Homeಕರೋನಾ ತಲ್ಲಣಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ಲಸಿಕೆಯ ಪರಿಣಾಮವನ್ನು ಪರೀಕ್ಷಿಸಲು ಸ್ವತಃ ನಾನೇ ಲಸಿಕೆ ತೆಗೆದುಕೊಳ್ಳಬೇಕೆನ್ನುವುದಾದರೆ, ಸಂತೋಷದಿಂದ ತೆಗೆದುಕೊಳ್ಳುತ್ತೇನೆ” ಎಂದು ಸಚಿವರು ಹೇಳಿದರು.

- Advertisement -
- Advertisement -

ಕೊರೊನಾ ಲಸಿಕೆ ಬಿಡುಗಡೆ ಮಾಡಲು ಇನ್ನೂ ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ. ಮುಂದಿನ ವರ್ಷದ ಮೊದಲ ತ್ರೈಮಾಸಿಕದ ವೇಳೆಗೆ ಇದು ಸಿದ್ಧವಾಗಬಹುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಸಂವಾದ ಕಾರ್ಯಕ್ರಮವಾದ ‘ಸಂಡೇ ಸಂವಾದ’ದಲ್ಲಿ ಸಚಿವರು ಈ ಮಾತನ್ನು ಹೇಳಿದರು.

ಅತಿದೊಡ್ಡ ಫಾರ್ಮಾ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೊರೊನಾ ಲಸಿಕೆ ಪ್ರಯೋಗವನ್ನು ಬ್ರಿಟಿಷ್ ನಿಯಂತ್ರಕರಿಂದ ಹಿಂದಕ್ಕೆ ಪಡೆದು, ನಂತರ ಮತ್ತೆ ಪುನರಾರಂಭಿಸುವುದಾಗಿ ಘೋಷಿಸಿದ ಒಂದು ದಿನದ ನಂತರ ಸಚಿವರು ಈ ಹೇಳಿಕೆಯನ್ನು ನೀಡಿದ್ದಾರೆ.

“ಲಸಿಕೆಯ ಮಾನವ ಪ್ರಯೋಗಗಳನ್ನು ನಡೆಸುವಲ್ಲಿ ಸರ್ಕಾರ ಸಂಪೂರ್ಣ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ಸಚಿವರು ಭರವಸೆ ನೀಡಿದರು. “ಲಸಿಕೆ ಸುರಕ್ಷತೆ, ವೆಚ್ಚ, ಈಕ್ವಿಟಿ, ಕೋಲ್ಡ್-ಚೈನ್ ಅವಶ್ಯಕತೆಗಳು, ಉತ್ಪಾದನಾ ಸಮಯಸೂಚಿಗಳು ಇತ್ಯಾದಿಗಳ ಬಗ್ಗೆಯೂ ತೀವ್ರವಾಗಿ ಚರ್ಚಿಸಲಾಗುತ್ತಿದೆ” ಎಂದು ಹರ್ಷವರ್ಧನ್ ಹೇಳಿದರು.

ಇದನ್ನೂ ಓದಿ: ಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಸಹಕಾರದಿಂದ ಹೊರಗೆ: ಅಮೇರಿಕಾ ನಿರ್ಧಾರ

“ಲಸಿಕೆ, ಒಮ್ಮೆ ಸಿದ್ಧವಾದರೆ, ಅದು ಹೆಚ್ಚು ಅಗತ್ಯವಿರುವವರಿಗೆ ಲಭ್ಯವಾಗಲಿದೆ. ಆದರೆ ಲಸಿಕೆಯ ಮೊದಲ ಪ್ರಮಾಣವನ್ನು ಸ್ವೀಕರಿಸಲು ಸಂತೋಷವಾಗುತ್ತದೆ” ಎಂದು ಸಚಿವರು ಹೇಳಿದರು.

ಸೋಷಿಯಲ್ ಮೀಡಿಯಾ ಬಳಕೆದಾರರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿ, ಕೊರೊನಾಗೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಸಚಿವರು ತಮ್ಮ ಒಂದು ಗಂಟೆ ಸಂವಾದದಲ್ಲಿ ಚರ್ಚಿಸಿದರು.

* ಭಾರತದಲ್ಲಿ ಹಲವಾರು ಲಸಿಕೆ ಪ್ರಯೋಗಗಳು ನಡೆಯುತ್ತಿವೆ. ಪ್ರಸ್ತುತ, ಯಾವುದು ಹೆಚ್ಚು ಪರಿಣಾಮಕಾರಿಯಾಗಿ ಹೊರಹೊಮ್ಮುತ್ತದೆ ಎಂಬುದನ್ನು ನಾವು ಊಹಿಸಲು ಸಾಧ್ಯವಿಲ್ಲ. ಆದರೆ 2021 ರ ಮೊದಲ ತ್ರೈಮಾಸಿಕದ ವೇಳೆಗೆ ನಾವು ಖಂಡಿತವಾಗಿಯೂ ಅದರ ಫಲಿತಾಂಶಗಳನ್ನು ತಿಳಿಯುತ್ತೇವೆ ಎಂದು ಸಚಿವ ಹರ್ಷವರ್ಧನ್ ಹೇಳಿದರು.

* ಲಸಿಕೆ ತಜ್ಞರ ಗುಂಪನ್ನು ಸ್ಥಾಪಿಸಲಾಗಿದೆ. ಇದು ಸಂಪೂರ್ಣ ಪ್ರಕ್ರಿಯೆಯನ್ನು ನೋಡಿಕೊಳ್ಳುತ್ತಿದೆ. ಪ್ರಾಯೋಗಿಕ ಫಲಿತಾಂಶಗಳನ್ನು ಮೌಲ್ಯಮಾಪನ ಮಾಡಲಾಗಿದ್ದರೂ, ಸಮಯ ವ್ಯರ್ಥವಾಗದಂತೆ ತಯಾರಕರಿಗೆ ಸಾಮೂಹಿಕ ಉತ್ಪಾದನೆಯನ್ನು ಪ್ರಾರಂಭಿಸಲು ಸೂಚಿಸಲಾಗುವುದು ಎಂದು ಸಚಿವರು ಹೇಳಿದರು.

* ಲಸಿಕೆಯ ಪರಿಣಾಮವನ್ನು ಪರೀಕ್ಷಿಸಲು ಸ್ವತಃ ನಾನೇ ಲಸಿಕೆ ತೆಗೆದುಕೊಳ್ಳಬೇಕೆನ್ನುವುದಾದರೆ, ಸಂತೋಷದಿಂದ ತೆಗೆದುಕೊಳ್ಳುತ್ತೇನೆ” ಎಂದು ಸಚಿವರು ಹೇಳಿದರು.


ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...