Homeಕರೋನಾ ತಲ್ಲಣಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ 46 ವರ್ಷದ ಸರ್ಕಾರಿ ಆಸ್ಪತ್ರೆಯ ಉದ್ಯೋಗಿಯೊಬ್ಬರು ಭಾನುವಾರ ಸಂಜೆ ಕೊರೊನಾ ಲಸಿಕೆ ಪಡೆದ 24 ಗಂಟೆಗಳ ನಂತರ ನಿಧನರಾಗಿದ್ದಾರೆ. ಆದರೆ ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ.

ಮೃತಪಟ್ಟವರನ್ನು ಆಸ್ಪತ್ರೆಯಲ್ಲಿ ವಾರ್ಡ್‌ ಬಾಯ್ ಆಗಿದ್ದ ಮಹಿಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ನಿಧನರಾಗುವುದಕ್ಕಿಂತ ಮುಂಚೆ ಅವರು ಎದೆ ನೋವು ಮತ್ತು ಉಸಿರಾಟದ ತೊಂದರೆಗಳ ಬಗ್ಗೆ ಹೇಳಿದ್ದರು ಎನ್ನಲಾಗಿದೆ. ಲಸಿಕೆ ಚುಚ್ಚುವುದಕ್ಕಿಂತ ಮೊದಲೆ ಅವರು ಅಸ್ವಸ್ಥರಾಗಿದ್ದರು ಎಂದು ಅವರ ಕುಟುಂಬ ಹೇಳಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

“ಅವರಿಗೆ ಶನಿವಾರ ಮಧ್ಯಾಹ್ನ ಲಸಿಕೆ ನೀಡಲಾಯಿತು. ಭಾನುವಾರ ಉಸಿರಾಟದ ತೊಂದರೆ ಮತ್ತು ಎದೆ ನೋವಿನ ಬಗ್ಗೆ ಹೇಳಿದ್ದರು. ಮರಣೋತ್ತರ ಪರೀಕ್ಷೆ ನಡೆಯಲಿದೆ, ಸಾವಿಗೆ ಕಾರಣಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ಇದು ವ್ಯಾಕ್ಸಿನೇಷನ್‌‌‌ನ ಪ್ರತಿಕೂಲ ಪರಿಣಾಮದಂತೆ ಕಾಣುತ್ತಿಲ್ಲ. ಅವರು ಶನಿವಾರ ರಾತ್ರಿ ಕೂಡಾ ಆಸ್ಪತ್ರೆಯಲ್ಲಿ ಡ್ಯೂಟಿ ಮಾಡಿದ್ದರು, ಆಗ ಯಾವುದೆ ಸಮಸ್ಯೆಗಳಿರಲಿಲ್ಲ” ಎಂದು ಮೊರಾದಾಬಾದ್‌ನ ಮುಖ್ಯ ವೈದ್ಯಕೀಯ ಅಧಿಕಾರಿ ಎಂ.ಸಿ.ಗಾರ್ಗ್ ಕಳೆದ ರಾತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಾವಿಗೆ ತಕ್ಷಣದ ಕಾರಣ ಹೃದಯ-ಶ್ವಾಸಕೋಶದ ಕಾಯಿಲೆ. ಅದರಿಂದಾಗಿ ”ಹೃದಯ ಆಘಾತ / ಸೆಪ್ಟಿಸೆಮಿಕ್ ಆಘಾತ” ಆಗಿದೆ ಎಂದು ಮರಣೋತ್ತರ ವರದಿಯು ಬಹಿರಂಗಪಡಿಸಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಮೂಲಗಳು ತಿಳಿಸಿವೆ.

“ನನ್ನ ತಂದೆಯನ್ನು ಮಧ್ಯಾಹ್ನ 1.30 ರ ಸುಮಾರಿಗೆ ವ್ಯಾಕ್ಸಿನೇಷನ್ ಕೇಂದ್ರದಿಂದ ನಾನು ಮನೆಗೆ ಕರೆತಂದೆ. ಅವರಿಗೆ ಉಸಿರುಗಟ್ಟುತ್ತಿದ್ದರು ಮತ್ತು ಕೆಮ್ಮುತ್ತಿದ್ದರು. ಅಲ್ಲದೆ ಅವರು ಸ್ವಲ್ಪ ನ್ಯುಮೋನಿಯಾ, ಸಾಮಾನ್ಯ ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದರು, ಆದರೆ ಮನೆಗೆ ಹಿಂದಿರುಗಿದ ನಂತರ ಇದು ಜಾಸ್ತಿಯಾಯಿತು” ಎಂದು ಮಹಿಪಾಲ್ ಸಿಂಗ್ ಮಗ ವಿಶಾಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಭಾರತದ ಕೊರೊನಾ ವ್ಯಾಕ್ಸಿನೇಷನ್‌ನ ಮೊದಲ ದಿನವಾದ ಶನಿವಾರದಂದು ಉತ್ತರ ಪ್ರದೇಶದಲ್ಲಿ 22,643 ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...