Homeಮುಖಪುಟಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಲಾಕ್‌ಡೌನ್‌ ಘೋಷಿಸಿ ನೂರು ದಿನಗಳಾಗುತ್ತಾ ಬರುತ್ತಿದೆ. ಸರ್ಕಾರಗಳು ಜನರ ಕಷ್ಟ ಕಡಿಮೆ ಮಾಡಲು ಏನೆಲ್ಲಾ ಪ್ಯಾಕೇಜ್‌ಗಳು ಘೋಷಿಸಿದರೂ ಜನರ ಕಷ್ಟ ಕಡಿಮೆಯಾಗಿಲ್ಲ. ಅದಕ್ಕೆ ನೇರ ಉದಾಹರಣೆಯೆಂದರೆ ಉತ್ತರ ಪ್ರದೇಶದ ಕಾರ್ಮಿಕರು “ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ” ಎಂದು ನಿರ್ಧರಿಸಿ ಕೆಲಸಕ್ಕೆ ಮರಳುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಕ್ ಡೌನ್ ಸಮಯದಲ್ಲಿ ಹಿಂದಿರುಗಿದ ಉತ್ತರ ಪ್ರದೇಶದ 30 ಲಕ್ಷಕ್ಕೂ ಹೆಚ್ಚಿನ ವಲಸೆ ಕಾರ್ಮಿಕರು ಮತ್ತೆ ಕೆಲಸಕ್ಕೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಹಲವು ನಗರಗಳ ಬಸ್‌ ನಿಲ್ದಾಣದಲ್ಲಿ ಕಾರ್ಮಿಕರು ಸಾಲುಗಟ್ಟಿ ನಿಂತಿದ್ದಾರೆ.

ಅನ್ಸಾರಿ ಎಂಬುವವರು ಮುಂಬೈನಲ್ಲಿ ಕಾರ್ಖಾನೆಯ ಕೆಲಸಗಾರರಾಗಿದ್ದು, ಅವರ ದೊಡ್ಡ ಟೈಲರಿಂಗ್ ಘಟಕವು ಇನ್ನೂ ಮುಚ್ಚಲ್ಪಟ್ಟಿದೆ. ಅವರು ಕೇವಲ ಒಂದು ತಿಂಗಳ ಹಿಂದೆ ಮನೆಗೆ ಮರಳಿದ್ದಾರೆ ಎಂದು ಹೇಳುತ್ತಾರೆ. “ಯುಪಿಯಲ್ಲಿ ಉದ್ಯೋಗವಿದ್ದರೆ, ನಾನು ಹಿಂತಿರುಗುವುದಿಲ್ಲ. ನನ್ನ ಕಂಪನಿ ಇನ್ನೂ ಪ್ರಾರಂಭವಾಗಿಲ್ಲ ಆದರೆ ನಾನು ಮಾಡಬಹುದಾದ ಯಾವುದೇ ಕೆಲಸವನ್ನು ಹುಡುಕಲು ಹಿಂದಿರುಗುತ್ತಿದ್ದೇನೆ. ಹಸಿವುಗಿಂತ ಕರೋನಾ ಉತ್ತಮವಾಗಿದೆ. ನನ್ನ ಮಕ್ಕಳು ಹಸಿದು ಸಾಯುವುದಕ್ಕಿಂತ ನಾನು ಕೊರೊನಾದಿಂದ ಸಾಯುವುದು ಉತ್ತಮ” ಎಂದು ಅನ್ಸಾರಿ ಬಸ್ ಹತ್ತುವ ಮೊದಲು ಹೇಳುತ್ತಾರೆ.

