Homeಕರೋನಾ ತಲ್ಲಣಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ 46 ವರ್ಷದ ಸರ್ಕಾರಿ ಆಸ್ಪತ್ರೆಯ ಉದ್ಯೋಗಿಯೊಬ್ಬರು ಭಾನುವಾರ ಸಂಜೆ ಕೊರೊನಾ ಲಸಿಕೆ ಪಡೆದ 24 ಗಂಟೆಗಳ ನಂತರ ನಿಧನರಾಗಿದ್ದಾರೆ. ಆದರೆ ಅವರ ಸಾವಿಗೂ ವ್ಯಾಕ್ಸಿನೇಷನ್‌‌‌ಗೂ ಸಂಬಂಧವಿಲ್ಲ ಎಂದು ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ.

ಮೃತಪಟ್ಟವರನ್ನು ಆಸ್ಪತ್ರೆಯಲ್ಲಿ ವಾರ್ಡ್‌ ಬಾಯ್ ಆಗಿದ್ದ ಮಹಿಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ನಿಧನರಾಗುವುದಕ್ಕಿಂತ ಮುಂಚೆ ಅವರು ಎದೆ ನೋವು ಮತ್ತು ಉಸಿರಾಟದ ತೊಂದರೆಗಳ ಬಗ್ಗೆ ಹೇಳಿದ್ದರು ಎನ್ನಲಾಗಿದೆ. ಲಸಿಕೆ ಚುಚ್ಚುವುದಕ್ಕಿಂತ ಮೊದಲೆ ಅವರು ಅಸ್ವಸ್ಥರಾಗಿದ್ದರು ಎಂದು ಅವರ ಕುಟುಂಬ ಹೇಳಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

“ಅವರಿಗೆ ಶನಿವಾರ ಮಧ್ಯಾಹ್ನ ಲಸಿಕೆ ನೀಡಲಾಯಿತು. ಭಾನುವಾರ ಉಸಿರಾಟದ ತೊಂದರೆ ಮತ್ತು ಎದೆ ನೋವಿನ ಬಗ್ಗೆ ಹೇಳಿದ್ದರು. ಮರಣೋತ್ತರ ಪರೀಕ್ಷೆ ನಡೆಯಲಿದೆ, ಸಾವಿಗೆ ಕಾರಣಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ಇದು ವ್ಯಾಕ್ಸಿನೇಷನ್‌‌‌ನ ಪ್ರತಿಕೂಲ ಪರಿಣಾಮದಂತೆ ಕಾಣುತ್ತಿಲ್ಲ. ಅವರು ಶನಿವಾರ ರಾತ್ರಿ ಕೂಡಾ ಆಸ್ಪತ್ರೆಯಲ್ಲಿ ಡ್ಯೂಟಿ ಮಾಡಿದ್ದರು, ಆಗ ಯಾವುದೆ ಸಮಸ್ಯೆಗಳಿರಲಿಲ್ಲ” ಎಂದು ಮೊರಾದಾಬಾದ್‌ನ ಮುಖ್ಯ ವೈದ್ಯಕೀಯ ಅಧಿಕಾರಿ ಎಂ.ಸಿ.ಗಾರ್ಗ್ ಕಳೆದ ರಾತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಾವಿಗೆ ತಕ್ಷಣದ ಕಾರಣ ಹೃದಯ-ಶ್ವಾಸಕೋಶದ ಕಾಯಿಲೆ. ಅದರಿಂದಾಗಿ ”ಹೃದಯ ಆಘಾತ / ಸೆಪ್ಟಿಸೆಮಿಕ್ ಆಘಾತ” ಆಗಿದೆ ಎಂದು ಮರಣೋತ್ತರ ವರದಿಯು ಬಹಿರಂಗಪಡಿಸಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಮೂಲಗಳು ತಿಳಿಸಿವೆ.

