Homeಮುಖಪುಟಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ: ಕೆಲಸಕ್ಕೆ ಮರಳಿದ ಯುಪಿ ಕಾರ್ಮಿಕರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಲಾಕ್‌ಡೌನ್‌ ಘೋಷಿಸಿ ನೂರು ದಿನಗಳಾಗುತ್ತಾ ಬರುತ್ತಿದೆ. ಸರ್ಕಾರಗಳು ಜನರ ಕಷ್ಟ ಕಡಿಮೆ ಮಾಡಲು ಏನೆಲ್ಲಾ ಪ್ಯಾಕೇಜ್‌ಗಳು ಘೋಷಿಸಿದರೂ ಜನರ ಕಷ್ಟ ಕಡಿಮೆಯಾಗಿಲ್ಲ. ಅದಕ್ಕೆ ನೇರ ಉದಾಹರಣೆಯೆಂದರೆ ಉತ್ತರ ಪ್ರದೇಶದ ಕಾರ್ಮಿಕರು “ಹಸಿವಿಗಿಂತ ಕೊರೊನಾ ವೈರಸ್‌ ಉತ್ತಮ” ಎಂದು ನಿರ್ಧರಿಸಿ ಕೆಲಸಕ್ಕೆ ಮರಳುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಕ್ ಡೌನ್ ಸಮಯದಲ್ಲಿ ಹಿಂದಿರುಗಿದ ಉತ್ತರ ಪ್ರದೇಶದ 30 ಲಕ್ಷಕ್ಕೂ ಹೆಚ್ಚಿನ ವಲಸೆ ಕಾರ್ಮಿಕರು ಮತ್ತೆ ಕೆಲಸಕ್ಕೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಹಲವು ನಗರಗಳ ಬಸ್‌ ನಿಲ್ದಾಣದಲ್ಲಿ ಕಾರ್ಮಿಕರು ಸಾಲುಗಟ್ಟಿ ನಿಂತಿದ್ದಾರೆ.

ಅನ್ಸಾರಿ ಎಂಬುವವರು ಮುಂಬೈನಲ್ಲಿ ಕಾರ್ಖಾನೆಯ ಕೆಲಸಗಾರರಾಗಿದ್ದು, ಅವರ ದೊಡ್ಡ ಟೈಲರಿಂಗ್ ಘಟಕವು ಇನ್ನೂ ಮುಚ್ಚಲ್ಪಟ್ಟಿದೆ. ಅವರು ಕೇವಲ ಒಂದು ತಿಂಗಳ ಹಿಂದೆ ಮನೆಗೆ ಮರಳಿದ್ದಾರೆ ಎಂದು ಹೇಳುತ್ತಾರೆ. “ಯುಪಿಯಲ್ಲಿ ಉದ್ಯೋಗವಿದ್ದರೆ, ನಾನು ಹಿಂತಿರುಗುವುದಿಲ್ಲ. ನನ್ನ ಕಂಪನಿ ಇನ್ನೂ ಪ್ರಾರಂಭವಾಗಿಲ್ಲ ಆದರೆ ನಾನು ಮಾಡಬಹುದಾದ ಯಾವುದೇ ಕೆಲಸವನ್ನು ಹುಡುಕಲು ಹಿಂದಿರುಗುತ್ತಿದ್ದೇನೆ. ಹಸಿವುಗಿಂತ ಕರೋನಾ ಉತ್ತಮವಾಗಿದೆ. ನನ್ನ ಮಕ್ಕಳು ಹಸಿದು ಸಾಯುವುದಕ್ಕಿಂತ ನಾನು ಕೊರೊನಾದಿಂದ ಸಾಯುವುದು ಉತ್ತಮ” ಎಂದು ಅನ್ಸಾರಿ ಬಸ್ ಹತ್ತುವ ಮೊದಲು ಹೇಳುತ್ತಾರೆ.