ಕೋಲ್ಕತ್ತ ಮೂಲದ ಸಂಸ್ಥೆಯೊಂದರಲ್ಲಿ ತಂತ್ರಜ್ಞರಾಗಿರುವ ಪ್ರಸಾದ್ ಅವರು ಹೋಳಿ ಪ್ರಯುಕ್ತ ಮನೆಗೆ ಬಂದಿದ್ದರು. ಆದರೆ ಲಾಕ್‌ಡೌನ್‌ ಘೋಷಣೆಯಾದ್ದರಿಂದ ಯುಪಿಯಲ್ಲಿ ಸಿಲುಕಿಕೊಂಡರು. ಅವರ ಸಂಸ್ಥೆಯು ಮತ್ತೆ ತೆರೆಯಲ್ಪಟ್ಟಿದೆ ಹಾಗಾಗಿ ವಾಪಸ್‌ ಕೆಲಸಕ್ಕೆ ಮರಳಿದ್ದೇನೆ ಎನ್ನುತ್ತಾರೆ. “ನನಗೆ ಕೆಲಸಕ್ಕೆ ಹೋಗಲು ಭಯವಾಗುತ್ತಿದೆ. ಆದರೆ ಇಲ್ಲಿಯೇ ಇರುವುದು ಅದಕ್ಕಿಂತಲೂ ಭಯವಾಗುತ್ತದೆ. ಏಕೆಂದರೆ ನಾನು ಏನು ತಿನ್ನಲ್ಲಿ? ನನ್ನ ಕುಟುಂಬವನ್ನು ಹೇಗೆ ಪೋಷಿಸಲಿ ಎಂದು ಪ್ರಶ್ನಿಸುತ್ತಾರೆ.

ದೂರದ ಮತ್ತು ಹಿಂದುಳಿದ ಪೂರ್ವ ಯುಪಿ ಜಿಲ್ಲೆಯಾದ ಸಿದ್ಧಾರ್ಥ್ ನಗರದಿಂದ ಗರಿಷ್ಠ ಸಂಖ್ಯೆಯ ವಲಸೆ ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದಾರೆ. ಎಸಿ ರಿಪೇರಿ ತಂತ್ರಜ್ಞ ಮೊಹಮ್ಮದ್ ಅಬಿದ್, ತಾನು ಮುಂಬೈಗೆ ಹಿಂದಿರುಗುತ್ತಿದ್ದೇನೆ ಎಂದು ಹೇಳುತ್ತಾರೆ. ಏಕೆಂದರೆ ಸರ್ಕಾರದ ಯಾವುದೇ ಯೋಜನೆಗಳು ಮತ್ತು ಭರವಸೆಗಳು ಅವರನ್ನು ತಲುಪಿಲ್ಲ. “ಮುಂಬೈನಲ್ಲಿ ಉತ್ತಮ ಹಣ ಸಿಗುತ್ತದೆ ಆದರೆ ನನಗೆ ಇಲ್ಲಿ (ಉತ್ತರಪ್ರದೇಶದಲ್ಲಿ) ಬದುಕು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಸರ್ಕಾರಗಳು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದರೂ ಅವು ನಮ್ಮನ್ನು ತಲುಪುತ್ತಿಲ್ಲ. ಇಲ್ಲಿ ನಿರುದ್ಯೋಗಿಯಾಗಿಬೇಕು. ಇಲ್ಲಿ ಯಾವುದೇ ಕೆಲಸವಿಲ್ಲ. ನೀವು ಹೋಗಿ ಯಾರ ಬಳಿಯಾದರೂ ಕೆಲಸ ಕೇಳಿ, ಅವರು ಇಲ್ಲ ಎನ್ನುತ್ತಾರೆ ಎಂದು ಅಬಿದ್ ಹೇಳಿದ್ದಾರೆ.

ಒಟ್ಟಿನಲ್ಲಿ ಜನರ ಜೀವನ ಬಂಡಿ ಸಾಗಲು ಅವರ ಹೆಚ್ಚುತ್ತಿರುವ ಕೊರೊನಾ ವೈರಸ್ ಮಧ್ಯೆಯೂ ಕೆಲಸ ಹುಡುಕಿ ವಲಸೆ ಹೋಗಬೇಕಾದ ಪರಿಸ್ಥಿತಿ ಉದ್ಬವಿಸಿದೆ.


ಇದನ್ನೂ ಓದಿ: ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....