“ನನ್ನ ತಂದೆಯನ್ನು ಮಧ್ಯಾಹ್ನ 1.30 ರ ಸುಮಾರಿಗೆ ವ್ಯಾಕ್ಸಿನೇಷನ್ ಕೇಂದ್ರದಿಂದ ನಾನು ಮನೆಗೆ ಕರೆತಂದೆ. ಅವರಿಗೆ ಉಸಿರುಗಟ್ಟುತ್ತಿದ್ದರು ಮತ್ತು ಕೆಮ್ಮುತ್ತಿದ್ದರು. ಅಲ್ಲದೆ ಅವರು ಸ್ವಲ್ಪ ನ್ಯುಮೋನಿಯಾ, ಸಾಮಾನ್ಯ ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದರು, ಆದರೆ ಮನೆಗೆ ಹಿಂದಿರುಗಿದ ನಂತರ ಇದು ಜಾಸ್ತಿಯಾಯಿತು” ಎಂದು ಮಹಿಪಾಲ್ ಸಿಂಗ್ ಮಗ ವಿಶಾಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಭಾರತದ ಕೊರೊನಾ ವ್ಯಾಕ್ಸಿನೇಷನ್‌ನ ಮೊದಲ ದಿನವಾದ ಶನಿವಾರದಂದು ಉತ್ತರ ಪ್ರದೇಶದಲ್ಲಿ 22,643 ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ : ಗಣರಾಜ್ಯೋತ್ಸವ ದಿನ ಮಾಂಸ, ಮೊಟ್ಟೆ, ಮೀನು ಮಾರಾಟ ನಿಷೇಧಿಸಿದ ಜಿಲ್ಲಾಡಳಿತ!

ಗಣರಾಜ್ಯೋತ್ಸವದಂದು ಜಿಲ್ಲೆಯಾದ್ಯಂತ ಮಾಂಸಾಹಾರಿ ವಸ್ತುಗಳ ಮಾರಾಟವನ್ನು ನಿಷೇಧಿಸಿ ಒಡಿಶಾದ ಕೊರಾಪುಟ್ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜನವರಿ 26, ಗಣರಾಜ್ಯೋತ್ಸವದಂದು ಮಾಂಸ, ಕೋಳಿ, ಮೊಟ್ಟೆ, ಮೀನು ಮತ್ತು ಇತರ ಮಾಂಸಾಹಾರಿ ವಸ್ತುಗಳ...

ಮೋದಿ ಸ್ವಾಗತಿಸುವ ಫ್ಲೆಕ್ಸ್ ಬೋರ್ಡ್‌; ದಂಡ ವಿಧಿಸಿದ ಬಿಜೆಪಿ ಆಡಳಿತದ ತಿರುವನಂತಪುರಂ ಮಹಾನಗರ ಪಾಲಿಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಂಬಂಧಿಸಿದಂತೆ ನಗರದಲ್ಲಿನ ಪಾದಚಾರಿ ಮಾರ್ಗಗಳಲ್ಲಿ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿದ್ದಕ್ಕಾಗಿ ಬಿಜೆಪಿ ಆಡಳಿತವಿರುವ ತಿರುವನಂತಪುರಂ ಮಹಾನಗರ ಪಾಲಿಕೆ ತನ್ನದೇ ಪಕ್ಷಕ್ಕೆ ದಂಡ ವಿಧಿಸಿದೆ. ಪೊಲೀಸ್ ಠಾಣೆಯಲ್ಲಿ ದೂರು...

ಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಕಾನೂನು ಸಮನ್ಸ್ ಕಳುಹಿಸಿತ್ತು. ಆದರೆ, ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ...

ನಕಾರಾತ್ಮಕ ಪರಿಣಾಮ ಕಡಿಮೆ ಮಾಡಲು ಸಾಮಾಜಿಕ ಮಾಧ್ಯಮ ನಿಯಂತ್ರಣ ಅಗತ್ಯ: ಕೈಲಾಶ್‌ ಸತ್ಯಾರ್ಥಿ

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಅವರು ಅಪ್ರಾಪ್ತರಿಗೆ ಸಾಮಾಜಿಕ ಮಾಧ್ಯಮದ ನಿಯಂತ್ರಣ ನಿರ್ಧಾರವನ್ನು ಬೆಂಬಲಿಸಿದ್ದಾರೆ. 'ಇದರ ನಕಾರಾತ್ಮಕ ಪರಿಣಾಮವನ್ನು ಕಡಿಮೆ ಮಾಡಲು, ಸಕಾರಾತ್ಮಕವಾಗಿ ನೈತಿಕ ಮೌಲ್ಯಗಳನ್ನು ಹರಡಲು ಮತ್ತು ಸಮುದಾಯಗಳನ್ನು...