ಕೋಲ್ಕತ್ತ ಮೂಲದ ಸಂಸ್ಥೆಯೊಂದರಲ್ಲಿ ತಂತ್ರಜ್ಞರಾಗಿರುವ ಪ್ರಸಾದ್ ಅವರು ಹೋಳಿ ಪ್ರಯುಕ್ತ ಮನೆಗೆ ಬಂದಿದ್ದರು. ಆದರೆ ಲಾಕ್‌ಡೌನ್‌ ಘೋಷಣೆಯಾದ್ದರಿಂದ ಯುಪಿಯಲ್ಲಿ ಸಿಲುಕಿಕೊಂಡರು. ಅವರ ಸಂಸ್ಥೆಯು ಮತ್ತೆ ತೆರೆಯಲ್ಪಟ್ಟಿದೆ ಹಾಗಾಗಿ ವಾಪಸ್‌ ಕೆಲಸಕ್ಕೆ ಮರಳಿದ್ದೇನೆ ಎನ್ನುತ್ತಾರೆ. “ನನಗೆ ಕೆಲಸಕ್ಕೆ ಹೋಗಲು ಭಯವಾಗುತ್ತಿದೆ. ಆದರೆ ಇಲ್ಲಿಯೇ ಇರುವುದು ಅದಕ್ಕಿಂತಲೂ ಭಯವಾಗುತ್ತದೆ. ಏಕೆಂದರೆ ನಾನು ಏನು ತಿನ್ನಲ್ಲಿ? ನನ್ನ ಕುಟುಂಬವನ್ನು ಹೇಗೆ ಪೋಷಿಸಲಿ ಎಂದು ಪ್ರಶ್ನಿಸುತ್ತಾರೆ.

ದೂರದ ಮತ್ತು ಹಿಂದುಳಿದ ಪೂರ್ವ ಯುಪಿ ಜಿಲ್ಲೆಯಾದ ಸಿದ್ಧಾರ್ಥ್ ನಗರದಿಂದ ಗರಿಷ್ಠ ಸಂಖ್ಯೆಯ ವಲಸೆ ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದಾರೆ. ಎಸಿ ರಿಪೇರಿ ತಂತ್ರಜ್ಞ ಮೊಹಮ್ಮದ್ ಅಬಿದ್, ತಾನು ಮುಂಬೈಗೆ ಹಿಂದಿರುಗುತ್ತಿದ್ದೇನೆ ಎಂದು ಹೇಳುತ್ತಾರೆ. ಏಕೆಂದರೆ ಸರ್ಕಾರದ ಯಾವುದೇ ಯೋಜನೆಗಳು ಮತ್ತು ಭರವಸೆಗಳು ಅವರನ್ನು ತಲುಪಿಲ್ಲ. “ಮುಂಬೈನಲ್ಲಿ ಉತ್ತಮ ಹಣ ಸಿಗುತ್ತದೆ ಆದರೆ ನನಗೆ ಇಲ್ಲಿ (ಉತ್ತರಪ್ರದೇಶದಲ್ಲಿ) ಬದುಕು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಸರ್ಕಾರಗಳು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದರೂ ಅವು ನಮ್ಮನ್ನು ತಲುಪುತ್ತಿಲ್ಲ. ಇಲ್ಲಿ ನಿರುದ್ಯೋಗಿಯಾಗಿಬೇಕು. ಇಲ್ಲಿ ಯಾವುದೇ ಕೆಲಸವಿಲ್ಲ. ನೀವು ಹೋಗಿ ಯಾರ ಬಳಿಯಾದರೂ ಕೆಲಸ ಕೇಳಿ, ಅವರು ಇಲ್ಲ ಎನ್ನುತ್ತಾರೆ ಎಂದು ಅಬಿದ್ ಹೇಳಿದ್ದಾರೆ.

ಒಟ್ಟಿನಲ್ಲಿ ಜನರ ಜೀವನ ಬಂಡಿ ಸಾಗಲು ಅವರ ಹೆಚ್ಚುತ್ತಿರುವ ಕೊರೊನಾ ವೈರಸ್ ಮಧ್ಯೆಯೂ ಕೆಲಸ ಹುಡುಕಿ ವಲಸೆ ಹೋಗಬೇಕಾದ ಪರಿಸ್ಥಿತಿ ಉದ್ಬವಿಸಿದೆ.


ಇದನ್ನೂ ಓದಿ: ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...