ರೆಯ ಉದ್ಯೋಗಿಯೊಬ್ಬರು ಭಾನುವಾರ ಸಂಜೆ ಕೊರೊನಾ ಲಸಿಕೆ ಪಡೆದ 24 ಗಂಟೆಗಳ ನಂತರ ನಿಧನರಾಗಿದ್ದಾರೆ. ಆದರೆ ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ.

ಮೃತಪಟ್ಟವರನ್ನು ಆಸ್ಪತ್ರೆಯಲ್ಲಿ ವಾರ್ಡ್‌ ಬಾಯ್ ಆಗಿದ್ದ ಮಹಿಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ನಿಧನರಾಗುವುದಕ್ಕಿಂತ ಮುಂಚೆ ಅವರು ಎದೆ ನೋವು ಮತ್ತು ಉಸಿರಾಟದ ತೊಂದರೆಗಳ ಬಗ್ಗೆ ಹೇಳಿದ್ದರು ಎನ್ನಲಾಗಿದೆ. ಲಸಿಕೆ ಚುಚ್ಚುವುದಕ್ಕಿಂತ ಮೊದಲೆ ಅವರು ಅಸ್ವಸ್ಥರಾಗಿದ್ದರು ಎಂದು ಅವರ ಕುಟುಂಬ ಹೇಳಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

“ಅವರಿಗೆ ಶನಿವಾರ ಮಧ್ಯಾಹ್ನ ಲಸಿಕೆ ನೀಡಲಾಯಿತು. ಭಾನುವಾರ ಉಸಿರಾಟದ ತೊಂದರೆ ಮತ್ತು ಎದೆ ನೋವಿನ ಬಗ್ಗೆ ಹೇಳಿದ್ದರು. ಮರಣೋತ್ತರ ಪರೀಕ್ಷೆ ನಡೆಯಲಿದೆ, ಸಾವಿಗೆ ಕಾರಣಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ಇದು ವ್ಯಾಕ್ಸಿನೇಷನ್‌‌‌ನ ಪ್ರತಿಕೂಲ ಪರಿಣಾಮದಂತೆ ಕಾಣುತ್ತಿಲ್ಲ. ಅವರು ಶನಿವಾರ ರಾತ್ರಿ ಕೂಡಾ ಆಸ್ಪತ್ರೆಯಲ್ಲಿ ಡ್ಯೂಟಿ ಮಾಡಿದ್ದರು, ಆಗ ಯಾವುದೆ ಸಮಸ್ಯೆಗಳಿರಲಿಲ್ಲ” ಎಂದು ಮೊರಾದಾಬಾದ್‌ನ ಮುಖ್ಯ ವೈದ್ಯಕೀಯ ಅಧಿಕಾರಿ ಎಂ.ಸಿ.ಗಾರ್ಗ್ ಕಳೆದ ರಾತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಾವಿಗೆ ತಕ್ಷಣದ ಕಾರಣ ಹೃದಯ-ಶ್ವಾಸಕೋಶದ ಕಾಯಿಲೆ. ಅದರಿಂದಾಗಿ ”ಹೃದಯ ಆಘಾತ / ಸೆಪ್ಟಿಸೆಮಿಕ್ ಆಘಾತ” ಆಗಿದೆ ಎಂದು ಮರಣೋತ್ತರ ವರದಿಯು ಬಹಿರಂಗಪಡಿಸಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಮೂಲಗಳು ತಿಳಿಸಿವೆ.

“ನನ್ನ ತಂದೆಯನ್ನು ಮಧ್ಯಾಹ್ನ 1.30 ರ ಸುಮಾರಿಗೆ ವ್ಯಾಕ್ಸಿನೇಷನ್ ಕೇಂದ್ರದಿಂದ ನಾನು ಮನೆಗೆ ಕರೆತಂದೆ. ಅವರಿಗೆ ಉಸಿರುಗಟ್ಟುತ್ತಿದ್ದರು ಮತ್ತು ಕೆಮ್ಮುತ್ತಿದ್ದರು. ಅಲ್ಲದೆ ಅವರು ಸ್ವಲ್ಪ ನ್ಯುಮೋನಿಯಾ, ಸಾಮಾನ್ಯ ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದರು, ಆದರೆ ಮನೆಗೆ ಹಿಂದಿರುಗಿದ ನಂತರ ಇದು ಜಾಸ್ತಿಯಾಯಿತು” ಎಂದು ಮಹಿಪಾಲ್ ಸಿಂಗ್ ಮಗ ವಿಶಾಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಭಾರತದ ಕೊರೊನಾ ವ್ಯಾಕ್ಸಿನೇಷನ್‌ನ ಮೊದಲ ದಿನವಾದ ಶನಿವಾರದಂದು ಉತ್ತರ ಪ್ರದೇಶದಲ್ಲಿ 22,643 ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...