ನ್ಯೂಸ್ ಲಾಂಡ್ರಿ ಸಂಪಾದಕಿ ಬಗ್ಗೆ ತಪ್ಪು ವರದಿ: ದೆಹಲಿ ಹೈಕೋರ್ಟ್ ಅಸಮಾಧಾನ

ನ್ಯೂಸ್ ಲಾಂಡ್ರಿ ವ್ಯವಸ್ಥಾಪಕ ಸಂಪಾದಕಿ ಮನೀಷಾ ಪಾಂಡೆ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ, ಕೋರ್ಟ್‌ನ ಮೌಖಿಕ ಅವಲೋಕನಗಳ ಕುರಿತು ಕೆಲ ಮಾಧ್ಯಮಗಳ ವರದಿ ಮಾಡಿದ ರೀತಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಅಸಮಾಧಾನ...

ಇಬ್ಬರು ಬಂಗಾಳಿ ವಲಸೆ ಕಾರ್ಮಿಕರ ಶವ ಪತ್ತೆ : ಒಬ್ಬರನ್ನು ಹಿಂದುತ್ವ ಗುಂಪು ಥಳಿಸಿ ಕೊಂದಿರುವ ಆರೋಪ

ಪ್ರತ್ಯೇಕ ರಾಜ್ಯಗಳಲ್ಲಿ ಇಬ್ಬರು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ದೇಶದಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರ ವಿರುದ್ದ ಹೆಚ್ಚುತ್ತಿರುವ ಹಿಂಸಾಚಾರದ ಭಾಗವಾಗಿ ಇಬ್ಬರನ್ನೂ ಕೊಲ್ಲಲಾಗಿದೆ ಎಂದು ಅವರ ಕುಟುಂಬಗಳು ಆರೋಪಿಸಿವೆ. ಆಂಧ್ರ ಪ್ರದೇಶದ...

ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ ತಡೆಗೆ ಮಾರ್ಗಸೂಚಿ ಕೋರಿ ಸುಪ್ರೀಂ ಮೊರೆ

ಸೈಬರ್ ವಂಚನೆಯಾದ ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿ (22.92 ಕೋಟಿ) ಕಳೆದುಕೊಂಡ 82 ವರ್ಷದ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್...

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ...

ಆಧಾರ್ ಕಾರ್ಡ್‌ ಇಲ್ಲದೆ ದಾಖಲಿಸಿಕೊಳ್ಳದ ವೈದ್ಯರು : ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಮಹಿಳೆ ಪರದಾಟ

ಆಧಾರ್ ಕಾರ್ಡ್‌ ಇಲ್ಲದ ಕಾರಣ ವೈದ್ಯರು ದಾಖಲಿಸಿಕೊಳ್ಳಲು ನಿರಾಕರಿಸಿದ್ದು, ಪರಿಣಾಮ ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಸಮುದಾಯದ ಮಹಿಳೆಯೊಬ್ಬರು ಪರದಾಡುತ್ತಿರುವ ಬಗ್ಗೆ ತೆಲಂಗಾಣದ ಕರೀಂನಗರ ಜಿಲ್ಲೆಯಿಂದ ವರದಿಯಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ...

ಲ್ಯಾಂಡ್‌ಲಾರ್ಡ್: ಜಮೀನ್ದಾರಿ ವ್ಯವಸ್ಥೆ, ಜಾತಿ ಪ್ರಶ್ನೆ ಮತ್ತು ಸಂವಿಧಾನ – ಕನ್ನಡ ಚಿತ್ರರಂಗದ ಒಂದು ಮಹತ್ವದ ತಿರುವು

ಕನ್ನಡ ಮುಖ್ಯವಾಹಿನಿ ಸಿನೆಮಾ ಅಪರೂಪಕ್ಕೊಮ್ಮೆ ಮಾತ್ರ ಸಮಾಜದ ಮೂಲಭೂತ ಪ್ರಶ್ನೆಗಳತ್ತ ನೇರವಾಗಿ ಮುಖ ಮಾಡುತ್ತದೆ. ಜಾತಿ, ಭೂಮಿ, ಅಧಿಕಾರ ಎಲ್ಲವನ್ನು ಒಟ್ಟಿಗೆ ಹಿಡಿದು ಪ್ರಶ್ನಿಸುವ ಚಿತ್ರಗಳು ಇನ್ನೂ ವಿರಳ. ನಿರ್ದೇಶಕ–ಕಥಾಲೇಖಕ ಜಡೆಶ್ ಕೆ....